24.5 C
ಪುತ್ತೂರು, ಬೆಳ್ತಂಗಡಿ
July 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಮಂತ್ರಣ ವೇದಿಕೆಯ ಅಧ್ಯಕ್ಷೆ ವಿದ್ಯಾಶ್ರೀ ಅಡೂರ್ ರವರ “ಕವಿತೆಯೆoಬ ಕೇದಗೆ” ಭಾವಗೀತೆಯ ಧ್ವನಿ ಮುದ್ರಣ ಬಿಡುಗಡೆ

ಬೆಳ್ತಂಗಡಿ:ಮಂಗಳೂರಿನ ನಂತೂರು ಸಂದೇಶ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಆಮಂತ್ರಣ ವೇದಿಕೆಯ ಅಧ್ಯಕ್ಷೆ, ಸಾಹಿತಿ, ಕವಯತ್ರಿ ಶ್ರೀಮತಿ ವಿದ್ಯಾಶ್ರೀ ಅಡೂರ್ ಅವರು ರಚಿಸಿ ಹಾಡಿರುವ ಕವಿತೆಯೆoಬ ಕೇದಗೆ ಎಂಬ ಭಾವಗೀತೆಯ ಧ್ವನಿ ಮುದ್ರಣ ಬಿಡುಗಡೆಗೊಂಡಿತು.

ಖ್ಯಾತ ಹಾಸ್ಯ ಬರಹಗಾರ್ತಿಯಾದ ಭುವನೇಶ್ವರಿ ಹೆಗಡೆ,ಕಲಾಪೋಷಕರಾದ ಭುಜಬಲಿ ಧರ್ಮಸ್ಥಳ, ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಭಾವಗೀತೆ ಲೋಕಾರ್ಪಣೆಯನ್ನು ನೆರವೇರಿಸಿದರು.

ಈ ಭಾವಗೀತೆಯನ್ನು ವಿದ್ಯಾಶ್ರೀ ಅವರ ಎರಡನೇ ಕವನಸಂಕಲನ ಭಾವಬೇತಾಳದಿಂದ ಆರಿಸಿಕೊಳ್ಳಲಾಗಿದೆ.ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಮಂಗಳೂರು ಘಟಕದ ಪದಪ್ರಧಾನ ಸಮಾರಂಭದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಂಗಳೂರು ಆಮಂತ್ರಣದ ನಿಯೋಜಿತ ಅಧ್ಯಕ್ಷರಾದ ಲತೇಶ್ ಪುತ್ರನ್, ದ. ಕ ಜಿಲ್ಲಾಧ್ಯಕ್ಷರಾದ ವಿಂಧ್ಯಾ ರೈ ಕಡೆಶಿವಾಲಯ, ಆಮಂತ್ರಣದ ರೂವಾರಿಯಾದ ವಿಜಯ್ ಕುಮಾರ್ ಜೈನ್ ಮತ್ತಿತರರು ಉಪಸ್ಥಿತರಿದ್ದರು.

Related posts

ದಯಾ ವಿಶೇಷ ಮಕ್ಕಳ ಪಾಲನ ಕೇಂದ್ರ ವಿಮುಕ್ತಿಯಲ್ಲಿ “ಪವರ್ ಆನ್” ಸಂಸ್ಥೆಯ ಕ್ಯಾಲೆಂಡರ್ ಬಿಡುಗಡೆ

Suddi Udaya

ಕಲಾಕುಂಚ ಆರ್ಟ್ಸ್ ನಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವ: ರಥೋತ್ಸವ, ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya

ರಾಷ್ಟ್ರೀಯ ಮಟ್ಟದ ಕರಕುಶಲ ಸ್ಪರ್ಧೆ: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಶ್ರೇಯಾ ಕೆ ಎಚ್ ಗೆ ಪ್ರಥಮ ಸ್ಥಾನ

Suddi Udaya

ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ

Suddi Udaya
error: Content is protected !!