August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನೈನಾಡು ಗೆಳೆಯರ ಬಳಗ ಸೇವಾ ಸಂಸ್ಥೆ ವತಿಯಿಂದ ಪುಸ್ತಕ ವಿತರಣೆ, ಅನಾರೋಗ್ಯ ಪೀಡಿತರಿಗೆ ಸಹಾಯಧನ ಹಾಗೂ ಉನ್ನತ ಶಿಕ್ಷಣಕ್ಕೆ ಸಹಾಯಧನ ವಿತರಣೆ

ನೈನಾಡು: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ನೈನಾಡು ಗೆಳೆಯರ ಬಳಗ ಸೇವಾ ಸಂಸ್ಥೆ ಟ್ರಸ್ಟ್ (ರಿಜಿಸ್ಟರ್) ವತಿಯಿಂದ ರೂ.150000 ಮೌಲ್ಯದ ಸುಮಾರು 90 ಮಕ್ಕಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ನಡೆಯಿತು. ಜೊತೆಗೆ ಇಬ್ಬರು ಮಕ್ಕಳ ಉನ್ನತ ಶಿಕ್ಷಣಕ್ಕೆ ಸಹಾಯಧನ, ಅಲ್ಲದೆ ತೀರ ಬಡತನದಲ್ಲಿರುವ ಇಬ್ಬರಿಗೆ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ ನೀಡಲಾಯಿತು.

ಗೆಳೆಯರ ಬಳಗದ ನಿರ್ದೇಶಕರಾದ ವಿನ್ಸೆಂಟ್ ಗಲ್ಬಾವೊ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಜೇಶ್ ಕೆ ವಿ ಅವರು ಅಧ್ಯಕ್ಷತೆ ವಹಿಸಿ ಮಕ್ಕಳು ಮೊಬೈಲ್ ಎಂಬ ಭ್ರಮಲೋಕದಿಂದ ಹೊರ ಬರಬೇಕಾಗಿ ಕೇಳಿಕೊಂಡರು, ಅಲ್ಲದೆ ಮೊಬೈಲ್ ನ ಬಳಕೆಯನ್ನು ಕಡಿಮೆ ಮಾಡಬೇಕು ಎಂದರು. ಗೆಳೆಯರ ಬಳಗದ ಗೌರವಾಧ್ಯಕ್ಷರಾದ ನೆಲ್ವಿಸ್ಟರ್ ಪಿಂಟೊ ರವರು ಮಾತನಾಡಿ ಸಮಾಜದಲ್ಲಿ ಮಕ್ಕಳು ಮುಂದೆ ಬಂದು ಸರ್ಕಾರಿ ಸೇವೆಗೆ ಸೇರಲು ಪ್ರಯತ್ನಿಸಬೇಕು ಎಂದರು.

ಸರಕಾರಿ ಪ್ರೌಢಶಾಲೆ ನಯನಾಡು‌ ಇಲ್ಲಿಯ ಕನ್ನಡ ಅಧ್ಯಾಪಕ ಜಯಪ್ರಕಾಶ್ ಕೆ ಎಸ್ ಅವರು ವಿಶೇಷ ಅತಿಥಿಯಾಗಿ ಮಾತನಾಡಿ‌ ಸಂಘಟನೆ ಎಂದರೆ ಕೇವಲ ಪ್ರಚಾರಕ್ಕಾಗಿ ಅಲ್ಲ ,ಅದು ಇರುವುದು ಸಮಾಜದ ಒಳಿತಿಗಾಗಿ ಎಂಬುವುದನ್ನು ಗೆಳೆಯರ ಬಳಗ ಸೇವಾ ಸಂಸ್ಥೆ ಮಾಡಿ ತೋರಿಸಿದೆ ಎಂದರು.

ಈ ಸಂದರ್ಭದಲ್ಲಿ ಶ್ರೀಮತಿ ಜಾಯ್ಸ್ ಪಿಂಟೊ, ಶ್ರೀಮತಿ ಪುಷ್ಪಲತಾ ಸಾಲಿಯನ್ ಮಾಜಿ ಪಂಚಾಯತ್ ಸದಸ್ಯರು, ಶ್ರೀಮತಿ ಮೇಬುಲ್ ಫೆರ್ನಾಂಡಿಸ್, ಪತ್ರಕರ್ತರಾದ ರತ್ಮದೇವ್ ಕಾರ್ಯಕ್ರಮದಲ್ಲಿ ಭಾಗವಹಿಸಿ‌ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸರಕಾರಿ ಪ್ರೌಢ ಶಾಲೆ ನಯನಾಡು ಇದರ ಮುಖ್ಯೋಪಾಧ್ಯಾಯರಾದ ಜೊಯೆಲ್ ಲೋಬೊ ಸ್ವಾಗತಿಸಿದರು. ನಾವು ದಾನದಿಂದ ಬಂದ ಹಣ ಎಲ್ಲೂ ದುರುಪಯೋಗಪಡಿಸದೇ ನೇರ ಫಲಾನುಭವಿಗೆ ನೀಡುತ್ತೇವೆ, ಮತ್ತು ಮುಂದಿನ ದಿನಗಳಲ್ಲಿ ಆರೋಗ್ಯ ಮತ್ತು ಶಿಕ್ಷಣಕ್ಕೆ ತೀವ್ರ ಹೊತ್ತು ನೀಡುವುದಾಗಿ ಗೆಳೆಯರ ಬಳಗದ ಅಧ್ಯಕ್ಷ ಡೋನ್ ಪ್ರವೀಣ್ ಕ್ರಾಸ್ತಾರವರು ತಮ್ಮ ಪ್ರಸ್ತಾವಿಕ ಮಾತಿನಲ್ಲಿ ತಿಳಿಯಪಡಿಸಿದರು. ಪ್ರದೀಪ್ ಪಿಂಟೋ ಕಾರ್ಯಕ್ರಮ ನಿರೂಪಿಸಿದರು.

Related posts

ಜ.22: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

Suddi Udaya

ಕೊಕ್ಕಡ ಸೌತಡ್ಕ ದೇವಸ್ಥಾನದ ಬಳಿಯ ಕೆಲ ಅಂಗಡಿಗಳ ತೆರವಿಗೆ ಕಂದಾಯ ಇಲಾಖೆ ನೋಟೀಸು: 10 ದಿನಗಳ ಗಡುವು

Suddi Udaya

ಮೇ 7 : ಜ್ಯೋತಿ ಆಸ್ಪತ್ರೆ, ಲಾಯಿಲ– ತುರ್ತು ಮತ್ತು ಅಪಘಾತ ಚಿಕಿತ್ಸಾ ಆರೈಕೆ ಘಟಕ ಉದ್ಘಾಟನೆ

Suddi Udaya

ಬೆಳ್ತಂಗಡಿ ಪತ್ರಕರ್ತರ ಸಂಘಕ್ಕೆ ವಾರ್ತಾಧಿಕಾರಿ ಖಾದರ್‌ಷಾ ಭೇಟಿ

Suddi Udaya

ಗೇರುಕಟ್ಟೆ ಸೌಹಾರ್ದ ಟ್ರೋಫಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

Suddi Udaya

ಸರ್ವರನ್ನೂ ಹಾಗೂ ಸರ್ವ ಕ್ಷೇತ್ರಗಳನ್ನೂ ಒಳಗೊಂಡ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿದ ಬಜೆಟ್ : ರಕ್ಷಿತ್ ಶಿವರಾಂ

Suddi Udaya
error: Content is protected !!