31.1 C
ಪುತ್ತೂರು, ಬೆಳ್ತಂಗಡಿ
May 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಹಿಂದುಳಿದ ವರ್ಗ ಮೋರ್ಚಾದ ಪೂರ್ಣ ಪ್ರಮಾಣದ ಸಭೆ

ಬೆಳ್ತಂಗಡಿ: ತಾಲೂಕು ಹಿಂದುಳಿದ ಮೋರ್ಚಾದ ಪೂರ್ಣ ಪ್ರಮಾಣದ ಸಭೆಯು ತಾಲೂಕು ಹಿಂದುಳಿದ ವರ್ಗ ಮೋರ್ಚಾದ ಅಧ್ಯಕ್ಷ ರತ್ನಾಕರ ಬುಣ್ಣನ್ ಅವರ ಅಧ್ಯಕ್ಷತೆಯಲ್ಲಿ ಮೇ 26 ರಂದು ನಡೆಯಿತು.

ಸಭೆಯಲ್ಲಿ ಜಿಲ್ಲಾ ಹಿಂದುಳಿದ ವರ್ಗ ಮೋರ್ಚಾದ ಜಿಲ್ಲಾ ಅಧ್ಯಕ್ಷ ಮಹೇಶ್ ಜೋಗಿ ಉಪಸ್ಥಿತರಿದ್ದು ಮೋರ್ಚಾದ ಕಾರ್ಯ ಚಟುವಟಿಕೆಯ ಬಗ್ಗೆ ಹಾಗೂ ಸಂಘಟನೆಯನ್ನು ಗಟ್ಟಿಗೊಳಿಸುವ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಮೋರ್ಚಾದ ಪ್ರಭಾರಿಗಳಾದ ಚಂದ್ರಶೇಖರ್ ಪೆನ್ನ ಅವರು ಶಕ್ತಿಕೇಂದ್ರ ಮಟ್ಟ ಹಾಗೂ ಬೂತುಮಟ್ಟದಲ್ಲಿ ಸಂಘಟನೆ ದೃಷ್ಟಿಯಲ್ಲಿ ಐದು ಜನರ ತಂಡವನ್ನು ಕಟ್ಟಿ ಮೋರ್ಚಾವನ್ನು ಬಲಗೊಳಿಸಬೇಕೆಂದು ಮಾಹಿತಿ ನೀಡಿದರು. ಹಿಂದುಳಿದ ವರ್ಗ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಶಿಧರ ಕಲ್ಮಂಜ ಅವರು ಮೋರ್ಚಾ ಪದಾಧಿಕಾರಿಗಳು ಸಂಘಟನೆ ಬಲಗೊಳ್ಳಲು ಕಾರ್ಯರೂಪದ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಹಿಂದುಳಿದ ವರ್ಗಮೋರ್ಚಾದ ಪ್ರಭಾರಿಗಳಾದ ಸೀತಾರಾಮ್ ಬೆಳಾಲು ರವರು ಮನ್ ಕಿ ಬಾತ್ ನ ಬಗ್ಗೆ ಮಾಹಿತಿ ನೀಡಿದರು.

ತಾಲೂಕಿನ ಮೋರ್ಚಾದ ಅಧ್ಯಕ್ಷ ರತ್ನಾಕರ್ ಬುಣ್ಣನ್ ರವರು ತಾಲೂಕಿನಲ್ಲಿ ಹಿಂದುಳಿದ ವರ್ಗಮೋರ್ಚಾ ಎಲ್ಲಾ ಬೂತುಗಳನ್ನು ಒಳಗೊಂಡಂತೆ ಶಕ್ತಿಕೇಂದ್ರದ ಮಟ್ಟದಲ್ಲಿ ಸಂಘಟನೆ ವೃದ್ಧಿಸುವಂತೆ ಮಾಹಿತಿ ನೀಡಿದರು. ಎಲ್ಲಾ ಪದಾಧಿಕಾರಿಗಳಿಗೆ ಹಾಗೂ ಸದಸ್ಯರಿಗೆ ಅಧ್ಯಕ್ಷರು ಶಾಲು ಹಾಕಿ ಗೌರವಿಸಿದರು. ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಸುಧೀರ್ ಭಂಡಾರಿ ಹಾಗೂ ವಿಠಲ ಆಚಾರ್ಯ ಉಪಸ್ಥಿತರಿದ್ದರು. ಸುಧೀರ್ ಭಂಡಾರಿ ಸ್ವಾಗತಿಸಿ. ರಾಜೇಶ್ ಮೂಡಿಕೋಡಿ ಧನ್ಯವಾದವಿತ್ತರು.

Related posts

ಸಹೋದರರಿಬ್ಬರು ಒಂದೇ ದಿನ ನಿಧನ

Suddi Udaya

ಮೃತದೇಹ ಹೂತು ಹಾಕಿದ ಪ್ರಕರಣ: 17 ನೇ ಗುರುತಿನಲ್ಲಿ ಸಿಗದ ಅಸ್ಥಿಪಂಜರ

Suddi Udaya

ಎಸ್ಸೆಸ್ಸೆಲ್ಸಿ ಮರು ಮೌಲ್ಯಮಾಪನ: ನಾರಾವಿಯ ಸಾನಿಧ್ಯ ರಾವ್‌ ರಾಜ್ಯಕ್ಕೆ ಪ್ರಥಮ

Suddi Udaya

ಅ.26: ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪುರಸ್ಕಾರ ಪರೀಕ್ಷೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳಾದ ಜೈದೀಪ್ ಗೌಡ ಹಾಗೂ ರಕ್ಷಣ್ ಶೆಟ್ಟಿ ತೇರ್ಗಡೆ

Suddi Udaya
error: Content is protected !!