25.2 C
ಪುತ್ತೂರು, ಬೆಳ್ತಂಗಡಿ
August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ ಕಾರ್ಯಾಗಾರ

ಉಜಿರೆ: ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಜೀವನ ಕೌಶಲ್ಯಗಳು (ಸುಧಾರಿತ)” ಎಂಬ ವಿಷಯದ ಕುರಿತು ಉಜಿರೆ ಎಸ್‌.ಡಿ.ಎಂ ಪದವಿ ಕಾಲೇಜಿನ ಸಭಾಂಗಣದಲ್ಲಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಅಳಿಕೆಯ ಶ್ರೀ ಸತ್ಯಸಾಯಿ ಲೋಕ ಸೇವ ವಿದ್ಯಾಕೇಂದ್ರದ ಉಪ ಪ್ರಾಂಶುಪಾಲ ರಾಧಾಕೃಷ್ಣ ಹೊಳ್ಳ ಬಿ ಹಾಗೂ ಉಡುಪಿ ಶ್ರೀ ಮೂಕಾಂಬಿಕ ಪಬ್ಲಿಕ್ ಶಾಲೆಯ ಪ್ರೌಢಶಾಲಾ ವಿಭಾಗದ ಸಂಯೋಜಕಿ ಶ್ರೀಮತಿ ದಿವ್ಯ ಜೆ. ಎಸ್ ಇವರು ಜೀವನ ಕೌಶಲ ವಿಷಯದ ಕುರಿತು ಕಾರ್ಯ ಚಟುವಟಿಕೆಗಳೊಂದಿಗೆ ಉಪಯುಕ್ತ ಮಾಹಿತಿಗಳನ್ನು ಹಂಚಿಕೊಂಡರು.

ಕಾರ್ಯಾಗಾರದಲ್ಲಿ ಮಂಗಳೂರು ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ, ಪೋದಾರ್ ಇಂಟರ್ನಾಷನಲ್ ಶಾಲೆ, ಮೂಡಬಿದ್ರೆಯ ಎಕ್ಸಲೆಂಟ್ ಶಾಲೆಯ ಶಿಕ್ಷಕರು ಭಾಗಿಯಾಗಿದ್ದರು.

ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದ ಕಾರ್ಯಾಗಾರದಲ್ಲಿ ಶಿಕ್ಷಕಿ ಮಧುರ ನಿರೂಪಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ವಕೀಲ ನಾರಾಯಣ ಸ್ವಾಮಿ ಭೇಟಿ

Suddi Udaya

ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸುವ ಉದ್ದೇಶ ಹಾಗೂ ಆದರ್ಶ ಗಣೇಶೋತ್ಸವದ ಆಚರಣೆ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮಾಹಿತಿ

Suddi Udaya

ಕರಂಬಾರು: ಕಾಜಿಮುಗೇರು ಗೇರು ತೋಟಕ್ಕೆ ಬೆಂಕಿ

Suddi Udaya

ಜಿಪ್ಸಿ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಬಳಂಜ ಶಾಲಾ ಮುಖ್ಯೋಪಾಧ್ಯಾಯರಿಗೆ ಗಂಭೀರ ಗಾಯ

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ

Suddi Udaya

ಶ್ರೀ ಧರ್ಮಸ್ಥಳ ದೀಪೋತ್ಸವದ ಪ್ರಯುಕ್ತ ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರ ಶ್ರೀ ಸಾಯಿ ನಗರ ಸದಸ್ಯರಿಂದ ಭಜನಾ ಸಂಕೀರ್ತನ್ ಕಾರ್ಯಕ್ರಮ

Suddi Udaya
error: Content is protected !!