25.2 C
ಪುತ್ತೂರು, ಬೆಳ್ತಂಗಡಿ
August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

ಜೆಸಿಐ ಕೊಕ್ಕಡ ಕಪಿಲಾ ಘಟಕದ ಮೇ ತಿಂಗಳ ಸಾಮಾನ್ಯ ಸಭೆಯು ಮೇ 23 ರಂದು ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆ ಪಾದೆ ಕಚೇರಿಯಲ್ಲಿ ಜರುಗಿತು.

ಸಭೆಯ ಅಧ್ಯಕ್ಷತೆಯನ್ನು ರಿತೇಶ್ ಎಂ. ಸ್ಟ್ರೆಲ್ಲಾ ಅವರು ವಹಿಸಿದರು. ಇದೇ ತಿಂಗಳ 31 ರಂದು ಕಾಪುವಿನಲ್ಲಿ ನಡೆಯುವ ವಲಯ 15ರ ಮಧ್ಯಾಂತರ ಸಮ್ಮೇಳನ ಸಂಗಮ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಿರ್ಣಯಿಸಲಾಯಿತು. ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಘಟಕದ ಅಧ್ಯಕ್ಷರಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು.

ಜೆಸಿ ವಾಣಿ ಹಾಗೂ ಧ್ಯೇಯ ವಾಕ್ಯವನ್ನು ದಕ್ಷಾ ಜೈನ್ ವಾಚಿಸಿದರು. ನಿಕಟಪೂರ್ವಾಧ್ಯಕ್ಷರಾದ ಡಾ‌. ಶೋಭಾ ಪಿ., ಪೂರ್ವಾಧ್ಯಕ್ಷರಾದ ಸಂತೋಷ್ ಜೈನ್, ಯುವ ಜೆಸಿ ಅಧ್ಯಕ್ಷೆ ಆದ್ಯಾ ಜೈನ್, ಅಕ್ಷತ್ ರೈ, ಆಯುಷ್ ಜೈನ್ ಅವರು ಚರ್ಚೆಯಲ್ಲಿ ಭಾಗವಹಿಸಿದರು. ಕಾರ್ಯದರ್ಶಿಗಳಾದ ಜೋಯಲ್ ಪಿರೇರಾ ವಂದಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಾಲಾ ವಿದ್ಯಾರ್ಥಿಗಳಿಗೆ ‘ಮ್ಯೂಸಿಯಂ ಆನ್ ವೀಲ್’ ಕಾರ್ಯಾಗಾರ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಮತ್ತು ಪುತ್ತೂರು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟ‌ರ್ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಕಲ್ಮಂಜ: ಗರ್ಭಿಣಿ ಮಹಿಳೆ ಹೃದಯಾಘಾತದಿಂದ ನಿಧನ

Suddi Udaya

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಐದು ದೇವರ ಗುಡಿಗಳ ಶಿಲಾನ್ಯಾಸ

Suddi Udaya

ಗುರುವಾಯನಕೆರೆ: ನಿಸರ್ಗ ಆರ್ಕೇಡ್ ನ ಲೋಕಾರ್ಪಣೆ ಹಾಗೂ ಮನೆಯ ಗೃಹಪ್ರವೇಶ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಖ್ಯಾತ ವಕೀಲ ರಾಜಶೇಖರ್ ಹಿಲಿಯಾರ್

Suddi Udaya
error: Content is protected !!