25.2 C
ಪುತ್ತೂರು, ಬೆಳ್ತಂಗಡಿ
August 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ. ಯು. ಸಿ ವಿದ್ಯಾರ್ಥಿಗಳಿಗೆ “Ignite 2026” ಓರಿಯೆಂಟೇಷನ್ ಕಾರ್ಯಕ್ರಮ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ. ವಿದ್ಯಾರ್ಥಿಗಳಿಗಾಗಿ “Ignite 2026” ಎಂಬ ಶೀರ್ಷಿಕೆಯಲ್ಲಿ ಓರಿಯೆಂಟೇಷನ್ ಕಾರ್ಯಕ್ರಮ ನಡೆಯಿತು. ಹೊಸ ವಿದ್ಯಾರ್ಥಿಗಳ ಶೈಕ್ಷಣಿಕ ಪಯಣಕ್ಕೆ ಸ್ಪೂರ್ತಿ ತುಂಬುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದರು.

ಕಾರ್ಯಕ್ರಮವನ್ನು ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಪಿ. ಕುಶಾಲಪ್ಪ ಗೌಡ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, “ವಿದ್ಯಾರ್ಥಿಗಳು ಕೇವಲ ಅಂಕಗಳಿಗೆ ಮಾತ್ರ ಸೀಮಿತವಾಗದೆ ಸಂಸ್ಕಾರಯುತ ಶಿಕ್ಷಣದ ಮೂಲಕ ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಂಡು ಸಮಾಜಕ್ಕೆ ಆದರ್ಶ ಪ್ರಜೆಗಳಾಗಬೇಕು” ಎಂದು ಹೇಳಿದರು. ಶಿಕ್ಷಣದ ಜೊತೆಗೆ ಶಿಸ್ತು, ಮೌಲ್ಯಗಳು ಮತ್ತು ಮಾನವೀಯತೆ ವಿದ್ಯಾರ್ಥಿ ಜೀವನದಲ್ಲಿ ಮಹತ್ವದ್ದಾಗಿವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 600 ಕ್ಕಿಂತ ಅಧಿಕ ಅಂಕಗಳನ್ನು ಪಡೆದು ವಾಣಿ ಪದವಿ ಪೂರ್ವ ಕಾಲೇಜಿಗೆ ಪ್ರವೇಶ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಮುಖ್ಯ ಅತಿಥಿಗಳಾಗಿ ವಾಣಿ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಗೌಡ ಹಾಗೂ ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕಾಲೇಜಿನ ಆಡಳಿತಾಧಿಕಾರಿ ಪ್ರಸಾದ್ ಕುಮಾರ್ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಅವರು ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ನೀಡಿದರು.

ಪದವಿ ಪೂರ್ವ ಶಿಕ್ಷಣದ ಮಹತ್ವ, ಕಾಲೇಜಿನ ನಿಯಮಾವಳಿ, ಅಧ್ಯಯನ ಕ್ರಮ, ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ, ಸಮಯದ ಸದುಪಯೋಗ ಹಾಗೂ ವಿದ್ಯಾರ್ಥಿ ಜೀವನದ ಗುರಿ ಕುರಿತು ಮಾಹಿತಿ ನೀಡಿದರು.

ವಿದ್ಯಾರ್ಥಿಗಳು ಆತ್ಮವಿಶ್ವಾಸ ಮತ್ತು ಪರಿಶ್ರಮದಿಂದ ಶಿಕ್ಷಣದಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ಉಪನ್ಯಾಸಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಆರಂಭದಲ್ಲಿ ಗಣಿತ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಹೇಮಲತಾ ಸ್ವಾಗತಿಸಿದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ರವಿ ಶಂಕರ್ ಧನ್ಯವಾದ ಸಲ್ಲಿಸಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಮಹಾಬಲ ಗೌಡ ಕಾರ್ಯಕ್ರಮ ನಿರೂಪಿಸಿದರು.

Related posts

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ: ಕನ್ಯಾಡಿಯ ಕೆ.ವಿ ಸ್ಟೋರ್ಸ್ ನಲ್ಲಿ ಸಿಹಿ ವಿತರಣೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ. ಪ್ರಾ. ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಎ.30-ಮೇ.3: ಮಾನ್ಯ ಸತ್ಯಚಾವಡಿ ತರವಾಡು ಮನೆಯ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಸಮಾಲೋಚನೆ ಸಭೆ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಅಕ್ಷರೋತ್ಸವ: ನಾಡು – ನುಡಿಯ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

Suddi Udaya

ಕಡಿರುದ್ಯಾವರ ಹೇಡ್ಯ ನಿವಾಸಿ ಎಸ್.ಪಿ ಮ್ಯಾಥ್ಯೂ ನಿಧನ

Suddi Udaya

ಕಡಿರುದ್ಯಾವರ ಮುಸ್ತಾಫರ ಮನೆಗೆ ನುಗ್ಗಿದ ಕಳ್ಳರು: ರೂ.1.71 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 1.20 ಲಕ್ಷ ನಗದು ಕಳವು

Suddi Udaya
error: Content is protected !!