26.2 C
ಪುತ್ತೂರು, ಬೆಳ್ತಂಗಡಿ
August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಲ್ಕೆ ಹೊಡಿಕಾರ್ ರಸ್ತೆಯ ಇಂಟರ್ಲಾಕ್ ಕಾಮಗಾರಿ ಕಳಪೆ ಆರೋಪ: ನಾವೂರು ಗ್ರಾ.ಪಂ.ಗೆ ಎಸ್.ಡಿ.ಪಿ.ಐ ಮನವಿ

ಬೆಳ್ತಂಗಡಿ: ನಾವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗೊಲ್ಲಪಟ್ಟ – ಪಲ್ಕೆ ಹೊಡಿ ಕಾರ್ ಕಾಂಕ್ರೀಟ್ ರಸ್ತೆಯ ಇಕ್ಕಲಗಳಲ್ಲಿ ಅಳವಡಿಸಲಾದ ಇಂಟರ್ಲಾಕ್ ಕಾಮಗಾರಿಯಲ್ಲಿ ಕಲಪೆ ನಡೆದಿದೆ ಎಂದು ಆರೋಪಿಸಿ, ಎಸ್.ಡಿ.ಪಿ.ಐ ನಾವೂರು ಗ್ರಾಮ ಸಮಿತಿ ವತಿಯಿಂದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಸುಮಾರು ಒಂದು ಕಿಲೋಮೀಟರ್ ಉದ್ದದ ರಸ್ತೆ ಕಾಂಕ್ರೀಟೀಕರಣದ ವೇಳೆ ಅಳವಡಿಸಲಾದ ಇಂಟರ್ಲಾಕ್‌ಗಳು ಕಳಪೆ ಕಾಮಗಾರಿಯಿಂದ ಕೇವಲ ಒಂದು ವರ್ಷದೊಳಗೆ ಬಿರುಕು ಬಿಟ್ಟಿದ್ದು, ಕಾಮಗಾರಿಯನ್ನು ಸಂಪೂರ್ಣ ಫಿನಿಶಿಂಗ್ ಮಾಡದೇ ಅರ್ಧದಲ್ಲೇ ಬಿಟ್ಟು ಹೋಗಲಾಗಿದೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.

ಇದರಿಂದ ಸಾರ್ವಜನಿಕರಿಗೆ ಸಂಚಾರ ತೊಂದರೆ ಉಂಟಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ. ಅಲ್ಲದೆ ಕಾಮಗಾರಿಯಲ್ಲಿ ಗುತ್ತಿಗೆದಾರರು ಭ್ರಷ್ಟಾಚಾರ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಲಾಗಿದೆ.

ತಕ್ಷಣ ಕ್ರಮ ಕೈಗೊಳ್ಳದಿದ್ದಲ್ಲಿ ಸಾರ್ವಜನಿಕರನ್ನು ಸೇರಿಸಿಕೊಂಡು ಶೀಘ್ರದಲ್ಲೇ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಸ್.ಡಿ.ಪಿ.ಐ ನಾವೂರು ಗ್ರಾಮ ಸಮಿತಿ ಎಚ್ಚರಿಸಿದೆ.

ಈ ವೇಳೆ ಎಸ್ ಡಿ ಪಿ ಐ ನಾವೂರು ಬ್ರಾಂಚ್ ಅಧ್ಯಕ್ಷ ಸ್ವಾದಿಕ್ ನಾವೂರು, ಉಪಾಧ್ಯಕ್ಷ ಸ್ವಾದಿಕ್ ಅಶ್ರಫ್ ಕಿರ್ನಡ್ಕ, ಕಾರ್ಯದರ್ಶಿ ಸಲೀಂ ಮುರ, ಪಕ್ಷದ ಮುಖಂಡರಾದ ಖಾದರ್ ನಾವೂರು, ಬಶೀರ್ ಕಳಸ, ಹಂಝ ರವರು ಉಪಸ್ಥಿತರಿದ್ದರು.

Related posts

ಬೆಳಾಲು ನಿವೃತ್ತ ಮುಖ್ಯೋಪಾಧ್ಯಾಯ ಎಸ್ ಪಿ ಬಾಲಕೃಷ್ಣ ಬಡೆಕ್ಕಿಲಾಯ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ ವರ್ಷಾಚರಣೆಯ ಪ್ರಯುಕ್ತ ಬೆಳ್ತಂಗಡಿ ಕಸಾಪ ಸಹಯೋಗದೊಂದಿಗೆ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ರವರ ಚಿಂತನಾ ಬರಹಗಳ ಸಂಕಲನ ‘ಮೌಲ್ಯಗಳ ಹುಡುಕಾಟದಲ್ಲಿ’ ಪುಸ್ತಕ ಬಿಡುಗಡೆ’ ಕಾರ್ಯಕ್ರಮ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಮಹಿಳಾ ಕಾಂಗ್ರೆಸ್‌ನಿಂದ ದೂರು

Suddi Udaya

ಶ್ರೀ ಕಾರಿಂಜೇಶ್ವರ ದೇವಸ್ಥಾನ ಕ್ಕೆ ಸಿಡಿಲು ಬಡಿದು ಹಾನಿ

Suddi Udaya
error: Content is protected !!