ಬೆಳ್ತಂಗಡಿ: ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವ ಪೋಟೋಗ್ರಾಫರ್ ಮೃತಪಟ್ಟ ಘಟನೆ ಸೋಮಂತಡ್ಕ ಅಗರಿ ಕ್ರಾಸ್ ಬಳಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕಳೆಂಜ ಅಶ್ವಥಡಿ ಮನೆಯ ನೋಣಯ್ಯ ಗೌಡ ಅವರ ಪುತ್ರ, ಯುವ ಪೋಟೋಗ್ರಾಫರ್ ಗಣೇಶ್ ಗೌಡ (36ವ ) ಮೃತ ದುರ್ದೈವಿ.
ಘಟನೆ ವಿವರ:ಮೇ 24ರಂದು ಬೆಂಗಳೂರಿನಿಂದ ಉಜಿರೆ ಕಡೆ ಚಲಿಸುತ್ತಿದ್ದ ಕಾರು ಸೋಮಂತಡ್ಕ ಬಳಿ ಗಣೇಶ್ ಗೌಡ ಅವರು ಚಲಿಸುತ್ತಿದ್ದ ಬೈಕಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಗಣೇಶ್ ಗೌಡ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಪ್ರಮಾಣದ ಗಾಯವಾಗಿದ್ದು, ಕೂಡಲೇ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು(ಮೇ 25) ಮಧ್ಯಾಹ್ನ ನಿಧನರಾಗಿದ್ದಾರೆ.
ಬೆಳ್ತಂಗಡಿ ಪೋಲಿಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತಿದ್ದಾರೆ.












