31.1 C
ಪುತ್ತೂರು, ಬೆಳ್ತಂಗಡಿ
May 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಿಶಿಲದ ಕಪಿಲಾ ನದಿಯಲ್ಲಿ ನಡೆದ ಮತ್ಸ್ಯ ದುರಂತಕ್ಕೆ 30 ವರ್ಷ

ಶಿಶಿಲ : ಶಿಶಿಲದ ಕಪಿಲಾ ನದಿಯಲ್ಲಿ ದೇವರ ಮೀನೆಂದೆ ಶತಮಾನ ಕಾಲದಿಂದ ಪೂಜಿಸುತ್ತಿದ್ದಾರೆ. ಸಾವಿರಾರು ಭಕ್ತಾದಿಗಳು ಶಿಶಿಲಕ್ಕೆ ಆಗಮಿಸಿ ಕಪಿಲಾ ನದಿಯಲ್ಲಿರುವ ಮೀನುಗಳನ್ನು ಕಂಡು ಆಹಾರ ನೀಡಿ ಶಿಶಿಲೇಶ್ವರ ಸ್ವಾಮಿಯ ದರ್ಶನ ಮಾಡಿ ಪುನೀತರಾಗುತ್ತಾರೆ.

ಆದರೆ ಆ ಒಂದು ದಿನವನ್ನು ಶಿಶಿಲದ ಭಕ್ತರು ಇನ್ನೂ ನೆನಪಿಸುತ್ತಿದ್ದಾರೆ. ಅದು 25.5.96. ಇಂದಿಗೆ ಮೂವತ್ತು ವರ್ಷ ಸಂದಿದೆ.
ಇಲ್ಲಿರುವ ಮೀನುಗಳು ದೇವರ ಪ್ರತಿರೂಪ. ಇವುಗಳನ್ನು ಹಿಡಿಯುವಂತಿಲ್ಲ ಎಂದು ಬ್ರಿಟೀಷ್ ಸರಕಾರದಿಂದಲೆ ಕಾನೂನು ಬಂದಿತ್ತು. ಈಗಲೂ ಅದೆ ಕಾನೂನು ಮುಂದುವರಿದಿದೆ.
ಆದರೆ ಇದನ್ನೆಲ್ಲಾ ಸಹಿಸದ ದುಷ್ಕರ್ಮಿಗಳ ಅಂದು ಕಪಿಲಾ ನದಿಗೆ ವಿಷ ಇಕ್ಕಿ ಸಾವಿರಾರು ಮೀನುಗಳ ಮಾರಣ ಹೊಮವನ್ನೆ ನಡೆಸಿದ್ದರು. ಇದನ್ನು ಖಂಡಿಸಿ ಬ್ರಹತ್ ಭಾರೀ ಭಕ್ತರು ಬೀದಿಗಿಳಿದಿದ್ದರು.
ಸ್ವಾಮೀಜಿಗಳು, ಜನ ಪ್ರತಿನಿದಿಗಳು, ಅಧಿಕಾರಿಗಳ ದಂಡೆ ಶಿಶಿಲಕ್ಕೆ ಆಗಮಿಸಿತ್ತು. ವಿಧಾನಸಭೆಯಲ್ಲೂ ಈ ಕುರಿತು ಚರ್ಚೆಯೆ ನಡೆದಿತ್ತು.

ಊರಿಗೆ ಊರೆ ನೆರೆದು ಕಪಿಲಾ ನದಿಯಲ್ಲಿ ಮಡಿದ ಮತ್ಸ್ಯ ಸಂಕುಲಕ್ಕೆ ಕಂಬನಿ ಸುರಿದಿತ್ತು. ಮತ್ಸ್ಯ ಹಿತರಕ್ಷಣಾ ವೇದಿಕೆ ಯಿಂದ ಮತ್ಸ್ಯ ಸ್ಮಾರಕವೂ ನಿರ್ಮಾಣ ಆಗಿತ್ತು.. ಇದೆಲ್ಲವೂ ಘಟನೆ ನಡೆದಿದ್ದರೂ ಶಿಶಿಲದ ಭಕ್ತರು ಅದನ್ನು ಇನ್ನೂ ಮರೆತಿಲ್ಲ.
ಅಂತಹ ಘಟನೆ ಮುಂದೆ ನಡೆಯದಂತೆ ಜನ ಜಾಗ್ರತಿಯಾಗಿದ್ದಾರೆ. ಕಾವಲು ಸಮಿತಿ ರಚನೆಯಾಗಿದೆ. ಹಿಂದೂ ಸಂಘಟನೆಗಳು ಇನ್ನೂ ಹೆಚ್ಚು‌ಜಾಗ್ರತರಾಗಿದ್ದು ಮುಂದೆ ಈ ರೀತಿಯ ಘಟನೆ ನಡೆಯದಂತೆ ಎಚ್ಚರಿಕೆಯಿಂದ ಇದ್ದಾರೆ..
ಆದರೂ ಭಕ್ತ ಸಮೂಹ ಈ ದಿನವನ್ನು ಕರಾಳ ದಿನವಾಗಿ ಆಚರಿಸುತ್ತಿದ್ದಾರೆ. ಮಡಿದ ಮತ್ಸಸಂಕುಲದ ಸದ್ಗತಿಗಾಗಿ ಗ್ರಾಮದ ಭಕ್ತಸಮೂಹ ಈ ದಿನವನ್ನು ಪ್ರಾರ್ಥನಾ ದಿನವಾಗಿ ಮಾಡುತ್ತಿದ್ದಾರೆ ಎಂದು ಹಿಂದೂ ಧರ್ಮ ಪ್ರಸಾರ ಸಮಿತಿಯ ಪ್ರಮುಖರಾದ ಶಿಶಿಲ ಬಿ.ಜಯರಾಮ ನೆಲ್ಲಿತ್ತಾಯ ತಿಳಿಸಿದ್ದಾರೆ.

Related posts

ತುಮಕೂರು ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ತುಮಕೂರು ಜಿಲ್ಲಾ ಎಡಿಷನ್ ಎಸ್ಪಿ ಯವರನ್ನು ಬೇಟಿ ಮಾಡಿ ಪ್ರಕರಣದ ಬಗ್ಗೆ ಮಾಹಿತಿ ಪಡೆದ ರಕ್ಷಿತ್ ಶಿವರಾಂ

Suddi Udaya

ಉಜಿರೆ ಅನುಗ್ರಹದಲ್ಲಿ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಪೂರ್ವ ಅಧ್ಯಕ್ಷರಿಗೆ ಮತ್ತು ಸಾಧಕರಿಗೆ ಸನ್ಮಾನ

Suddi Udaya

ತಣ್ಣೀರುಪಂತ ಗ್ರಾ.ಪಂ.ನಲ್ಲಿ ಮಕ್ಕಳ ಸ್ನೇಹಿ ಅಭಿಯಾನದ ಪೂರ್ವಸಿದ್ಧತಾ ಸಭೆ

Suddi Udaya

ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನ ಅನರ್ಹತೆಗೊಳಿಸಿರುವುದಕ್ಕೆ ಖಂಡನೆ: ಬೆಳ್ತಂಗಡಿ ಮೂರು ಮಾರ್ಗದ ಬಳಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಮೌನ ಪ್ರತಿಭಟನೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೇತೃತ್ವದಲ್ಲಿ ‘ಚಿಣ್ಣರ ಲೋಕ’ ಶಿಬಿರ ಸಮಾರೋಪ

Suddi Udaya
error: Content is protected !!