26.2 C
ಪುತ್ತೂರು, ಬೆಳ್ತಂಗಡಿ
August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಮಂತ್ರಣ ವೇದಿಕೆಯ ಅಧ್ಯಕ್ಷೆ ವಿದ್ಯಾಶ್ರೀ ಅಡೂರ್ ರವರ “ಕವಿತೆಯೆoಬ ಕೇದಗೆ” ಭಾವಗೀತೆಯ ಧ್ವನಿ ಮುದ್ರಣ ಬಿಡುಗಡೆ

ಬೆಳ್ತಂಗಡಿ:ಮಂಗಳೂರಿನ ನಂತೂರು ಸಂದೇಶ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಆಮಂತ್ರಣ ವೇದಿಕೆಯ ಅಧ್ಯಕ್ಷೆ, ಸಾಹಿತಿ, ಕವಯತ್ರಿ ಶ್ರೀಮತಿ ವಿದ್ಯಾಶ್ರೀ ಅಡೂರ್ ಅವರು ರಚಿಸಿ ಹಾಡಿರುವ ಕವಿತೆಯೆoಬ ಕೇದಗೆ ಎಂಬ ಭಾವಗೀತೆಯ ಧ್ವನಿ ಮುದ್ರಣ ಬಿಡುಗಡೆಗೊಂಡಿತು.

ಖ್ಯಾತ ಹಾಸ್ಯ ಬರಹಗಾರ್ತಿಯಾದ ಭುವನೇಶ್ವರಿ ಹೆಗಡೆ,ಕಲಾಪೋಷಕರಾದ ಭುಜಬಲಿ ಧರ್ಮಸ್ಥಳ, ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಭಾವಗೀತೆ ಲೋಕಾರ್ಪಣೆಯನ್ನು ನೆರವೇರಿಸಿದರು.

ಈ ಭಾವಗೀತೆಯನ್ನು ವಿದ್ಯಾಶ್ರೀ ಅವರ ಎರಡನೇ ಕವನಸಂಕಲನ ಭಾವಬೇತಾಳದಿಂದ ಆರಿಸಿಕೊಳ್ಳಲಾಗಿದೆ.ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಮಂಗಳೂರು ಘಟಕದ ಪದಪ್ರಧಾನ ಸಮಾರಂಭದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಂಗಳೂರು ಆಮಂತ್ರಣದ ನಿಯೋಜಿತ ಅಧ್ಯಕ್ಷರಾದ ಲತೇಶ್ ಪುತ್ರನ್, ದ. ಕ ಜಿಲ್ಲಾಧ್ಯಕ್ಷರಾದ ವಿಂಧ್ಯಾ ರೈ ಕಡೆಶಿವಾಲಯ, ಆಮಂತ್ರಣದ ರೂವಾರಿಯಾದ ವಿಜಯ್ ಕುಮಾರ್ ಜೈನ್ ಮತ್ತಿತರರು ಉಪಸ್ಥಿತರಿದ್ದರು.

Related posts

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಚರಣೆ: ಬೆಳ್ತಂಗಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಸೈನಿಕರಿಗೆ ಅಭಿನಂದನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕಂಪ್ಯೂಟರ್ ತರಬೇತಿ ಕಾರ್ಯಾಗಾರ

Suddi Udaya

ಮೇಲಂತಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಪಿಕಪ್ ಗೂಡ್ಸ್ ಟೆಂಪೋ

Suddi Udaya

ಮಚ್ಚಿನ ಮಾರಿಗುಡಿ ಶ್ರೀ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ದೊಂಪದ ಬಲಿ ನೇಮೋತ್ಸವ

Suddi Udaya

ಭಾರತೀಯ ಕಿರಿಯ ಪುರುಷರ ಹ್ಯಾಂಡ್‌ಬಾಲ್ ತಂಡಕ್ಕೆ ಎಸ್‌.ಡಿ.ಎಂ ಕಾಲೇಜಿನ ವಿದ್ಯಾರ್ಥಿ ಅಭಿಷೇಕ್ ಎಚ್. ಆಯ್ಕೆ

Suddi Udaya

ಲಾಯಿಲ: ಪಡ್ಲಾಡಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ: ಅಧ್ಯಕ್ಷರಾಗಿ ಹರ್ಷಿತ್ ನಿನ್ನಿಕಲ್ಲು, ಕಾರ್ಯದರ್ಶಿ ವಿನಯ್, ಕೋಶಾಧಿಕಾರಿ ಹರೀಶ್ ಎಲ್.ಆಯ್ಕೆ

Suddi Udaya
error: Content is protected !!