31.1 C
ಪುತ್ತೂರು, ಬೆಳ್ತಂಗಡಿ
May 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ :ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಓರಿಯೆಂಟೇಶನ್

ಗುರುವಾಯನಕೆರೆ: ಗುಣಮಟ್ಟದ ಹಾಗೂ ಸಂಸ್ಕಾರಯುತ ಶಿಕ್ಷಣಕ್ಕೆ ಹೆಸರುವಾಸಿಯಾದ ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಪೋಷಕರಿಗಾಗಿ ವಿಶೇಷ ಓರಿಯೆಂಟೇಶನ್ ಕಾರ್ಯಕ್ರಮವನ್ನು ಮೇ 26ರಂದು ಆಯೋಜಿಸಲಾಯಿತು.

ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಪೋಷಕರನ್ನು ಉದ್ದೇಶಿಸಿ ಮಕ್ಕಳು ಈ ದೇಶದ ಆಸ್ತಿ, ಹೆತ್ತವರು ಮಕ್ಕಳಿಗೆ ಸಮಯ ನೀಡಿ ಅವರ ಕಲಿಕೆಗೆ ಪೂರಕವಾಗಿ ಸ್ಪಂದಿಸಬೇಕು.ನಮ್ಮ ಶಿಕ್ಷಣ ಸಂಸ್ಥೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳನ್ನು ಬೆಳೆಸುವ ಜವಾಬ್ದಾರಿ ನಮ್ಮದು ಎಂದರು.

ಎಕ್ಸೆಲ್ ಟೆಕ್ನೊ ಸ್ಕೂಲ್ ನ‌ ಮುಖ್ಯೋಪಾಧ್ಯಾಯರಾದ ಸುಮಿತ್ರಾ ಬಿ ಅವರು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆ, ಶಿಸ್ತು, ಕಲಿಕಾ ವಿಧಾನಗಳು ಮತ್ತು ಶಾಲೆಯ ನಿಯಮಾವಳಿಗಳು ಮತ್ತು ಮಕ್ಕಳ ಅಧ್ಯಯನದಲ್ಲಿ ಪೋಷಕರ ಪಾತ್ರದ ಮಹತ್ವವನ್ನು ವಿವರಿಸಿದರು. ಜೊತೆಗೆ ಹೊಸ ಶೈಕ್ಷಣಿಕ ವಿಧಾನಗಳು, ಚಟುವಟಿಕೆ ಆಧಾರಿತ ಕಲಿಕೆ ಮತ್ತು ವಿದ್ಯಾರ್ಥಿಗಳ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದ ವಿಷಯಗಳನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಸ್ಥರು, ಪ್ರಾಂಶುಪಾಲರು, ಶಿಕ್ಷಕರು ಹಾಗೂ ಪೋಷಕರು ಭಾಗವಹಿಸಿದರು.ಪೋಷಕರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡು ಕಾರ್ಯಕ್ರಮವನ್ನು ಮೆಚ್ಚುಗೆ ವ್ಯಕ್ತಪಡಿಸಿದರು. ಶಿಕ್ಷಕರಾದ ಚಂದ್ರಪ್ಪ ನಿರೂಪಿಸಿದರು.

Related posts

ಮಾಲಾಡಿಯಲ್ಲಿ ಹಿಂದೂ ರುದ್ರಭೂಮಿ ಲೋಕಾರ್ಪಣೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಿಂದ ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಿಯವರೆಗೆ ಶಿಲಾಮಯ ಧ್ವಜ ಸ್ತಂಭದ ವಿಜೃಂಭಣೆಯ ಮೆರವಣಿಗೆ

Suddi Udaya

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಜೂನಿಯರ್ ರೆಡ್ ಕ್ರಾಸ್ ವತಿಯಿಂದ ಹಾಗೂ ಇಂಟರ್ನೆಟ್ ಕ್ಲಬ್ ಆಶ್ರಯದಲ್ಲಿ ಶುಗರ್ ಹಾಗೂ ಬಿಪಿ ತಪಾಸಣೆ

Suddi Udaya

ಸೌತಡ್ಕ ದೇವಳದ ಸಮೀಪದಿಂದ ದನ ಕಳವು

Suddi Udaya

ಮಾ.30-ಎ.2: ಪಿಲ್ಯ ಬರಯ-ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಭಗೀನಿಯರ ಸುವರ್ಣ ಸಂಭ್ರಮ: ಧರ್ಮಾಧ್ಯಕ್ಷರಿಂದ ಗೌರವ ಮತ್ತು ಅಭಿನಂದನೆ

Suddi Udaya
error: Content is protected !!