ಉಜಿರೆ: ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಜೀವನ ಕೌಶಲ್ಯಗಳು (ಸುಧಾರಿತ)” ಎಂಬ ವಿಷಯದ ಕುರಿತು ಉಜಿರೆ ಎಸ್.ಡಿ.ಎಂ ಪದವಿ ಕಾಲೇಜಿನ ಸಭಾಂಗಣದಲ್ಲಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿಯಾಗಿ ಅಳಿಕೆಯ ಶ್ರೀ ಸತ್ಯಸಾಯಿ ಲೋಕ ಸೇವ ವಿದ್ಯಾಕೇಂದ್ರದ ಉಪ ಪ್ರಾಂಶುಪಾಲ ರಾಧಾಕೃಷ್ಣ ಹೊಳ್ಳ ಬಿ ಹಾಗೂ ಉಡುಪಿ ಶ್ರೀ ಮೂಕಾಂಬಿಕ ಪಬ್ಲಿಕ್ ಶಾಲೆಯ ಪ್ರೌಢಶಾಲಾ ವಿಭಾಗದ ಸಂಯೋಜಕಿ ಶ್ರೀಮತಿ ದಿವ್ಯ ಜೆ. ಎಸ್ ಇವರು ಜೀವನ ಕೌಶಲ ವಿಷಯದ ಕುರಿತು ಕಾರ್ಯ ಚಟುವಟಿಕೆಗಳೊಂದಿಗೆ ಉಪಯುಕ್ತ ಮಾಹಿತಿಗಳನ್ನು ಹಂಚಿಕೊಂಡರು.
ಕಾರ್ಯಾಗಾರದಲ್ಲಿ ಮಂಗಳೂರು ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ, ಪೋದಾರ್ ಇಂಟರ್ನಾಷನಲ್ ಶಾಲೆ, ಮೂಡಬಿದ್ರೆಯ ಎಕ್ಸಲೆಂಟ್ ಶಾಲೆಯ ಶಿಕ್ಷಕರು ಭಾಗಿಯಾಗಿದ್ದರು.
ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದ ಕಾರ್ಯಾಗಾರದಲ್ಲಿ ಶಿಕ್ಷಕಿ ಮಧುರ ನಿರೂಪಿಸಿದರು.











