23.1 C
ಪುತ್ತೂರು, ಬೆಳ್ತಂಗಡಿ
July 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಿಶಿಲದ ಕಪಿಲಾ ನದಿಯಲ್ಲಿ ನಡೆದ ಮತ್ಸ್ಯ ದುರಂತಕ್ಕೆ 30 ವರ್ಷ

ಶಿಶಿಲ : ಶಿಶಿಲದ ಕಪಿಲಾ ನದಿಯಲ್ಲಿ ದೇವರ ಮೀನೆಂದೆ ಶತಮಾನ ಕಾಲದಿಂದ ಪೂಜಿಸುತ್ತಿದ್ದಾರೆ. ಸಾವಿರಾರು ಭಕ್ತಾದಿಗಳು ಶಿಶಿಲಕ್ಕೆ ಆಗಮಿಸಿ ಕಪಿಲಾ ನದಿಯಲ್ಲಿರುವ ಮೀನುಗಳನ್ನು ಕಂಡು ಆಹಾರ ನೀಡಿ ಶಿಶಿಲೇಶ್ವರ ಸ್ವಾಮಿಯ ದರ್ಶನ ಮಾಡಿ ಪುನೀತರಾಗುತ್ತಾರೆ.

ಆದರೆ ಆ ಒಂದು ದಿನವನ್ನು ಶಿಶಿಲದ ಭಕ್ತರು ಇನ್ನೂ ನೆನಪಿಸುತ್ತಿದ್ದಾರೆ. ಅದು 25.5.96. ಇಂದಿಗೆ ಮೂವತ್ತು ವರ್ಷ ಸಂದಿದೆ.
ಇಲ್ಲಿರುವ ಮೀನುಗಳು ದೇವರ ಪ್ರತಿರೂಪ. ಇವುಗಳನ್ನು ಹಿಡಿಯುವಂತಿಲ್ಲ ಎಂದು ಬ್ರಿಟೀಷ್ ಸರಕಾರದಿಂದಲೆ ಕಾನೂನು ಬಂದಿತ್ತು. ಈಗಲೂ ಅದೆ ಕಾನೂನು ಮುಂದುವರಿದಿದೆ.
ಆದರೆ ಇದನ್ನೆಲ್ಲಾ ಸಹಿಸದ ದುಷ್ಕರ್ಮಿಗಳ ಅಂದು ಕಪಿಲಾ ನದಿಗೆ ವಿಷ ಇಕ್ಕಿ ಸಾವಿರಾರು ಮೀನುಗಳ ಮಾರಣ ಹೊಮವನ್ನೆ ನಡೆಸಿದ್ದರು. ಇದನ್ನು ಖಂಡಿಸಿ ಬ್ರಹತ್ ಭಾರೀ ಭಕ್ತರು ಬೀದಿಗಿಳಿದಿದ್ದರು.
ಸ್ವಾಮೀಜಿಗಳು, ಜನ ಪ್ರತಿನಿದಿಗಳು, ಅಧಿಕಾರಿಗಳ ದಂಡೆ ಶಿಶಿಲಕ್ಕೆ ಆಗಮಿಸಿತ್ತು. ವಿಧಾನಸಭೆಯಲ್ಲೂ ಈ ಕುರಿತು ಚರ್ಚೆಯೆ ನಡೆದಿತ್ತು.

ಊರಿಗೆ ಊರೆ ನೆರೆದು ಕಪಿಲಾ ನದಿಯಲ್ಲಿ ಮಡಿದ ಮತ್ಸ್ಯ ಸಂಕುಲಕ್ಕೆ ಕಂಬನಿ ಸುರಿದಿತ್ತು. ಮತ್ಸ್ಯ ಹಿತರಕ್ಷಣಾ ವೇದಿಕೆ ಯಿಂದ ಮತ್ಸ್ಯ ಸ್ಮಾರಕವೂ ನಿರ್ಮಾಣ ಆಗಿತ್ತು.. ಇದೆಲ್ಲವೂ ಘಟನೆ ನಡೆದಿದ್ದರೂ ಶಿಶಿಲದ ಭಕ್ತರು ಅದನ್ನು ಇನ್ನೂ ಮರೆತಿಲ್ಲ.
ಅಂತಹ ಘಟನೆ ಮುಂದೆ ನಡೆಯದಂತೆ ಜನ ಜಾಗ್ರತಿಯಾಗಿದ್ದಾರೆ. ಕಾವಲು ಸಮಿತಿ ರಚನೆಯಾಗಿದೆ. ಹಿಂದೂ ಸಂಘಟನೆಗಳು ಇನ್ನೂ ಹೆಚ್ಚು‌ಜಾಗ್ರತರಾಗಿದ್ದು ಮುಂದೆ ಈ ರೀತಿಯ ಘಟನೆ ನಡೆಯದಂತೆ ಎಚ್ಚರಿಕೆಯಿಂದ ಇದ್ದಾರೆ..
ಆದರೂ ಭಕ್ತ ಸಮೂಹ ಈ ದಿನವನ್ನು ಕರಾಳ ದಿನವಾಗಿ ಆಚರಿಸುತ್ತಿದ್ದಾರೆ. ಮಡಿದ ಮತ್ಸಸಂಕುಲದ ಸದ್ಗತಿಗಾಗಿ ಗ್ರಾಮದ ಭಕ್ತಸಮೂಹ ಈ ದಿನವನ್ನು ಪ್ರಾರ್ಥನಾ ದಿನವಾಗಿ ಮಾಡುತ್ತಿದ್ದಾರೆ ಎಂದು ಹಿಂದೂ ಧರ್ಮ ಪ್ರಸಾರ ಸಮಿತಿಯ ಪ್ರಮುಖರಾದ ಶಿಶಿಲ ಬಿ.ಜಯರಾಮ ನೆಲ್ಲಿತ್ತಾಯ ತಿಳಿಸಿದ್ದಾರೆ.

Related posts

ಕಳೆಂಜ: ರಾಮಣ್ಣ ಗೌಡ ಬರೆಂಗಾಯ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಧರ್ಮಸ್ಥಳ ಗ್ರಾಮ ಸಮಿತಿ ರಚನೆ

Suddi Udaya

ಜೀವಜಲಕ್ಕಾಗಿ ಕೆರೆಗಳ ಪುನಶ್ಚೇತನ : ಧರ್ಮಸ್ಥಳ ಯೋಜನೆಯಿಂದ ಒಂದೇ ವರ್ಷದಲ್ಲಿ ರಾಜ್ಯದ 160 ಕೆರೆಗಳಿಗೆ ಕಾಯಕಲ್ಪ

Suddi Udaya

ಭಾರತೀಯ ಸೇನೆಗೆ ಶಕ್ತಿ ತುಂಬಲು ಪ್ರಾರ್ಥನೆ

Suddi Udaya

ಸಿರಿ ಸಂಸ್ಥೆಯ ವತಿಯಿಂದ ಧರ್ಮಸ್ಥಳದ ಎ.ವಿ. ಶೆಟ್ಟಿ ದಂಪತಿಗಳಿಗೆ ಗೌರವಾರ್ಪಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬೆಳ್ತಂಗಡಿ ಕೌಶಲ್ಯಭಿವೃದ್ಧಿ ತರಬೇತಿಯಡಿ ಬಟ್ಟೆ ಚೀಲ ಮತ್ತು ಎಂಬ್ರಾಯಿಡರಿ ಉಚಿತ ತರಬೇತಿ ಕಾರ್ಯಾಗಾರ

Suddi Udaya
error: Content is protected !!