24.7 C
ಪುತ್ತೂರು, ಬೆಳ್ತಂಗಡಿ
August 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಾಧಕರು

ಸಮಾಜ ಸೇವಕ, ರಾಜಕೇಸರಿ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ. ರವರಿಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಸಮಾಜ ಸೇವಕ, ರಾಜಕೇಸರಿ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ.ಬೆಳ್ತಂಗಡಿ ಅವರಿಗೆ 2025ನೇ ಸಾಲಿನ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪ್ರಶಸ್ತಿ ಪ್ರದಾನ ಮಾಡಿದ ಮಂಗಳೂರು ನಗರ ಉಪ ಪೊಲೀಸ್ ಆಯುಕ್ತ ಎಚ್‌. ಎನ್‌. ಮಿಥುನ್ ಮಾತನಾಡಿ, ಮಂಗಳೂರಿನ ಪತ್ರಕರ್ತರು ಸಂಯಮ, ಸಾಮಾಜಿಕ ಕಳಕಳಿ ಯಿಂದ ಕೆಲಸ ಮಾಡುತ್ತಿದ್ದಾರೆ. ನಿಸ್ವಾರ್ಥ ಸೇವಕರನ್ನು ಗುರುತಿಸುವ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡಿದ್ದಾರೆ ಎಂದರು.

ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಎ.ಖಾದರ್ ಶಾ ಪ್ರೆಸ್‌ ಕ್ಲಬ್ ಗೌರವ ಸನ್ಮಾನಕ್ಕೆ ಆಯ್ಕೆಯಾದವರನ್ನು ಗೌರವಿಸಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ. ಪೂಜಾರಿ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಉಪಸ್ಥಿತರಿದ್ದರು.

Related posts

ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಮತದಾನ

Suddi Udaya

ಶ್ರೀ ಗುರುದೇವ ಪದವಿಪೂರ್ವ ಕಾಲೇಜಿಗೆ ಶೇ.94 ಫಲಿತಾಂಶ

Suddi Udaya

ಕಲ್ಲೇರಿ: ಪಂಜಿಕುಡೇಲು ನಿವಾಸಿ ಸುಂದರ ಕೋಟ್ಯಾನ್ ನಿಧನ

Suddi Udaya

ಎಸ್ ಡಿ ಎಮ್ ‌ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ‘ಪೂಜ್ಯ ಪಥ’ ಪೂಜ್ಯರು ‌ನಡೆದು ಬಂದ ಹಾದಿಯ ಕುರಿತಾದ ವಿಶೇಷ ಪುಸ್ತಕ ಮತ್ತು ಸಾಕ್ಷ್ಯಚಿತ್ರ ಪ್ರದರ್ಶನ

Suddi Udaya

ಎಸ್ ಡಿ ಎಂ ಬೆಳ್ತಂಗಡಿ ಆಂಗ್ಲ ಮಾಧ್ಯಮ ಶಾಲೆಗೆ ಸಿ ಡಬ್ಲ್ಯೂ ಬಿ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಪಟ್ರಮೆ ಸ್ಪಂದನ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya
error: Content is protected !!