26.2 C
ಪುತ್ತೂರು, ಬೆಳ್ತಂಗಡಿ
August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಮಂತ್ರಣ ವೇದಿಕೆಯ ಅಧ್ಯಕ್ಷೆ ವಿದ್ಯಾಶ್ರೀ ಅಡೂರ್ ರವರ “ಕವಿತೆಯೆoಬ ಕೇದಗೆ” ಭಾವಗೀತೆಯ ಧ್ವನಿ ಮುದ್ರಣ ಬಿಡುಗಡೆ

ಬೆಳ್ತಂಗಡಿ:ಮಂಗಳೂರಿನ ನಂತೂರು ಸಂದೇಶ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಆಮಂತ್ರಣ ವೇದಿಕೆಯ ಅಧ್ಯಕ್ಷೆ, ಸಾಹಿತಿ, ಕವಯತ್ರಿ ಶ್ರೀಮತಿ ವಿದ್ಯಾಶ್ರೀ ಅಡೂರ್ ಅವರು ರಚಿಸಿ ಹಾಡಿರುವ ಕವಿತೆಯೆoಬ ಕೇದಗೆ ಎಂಬ ಭಾವಗೀತೆಯ ಧ್ವನಿ ಮುದ್ರಣ ಬಿಡುಗಡೆಗೊಂಡಿತು.

ಖ್ಯಾತ ಹಾಸ್ಯ ಬರಹಗಾರ್ತಿಯಾದ ಭುವನೇಶ್ವರಿ ಹೆಗಡೆ,ಕಲಾಪೋಷಕರಾದ ಭುಜಬಲಿ ಧರ್ಮಸ್ಥಳ, ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಭಾವಗೀತೆ ಲೋಕಾರ್ಪಣೆಯನ್ನು ನೆರವೇರಿಸಿದರು.

ಈ ಭಾವಗೀತೆಯನ್ನು ವಿದ್ಯಾಶ್ರೀ ಅವರ ಎರಡನೇ ಕವನಸಂಕಲನ ಭಾವಬೇತಾಳದಿಂದ ಆರಿಸಿಕೊಳ್ಳಲಾಗಿದೆ.ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಮಂಗಳೂರು ಘಟಕದ ಪದಪ್ರಧಾನ ಸಮಾರಂಭದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಂಗಳೂರು ಆಮಂತ್ರಣದ ನಿಯೋಜಿತ ಅಧ್ಯಕ್ಷರಾದ ಲತೇಶ್ ಪುತ್ರನ್, ದ. ಕ ಜಿಲ್ಲಾಧ್ಯಕ್ಷರಾದ ವಿಂಧ್ಯಾ ರೈ ಕಡೆಶಿವಾಲಯ, ಆಮಂತ್ರಣದ ರೂವಾರಿಯಾದ ವಿಜಯ್ ಕುಮಾರ್ ಜೈನ್ ಮತ್ತಿತರರು ಉಪಸ್ಥಿತರಿದ್ದರು.

Related posts

ಉಜಿರೆ ರುಡ್ ಸೆಟ್ ನಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣ: 9 ನೇ ಗುರುತಿನಲ್ಲಿ ಪತ್ತೆಯಾಗದ ಕಳೇಬರದ ಅವಶೇಷ

Suddi Udaya

ಕಕ್ಕಿಂಜೆ: ರವಿ ಗುರುಸ್ವಾಮಿ ಅಸೌಖ್ಯದಿಂದ ನಿಧನ

Suddi Udaya

ಜೆಸಿಐ ವಲಯ 15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ತರಬೇತಿ ಸಮ್ಮೇಳನ: ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಪ್ರಶಸ್ತಿ ಹಾಗೂ ಮನ್ನಣೆಗಳು

Suddi Udaya

ಬೆಳ್ತಂಗಡಿ ವಲಯದ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ವೈದ್ಯಕೀಯ ಸಹಾಯ ಹಸ್ತ

Suddi Udaya

ಉಜಿರೆ ಎಸ್.ಡಿ.ಎಂ ರತ್ನಮಾನಸ : ನೂತನ ವಿದ್ಯಾರ್ಥಿಗಳ ಪ್ರವೇಶೋತ್ಸವ ಸಮಾರಂಭ

Suddi Udaya
error: Content is protected !!