25.2 C
ಪುತ್ತೂರು, ಬೆಳ್ತಂಗಡಿ
August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್

ಗಸ್ತಿನಲ್ಲಿದ್ದ ಉರ್ವಾ ಠಾಣಾ ಪೊಲೀಸ್ ಕಾನ್‌ಸ್ಟೇಬಲ್ ಮೇಲೆ ಬೈಕ್ ಸಹಸವಾರನಿಂದ ಹಲ್ಲೆ

ಬೆಳ್ತಂಗಡಿ : ರಾತ್ರಿ ವೇಳೆ ವಾಹನಗಳ ತಪಾಸಣೆ ನಡೆಸುತ್ತಿದ್ದ ಉರ್ವಾ ಠಾಣಾ ಪೊಲೀಸ್‌ ಕಾನ್‌ಸ್ಟೇಬಲ್ ಒಬ್ಬರ ಮೇಲೆ ದ್ವಿಚಕ್ರ ವಾಹನದಲ್ಲಿ ಬಂದ ಯುವಕರು ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಗರದ ಉರ್ವ ಠಾಣೆ ವ್ಯಾಪ್ತಿಯ ಕೋಡಿಕಲ್ ನಾರಾಯಣಗುರು ಕೋ ಆಪರೇಟಿವ್ ಸೊಸೈಟಿ ಬಳಿ ಮೇ 23ರಂದು ತಡರಾತ್ರಿ ಎರಡು ಗಂಟೆ ಸುಮಾರಿಗೆ ನಡೆದಿದೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸ್ಥಳದಲ್ಲಿ ಇಬ್ಬರು ಪೊಲೀಸ್‌ ಕಾನ್‌ಸ್ಟೇಬಲ್ ಕರ್ತವ್ಯ ನಿರತರಾಗಿದ್ದ ವೇಳೆ ಇಬ್ಬರು ಯುವಕರು ದ್ವಿಚಕ್ರ ವಾಹನವೊಂದರಲ್ಲಿ ಅತಿ ವೇಗವಾಗಿ ತೆರಳಿದ್ದರು. ವಾಹನ ನಿಲ್ಲಿಸುವಂತೆ ಪೊಲೀಸರು ಸೂಚನೆ ನೀಡಿದರೂ ಲೆಕ್ಕಿಸದೆ ಸಾಗಿದ್ದರು. ಆನಂತರ ಅದೇ ಮಾರ್ಗದಲ್ಲಿ ಬಂದ ಯುವಕರು ಸಿಮೆಂಟ್ ಶೀಟ್‌ನ ತುಂಡನ್ನು ಹಿಡಿದು ಪೊಲೀಸ್ ಕಾನ್‌ಸ್ಟೇಬಲ್ ಒಬ್ಬರ ಮೇಲೆ ನೇರವಾಗಿ ಹೊಡೆದು ಪರಾರಿಯಾಗಿದ್ದಾರೆ.

ಪೊಲೀಸ್‌ ಕಾನ್‌ಸ್ಟೇಬಲ್ ಹನುಮಂತ ಕಂಠಿ ಎಂಬವರು ಏಟಿನಿಂದ ತಪ್ಪಿಸಿಕೊಳ್ಳಲು ಕೆಳಕ್ಕೆ ಬಗ್ಗಿದ್ದರಿಂದ ಹಲ್ಲೆಯಿಂದ ಪಾರಾಗಿದ್ದಾರೆ. ಆದರೂ ತಲೆಯ ಭಾಗಕ್ಕೆ ಪೆಟ್ಟು ಬಿದ್ದು ಗಾಯವಾಗಿದೆ ಎಂದು ಉರ್ವಾ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

Related posts

ಅಳದಂಗಡಿ ಹಿಂದೂ ಸಂಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರೈಸ್ ಮಿಲ್ ನ ಹಿಂಬದಿಯಲ್ಲಿ ನೀರು ತುಂಬಿದ ಸ್ಟೀಲ್ ಪಾತ್ರೆ ಒಳಗೆ ವ್ಯಕ್ತಿಯ ಶವ ಪತ್ತೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ರೆಖ್ಯ ಅಂಗನವಾಡಿಯಲ್ಲಿ ಹಾಳಾದ ಮೊಟ್ಟೆ ವಿತರಣೆ: ಗ್ರಾಮಸ್ಥರ ಅಕ್ರೋಶ

Suddi Udaya

ಆರಂಬೋಡಿ 136ನೇ ಬೂತ್ ಸಮಿತಿಯಲ್ಲಿ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಬೆಳ್ತಂಗಡಿ : ಸ.ಪ್ರ.ದ. ಕಾಲೇಜಿನಲ್ಲಿ ಸಹಕಾರಿ ಕ್ಷೇತ್ರದಲ್ಲಿರುವ ಉದ್ಯೋಗವಕಾಶಗಳ ಬಗ್ಗೆ ಕಾರ್ಯಾಗಾರ

Suddi Udaya

ಅಳದಂಗಡಿ ಅರಮನೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

Suddi Udaya
error: Content is protected !!