23.7 C
ಪುತ್ತೂರು, ಬೆಳ್ತಂಗಡಿ
July 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ :ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಓರಿಯೆಂಟೇಶನ್

ಗುರುವಾಯನಕೆರೆ: ಗುಣಮಟ್ಟದ ಹಾಗೂ ಸಂಸ್ಕಾರಯುತ ಶಿಕ್ಷಣಕ್ಕೆ ಹೆಸರುವಾಸಿಯಾದ ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಪೋಷಕರಿಗಾಗಿ ವಿಶೇಷ ಓರಿಯೆಂಟೇಶನ್ ಕಾರ್ಯಕ್ರಮವನ್ನು ಮೇ 26ರಂದು ಆಯೋಜಿಸಲಾಯಿತು.

ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಪೋಷಕರನ್ನು ಉದ್ದೇಶಿಸಿ ಮಕ್ಕಳು ಈ ದೇಶದ ಆಸ್ತಿ, ಹೆತ್ತವರು ಮಕ್ಕಳಿಗೆ ಸಮಯ ನೀಡಿ ಅವರ ಕಲಿಕೆಗೆ ಪೂರಕವಾಗಿ ಸ್ಪಂದಿಸಬೇಕು.ನಮ್ಮ ಶಿಕ್ಷಣ ಸಂಸ್ಥೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳನ್ನು ಬೆಳೆಸುವ ಜವಾಬ್ದಾರಿ ನಮ್ಮದು ಎಂದರು.

ಎಕ್ಸೆಲ್ ಟೆಕ್ನೊ ಸ್ಕೂಲ್ ನ‌ ಮುಖ್ಯೋಪಾಧ್ಯಾಯರಾದ ಸುಮಿತ್ರಾ ಬಿ ಅವರು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆ, ಶಿಸ್ತು, ಕಲಿಕಾ ವಿಧಾನಗಳು ಮತ್ತು ಶಾಲೆಯ ನಿಯಮಾವಳಿಗಳು ಮತ್ತು ಮಕ್ಕಳ ಅಧ್ಯಯನದಲ್ಲಿ ಪೋಷಕರ ಪಾತ್ರದ ಮಹತ್ವವನ್ನು ವಿವರಿಸಿದರು. ಜೊತೆಗೆ ಹೊಸ ಶೈಕ್ಷಣಿಕ ವಿಧಾನಗಳು, ಚಟುವಟಿಕೆ ಆಧಾರಿತ ಕಲಿಕೆ ಮತ್ತು ವಿದ್ಯಾರ್ಥಿಗಳ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದ ವಿಷಯಗಳನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಸ್ಥರು, ಪ್ರಾಂಶುಪಾಲರು, ಶಿಕ್ಷಕರು ಹಾಗೂ ಪೋಷಕರು ಭಾಗವಹಿಸಿದರು.ಪೋಷಕರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡು ಕಾರ್ಯಕ್ರಮವನ್ನು ಮೆಚ್ಚುಗೆ ವ್ಯಕ್ತಪಡಿಸಿದರು. ಶಿಕ್ಷಕರಾದ ಚಂದ್ರಪ್ಪ ನಿರೂಪಿಸಿದರು.

Related posts

ನಿಡ್ಲೆ ನಾಗೇಶ್ ಕುಮಾರ್ ಕೆ.ಎಂ ಅಭಿಮಾನಿ ಬಳಗದಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ, ಕೊಡೆ ಹಾಗೂ ಹಣ್ಣು ಹಂಪಲು ಸಸಿಗಳ ವಿತರಣೆ

Suddi Udaya

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಬಹುಮಾನ ವಿತರಣಾ ಕಾರ್ಯಕ್ರಮ – ” ಪುರಸ್ಕಾರ 2024 “

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ಮುಂಡಾಜೆ: ಮೂರ್ತಿಲ್ಲಾಯ ಭಕ್ತ ವೃಂದ ವತಿಯಿಂದ ದೈವಸ್ಥಾನಕ್ಕೆ ದೇಣಿಗೆ ಹಸ್ತಾಂತರ

Suddi Udaya

ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಕ್ರೀಡೋತ್ಸವ: ನಡ ಸರಕಾರಿ ಪದವಿ ಪೂರ್ವ ಕಾಲೇಜು ರೇಂಜರ್ಸ್ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ರವರಿಗೆ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಶ್ರದ್ಧಾಂಜಲಿ ಅರ್ಪಣೆ

Suddi Udaya
error: Content is protected !!