24.7 C
ಪುತ್ತೂರು, ಬೆಳ್ತಂಗಡಿ
August 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಡ್ಗಿಚ್ಚು, ಹುಲಿ ಗಣತಿ ಹಿನ್ನೆಲೆ ಪ್ರವಾಸಿಗರ ಸಂಚಾರಕ್ಕೆ ವಿಧಿಸಿದ್ದ ನಿಷೇಧ ತೆರವು: ಜೂ.1 ರಿಂದ ಪ್ರವಾಸಿಗರಿಗೆ ಚಾರಣ, ಜಲಪಾತ ವೀಕ್ಷಣೆಗೆ ಅವಕಾಶ

ಬೆಳ್ತಂಗಡಿ: ತಾಲೂಕಿನ ಚಾರಣ ಸ್ಥಳ, ಪ್ರಮುಖ ಜಲಪಾತ ಜೂನ್ 1ರಿಂದ ಪ್ರವಾಸಿಗರ ವೀಕ್ಷಣೆಗೆ ತೆರೆದುಕೊಳ್ಳಲಿದೆ. ಕಳೆದ ಜನವರಿಯಲ್ಲಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದಿಂದ ನೇತ್ರಾವತಿ ಪೀಕ್, ಬಂಡಾಜೆ ಜಲಪಾತ, ಗಡಾಯಿಕಲ್ಲು ಮೊದಲಾದ ಸ್ಥಳಗಳಿಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿತ್ತು.

ಬೇಸಿಗೆಯಲ್ಲಿ ಬೆಂಕಿ ಪ್ರಕರಣ, ಕಾಡ್ಗಿಚ್ಚು ಇತ್ಯಾದಿ ಅನಾಹುತಗಳು ನಡೆಯದಂತೆ ಹಾಗೂ ಹುಲಿಗಣತಿ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು. ತಾಲೂಕಿನ ಮಲವಂತಿಗೆ ಗ್ರಾಮ ಅತಿ ಹೆಚ್ಚು ಪ್ರೇಕ್ಷಣೀಯ ಸ್ಥಳಗಳನ್ನು ಹೊಂದಿದೆ. ಇದು ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿದೆ. ಅರಣ್ಯ ಪ್ರದೇಶವಾದ ಇಲ್ಲಿಗೆ ಚಾರಣಿಗರು, ಜಲಪಾತ ವೀಕ್ಷಕರು ಆಗಮಿಸುತ್ತಾರೆ. ಆದರೆ ಬೇಸಿಗೆಯಲ್ಲಿ ಈ ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಪ್ರಕರಣಗಳ ಭಯ ಸಾಕಷ್ಟಿದೆ. ಇಲ್ಲಿ ಒಂದು ಕಿಡಿ ಬೆಂಕಿ ಬಿದ್ದರೂ ಅದು ತಕ್ಷಣ ಇಡೀ ಪರಿಸರವನ್ನು ವ್ಯಾಪಿಸುತ್ತದೆ. ಪ್ರವಾಸಿಗರಿಗೆ ಎಷ್ಟೇ ಎಚ್ಚರಿಕೆ ನೀಡಿದರೂ ಅದನ್ನು ಗಣನೆಗೆ ತೆಗೆದುಕೊಳ್ಳದೇ ಇರುವುದರಿಂದ ಅನಾಹುತಗಳು ಉಂಟಾಗುತ್ತವೆ. ಈ ಕಾರಣದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಇಲಾಖೆ ನಿಷೇಧ ಹೇರಿತ್ತು.

ಕಡಮ ಗುಂಡಿ ಹಾಗೂ ಬೊಳ್ಳೆ ಜಲಪಾತಗಳು ಈಗಾಗಲೇ ಸಾರ್ವಜನಿಕರ ವೀಕ್ಷಣೆಗೆ ತೆರೆದುಕೊಂಡಿವೆ. ಖಾಸಗಿ ಸ್ಥಳದಲ್ಲಿರುವ ಎರ್ಮಾಯಿ ಜಲಪಾತ ವೀಕ್ಷಣೆಗೆ ಯಾವುದೇ ನಿರ್ಬಂಧ ಇರಲಿಲ್ಲ.

ಮಳೆ ಸಹಕಾರ: ಈ ಬಾರಿ ಆಗಾಗ ಸುರಿದ ಬೇಸಿಗೆ ಮಳೆಯಿಂದ ಅರಣ್ಯ ಪ್ರದೇಶವೆಲ್ಲ ಒದ್ದೆಯಾಗಿದ್ದು, ಹಸಿರಿನಿಂದ ನಳನಳಿಸುತ್ತಿದೆ. ಅಲ್ಲಿನ ಹಳ್ಳ, ತೊರೆಗಳಲ್ಲಿ ಸಾಮಾನ್ಯ ಪ್ರಮಾಣದ ನೀರ ಹರಿವು ಆರಂಭವಾಗಿದೆ. ಇದರಿಂದ ಪ್ರಸ್ತುತ ಬೆಂಕಿ ಪ್ರಕರಣ, ಕಾಡ್ಗಿಚ್ಚಿನ ಭಯ ದೂರವಾಗಿದ್ದು ಪ್ರವಾಸಿಗರಿಗೆ ಅವಕಾಶ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಮಳೆಗಾಲ ಆರಂಭವಾಗಲಿದ್ದು, ಆ ಸಮಯ ಜಲಪಾತಗಳು ಹೆಚ್ಚಿನ ನೀರಿನೊಂದಿಗೆ ತಮ್ಮ ಸೌಂದರ್ಯವನ್ನು ಇನ್ನಷ್ಟು ಹೆಚ್ಚಿಸಿಕೊಳ್ಳಲಿವೆ.

Related posts

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಸಾರ್ವಜನಿಕರು ಬೆಂಬಲ ನೀಡಬೇಕು: ಧರ್ಮಗುರು ಫಾ. ಆದರ್ಶ್ ಜೋಸೆಫ್

Suddi Udaya

ಪಟ್ರಮೆಯ ದೀಪಕ್ ಎ.ಎಸ್ ರವರು ಸಲ್ಲಿಸಿದ ಆರ್ ಟಿಐ ಅರ್ಜಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯಾಲಯಾದಿಂದ ಪ್ರತಿಕ್ರಿಯೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಸಾಮಾಜಿಕ ಜಾಲತಾಣ ನೂತನ ಸಂಚಾಲಕರಾಗಿ ಜಯಂತ್ ಜಾನು

Suddi Udaya

ಮೊಗ್ರು ನಿವಾಸಿ ಶತಾಯುಷಿ ನೀಲಮ್ಮ ನಿಧನ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕ ನಂದಕುಮಾರ್ ಅವರಿಗೆ ಸಂತಾಪ ಸೂಚಕ ಸಭೆ

Suddi Udaya

ಪುಂಜಾಲಕಟ್ಟೆ: ಪಿಲಾತಬೆಟ್ಟು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ ಆಯ್ಕೆ

Suddi Udaya
error: Content is protected !!