July 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್

ಗಸ್ತಿನಲ್ಲಿದ್ದ ಉರ್ವಾ ಠಾಣಾ ಪೊಲೀಸ್ ಕಾನ್‌ಸ್ಟೇಬಲ್ ಮೇಲೆ ಬೈಕ್ ಸಹಸವಾರನಿಂದ ಹಲ್ಲೆ

ಬೆಳ್ತಂಗಡಿ : ರಾತ್ರಿ ವೇಳೆ ವಾಹನಗಳ ತಪಾಸಣೆ ನಡೆಸುತ್ತಿದ್ದ ಉರ್ವಾ ಠಾಣಾ ಪೊಲೀಸ್‌ ಕಾನ್‌ಸ್ಟೇಬಲ್ ಒಬ್ಬರ ಮೇಲೆ ದ್ವಿಚಕ್ರ ವಾಹನದಲ್ಲಿ ಬಂದ ಯುವಕರು ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಗರದ ಉರ್ವ ಠಾಣೆ ವ್ಯಾಪ್ತಿಯ ಕೋಡಿಕಲ್ ನಾರಾಯಣಗುರು ಕೋ ಆಪರೇಟಿವ್ ಸೊಸೈಟಿ ಬಳಿ ಮೇ 23ರಂದು ತಡರಾತ್ರಿ ಎರಡು ಗಂಟೆ ಸುಮಾರಿಗೆ ನಡೆದಿದೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸ್ಥಳದಲ್ಲಿ ಇಬ್ಬರು ಪೊಲೀಸ್‌ ಕಾನ್‌ಸ್ಟೇಬಲ್ ಕರ್ತವ್ಯ ನಿರತರಾಗಿದ್ದ ವೇಳೆ ಇಬ್ಬರು ಯುವಕರು ದ್ವಿಚಕ್ರ ವಾಹನವೊಂದರಲ್ಲಿ ಅತಿ ವೇಗವಾಗಿ ತೆರಳಿದ್ದರು. ವಾಹನ ನಿಲ್ಲಿಸುವಂತೆ ಪೊಲೀಸರು ಸೂಚನೆ ನೀಡಿದರೂ ಲೆಕ್ಕಿಸದೆ ಸಾಗಿದ್ದರು. ಆನಂತರ ಅದೇ ಮಾರ್ಗದಲ್ಲಿ ಬಂದ ಯುವಕರು ಸಿಮೆಂಟ್ ಶೀಟ್‌ನ ತುಂಡನ್ನು ಹಿಡಿದು ಪೊಲೀಸ್ ಕಾನ್‌ಸ್ಟೇಬಲ್ ಒಬ್ಬರ ಮೇಲೆ ನೇರವಾಗಿ ಹೊಡೆದು ಪರಾರಿಯಾಗಿದ್ದಾರೆ.

ಪೊಲೀಸ್‌ ಕಾನ್‌ಸ್ಟೇಬಲ್ ಹನುಮಂತ ಕಂಠಿ ಎಂಬವರು ಏಟಿನಿಂದ ತಪ್ಪಿಸಿಕೊಳ್ಳಲು ಕೆಳಕ್ಕೆ ಬಗ್ಗಿದ್ದರಿಂದ ಹಲ್ಲೆಯಿಂದ ಪಾರಾಗಿದ್ದಾರೆ. ಆದರೂ ತಲೆಯ ಭಾಗಕ್ಕೆ ಪೆಟ್ಟು ಬಿದ್ದು ಗಾಯವಾಗಿದೆ ಎಂದು ಉರ್ವಾ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

Related posts

ಪ್ರಥಮ ತಾಲೂಕು ಅಧಿವೇಶನಕ್ಕೆ ಸಜ್ಜಾಗುತಿದೆ ಬೆಳ್ತಂಗಡಿ ಅಭಾಸಾಪ: ಡಿ.22 ರಂದು ಬಲಿಪ ರೆಸಾರ್ಟಿನಲ್ಲಿ ಅಧಿವೇಶನ

Suddi Udaya

ಉಜಿರೆ:ಕಾಲಭೈರವ ಆರ್ಕೇಡ್ ನಲ್ಲಿ ಸಮೃದ್ದಿ ಟ್ರೇಡರ್ಸ್ ದಿನಸಿ ಮಳಿಗೆ ಶುಭಾರಂಭ

Suddi Udaya

ವಿದ್ವತ್ ಭರವಸೆ: ಪ್ರತಿಭಾನ್ವಿತರಿಗೆ ಉಚಿತ ಶಿಕ್ಷಣ

Suddi Udaya

ವೇಣೂರು: ಮಹಾವೀರ ನಗರ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ವೇಣೂರು ಲಯನ್ಸ್ ಕ್ಲಬ್ ಗೆ ಪ್ರಾಂತ್ಯ ಅಧ್ಯಕ್ಷರ ಭೇಟಿ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ವಿದ್ಯಾರ್ಥಿನಿ ಸಂಜನಾ

Suddi Udaya
error: Content is protected !!