24.5 C
ಪುತ್ತೂರು, ಬೆಳ್ತಂಗಡಿ
July 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಹಿಂದುಳಿದ ವರ್ಗ ಮೋರ್ಚಾದ ಪೂರ್ಣ ಪ್ರಮಾಣದ ಸಭೆ

ಬೆಳ್ತಂಗಡಿ: ತಾಲೂಕು ಹಿಂದುಳಿದ ಮೋರ್ಚಾದ ಪೂರ್ಣ ಪ್ರಮಾಣದ ಸಭೆಯು ತಾಲೂಕು ಹಿಂದುಳಿದ ವರ್ಗ ಮೋರ್ಚಾದ ಅಧ್ಯಕ್ಷ ರತ್ನಾಕರ ಬುಣ್ಣನ್ ಅವರ ಅಧ್ಯಕ್ಷತೆಯಲ್ಲಿ ಮೇ 26 ರಂದು ನಡೆಯಿತು.

ಸಭೆಯಲ್ಲಿ ಜಿಲ್ಲಾ ಹಿಂದುಳಿದ ವರ್ಗ ಮೋರ್ಚಾದ ಜಿಲ್ಲಾ ಅಧ್ಯಕ್ಷ ಮಹೇಶ್ ಜೋಗಿ ಉಪಸ್ಥಿತರಿದ್ದು ಮೋರ್ಚಾದ ಕಾರ್ಯ ಚಟುವಟಿಕೆಯ ಬಗ್ಗೆ ಹಾಗೂ ಸಂಘಟನೆಯನ್ನು ಗಟ್ಟಿಗೊಳಿಸುವ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಮೋರ್ಚಾದ ಪ್ರಭಾರಿಗಳಾದ ಚಂದ್ರಶೇಖರ್ ಪೆನ್ನ ಅವರು ಶಕ್ತಿಕೇಂದ್ರ ಮಟ್ಟ ಹಾಗೂ ಬೂತುಮಟ್ಟದಲ್ಲಿ ಸಂಘಟನೆ ದೃಷ್ಟಿಯಲ್ಲಿ ಐದು ಜನರ ತಂಡವನ್ನು ಕಟ್ಟಿ ಮೋರ್ಚಾವನ್ನು ಬಲಗೊಳಿಸಬೇಕೆಂದು ಮಾಹಿತಿ ನೀಡಿದರು. ಹಿಂದುಳಿದ ವರ್ಗ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಶಿಧರ ಕಲ್ಮಂಜ ಅವರು ಮೋರ್ಚಾ ಪದಾಧಿಕಾರಿಗಳು ಸಂಘಟನೆ ಬಲಗೊಳ್ಳಲು ಕಾರ್ಯರೂಪದ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಹಿಂದುಳಿದ ವರ್ಗಮೋರ್ಚಾದ ಪ್ರಭಾರಿಗಳಾದ ಸೀತಾರಾಮ್ ಬೆಳಾಲು ರವರು ಮನ್ ಕಿ ಬಾತ್ ನ ಬಗ್ಗೆ ಮಾಹಿತಿ ನೀಡಿದರು.

ತಾಲೂಕಿನ ಮೋರ್ಚಾದ ಅಧ್ಯಕ್ಷ ರತ್ನಾಕರ್ ಬುಣ್ಣನ್ ರವರು ತಾಲೂಕಿನಲ್ಲಿ ಹಿಂದುಳಿದ ವರ್ಗಮೋರ್ಚಾ ಎಲ್ಲಾ ಬೂತುಗಳನ್ನು ಒಳಗೊಂಡಂತೆ ಶಕ್ತಿಕೇಂದ್ರದ ಮಟ್ಟದಲ್ಲಿ ಸಂಘಟನೆ ವೃದ್ಧಿಸುವಂತೆ ಮಾಹಿತಿ ನೀಡಿದರು. ಎಲ್ಲಾ ಪದಾಧಿಕಾರಿಗಳಿಗೆ ಹಾಗೂ ಸದಸ್ಯರಿಗೆ ಅಧ್ಯಕ್ಷರು ಶಾಲು ಹಾಕಿ ಗೌರವಿಸಿದರು. ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಸುಧೀರ್ ಭಂಡಾರಿ ಹಾಗೂ ವಿಠಲ ಆಚಾರ್ಯ ಉಪಸ್ಥಿತರಿದ್ದರು. ಸುಧೀರ್ ಭಂಡಾರಿ ಸ್ವಾಗತಿಸಿ. ರಾಜೇಶ್ ಮೂಡಿಕೋಡಿ ಧನ್ಯವಾದವಿತ್ತರು.

Related posts

ಶಿಶಿಲ: ಉಚಿತ ನೇತ್ರ ಚಿಕಿತ್ಸಾ ಶಿಬಿರ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ, ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

Suddi Udaya

ಮದ್ದಡ್ಕ ರೀನು ಫೂಟ್ ವೆರ್ ನ ಅಂಗಡಿ ಮಾಲಕ ಸುಮೋದ್ ದಾಸ್ ಹೃದಯಾಘಾತದಿಂದ ನಿಧನ

Suddi Udaya

ನಿಡ್ಲೆ: ಅಪಾಯದಂಚಿನಲ್ಲಿರುವ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷರಾಗಿ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷರಾಗಿ ಅಶೋಕ ಪಿ ಆಯ್ಕೆ

Suddi Udaya

ಕೆ.ಎಸ್.ಟಿ.ಎ ವೇಣೂರು ಟೈಲರ್ಸ್ ವಲಯದ ಮಹಾಸಭೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!