23.7 C
ಪುತ್ತೂರು, ಬೆಳ್ತಂಗಡಿ
July 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ ಕಾರ್ಯಾಗಾರ

ಉಜಿರೆ: ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಜೀವನ ಕೌಶಲ್ಯಗಳು (ಸುಧಾರಿತ)” ಎಂಬ ವಿಷಯದ ಕುರಿತು ಉಜಿರೆ ಎಸ್‌.ಡಿ.ಎಂ ಪದವಿ ಕಾಲೇಜಿನ ಸಭಾಂಗಣದಲ್ಲಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಅಳಿಕೆಯ ಶ್ರೀ ಸತ್ಯಸಾಯಿ ಲೋಕ ಸೇವ ವಿದ್ಯಾಕೇಂದ್ರದ ಉಪ ಪ್ರಾಂಶುಪಾಲ ರಾಧಾಕೃಷ್ಣ ಹೊಳ್ಳ ಬಿ ಹಾಗೂ ಉಡುಪಿ ಶ್ರೀ ಮೂಕಾಂಬಿಕ ಪಬ್ಲಿಕ್ ಶಾಲೆಯ ಪ್ರೌಢಶಾಲಾ ವಿಭಾಗದ ಸಂಯೋಜಕಿ ಶ್ರೀಮತಿ ದಿವ್ಯ ಜೆ. ಎಸ್ ಇವರು ಜೀವನ ಕೌಶಲ ವಿಷಯದ ಕುರಿತು ಕಾರ್ಯ ಚಟುವಟಿಕೆಗಳೊಂದಿಗೆ ಉಪಯುಕ್ತ ಮಾಹಿತಿಗಳನ್ನು ಹಂಚಿಕೊಂಡರು.

ಕಾರ್ಯಾಗಾರದಲ್ಲಿ ಮಂಗಳೂರು ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ, ಪೋದಾರ್ ಇಂಟರ್ನಾಷನಲ್ ಶಾಲೆ, ಮೂಡಬಿದ್ರೆಯ ಎಕ್ಸಲೆಂಟ್ ಶಾಲೆಯ ಶಿಕ್ಷಕರು ಭಾಗಿಯಾಗಿದ್ದರು.

ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದ ಕಾರ್ಯಾಗಾರದಲ್ಲಿ ಶಿಕ್ಷಕಿ ಮಧುರ ನಿರೂಪಿಸಿದರು.

Related posts

ಕರಾಟೆ ಸ್ಪರ್ಧೆ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ದಿ. ಪ್ರವೀಣ್ ನೆಟ್ಟಾರುರವರ ಮನೆಗೆ ಬೆಳ್ತಂಗಡಿ ಯುವಮೋರ್ಚಾ ಮಂಡಲದ ಪದಾಧಿಕಾರಿಗಳ ಭೇಟಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಐರನ್ ರೋಡ್ರಿಗಸ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ

Suddi Udaya

ಇಂದಬೆಟ್ಟು: ಗಂಗಾಧರ್ ಎಸ್. ರವರ ತೋಟದಲ್ಲಿ ಬೃಹತಾಕಾರದ ಹೆಬ್ಬಾವು ಪತ್ತೆ

Suddi Udaya
error: Content is protected !!