23.7 C
ಪುತ್ತೂರು, ಬೆಳ್ತಂಗಡಿ
July 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ :ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಓರಿಯೆಂಟೇಶನ್

ಗುರುವಾಯನಕೆರೆ: ಗುಣಮಟ್ಟದ ಹಾಗೂ ಸಂಸ್ಕಾರಯುತ ಶಿಕ್ಷಣಕ್ಕೆ ಹೆಸರುವಾಸಿಯಾದ ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಪೋಷಕರಿಗಾಗಿ ವಿಶೇಷ ಓರಿಯೆಂಟೇಶನ್ ಕಾರ್ಯಕ್ರಮವನ್ನು ಮೇ 26ರಂದು ಆಯೋಜಿಸಲಾಯಿತು.

ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಪೋಷಕರನ್ನು ಉದ್ದೇಶಿಸಿ ಮಕ್ಕಳು ಈ ದೇಶದ ಆಸ್ತಿ, ಹೆತ್ತವರು ಮಕ್ಕಳಿಗೆ ಸಮಯ ನೀಡಿ ಅವರ ಕಲಿಕೆಗೆ ಪೂರಕವಾಗಿ ಸ್ಪಂದಿಸಬೇಕು.ನಮ್ಮ ಶಿಕ್ಷಣ ಸಂಸ್ಥೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳನ್ನು ಬೆಳೆಸುವ ಜವಾಬ್ದಾರಿ ನಮ್ಮದು ಎಂದರು.

ಎಕ್ಸೆಲ್ ಟೆಕ್ನೊ ಸ್ಕೂಲ್ ನ‌ ಮುಖ್ಯೋಪಾಧ್ಯಾಯರಾದ ಸುಮಿತ್ರಾ ಬಿ ಅವರು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆ, ಶಿಸ್ತು, ಕಲಿಕಾ ವಿಧಾನಗಳು ಮತ್ತು ಶಾಲೆಯ ನಿಯಮಾವಳಿಗಳು ಮತ್ತು ಮಕ್ಕಳ ಅಧ್ಯಯನದಲ್ಲಿ ಪೋಷಕರ ಪಾತ್ರದ ಮಹತ್ವವನ್ನು ವಿವರಿಸಿದರು. ಜೊತೆಗೆ ಹೊಸ ಶೈಕ್ಷಣಿಕ ವಿಧಾನಗಳು, ಚಟುವಟಿಕೆ ಆಧಾರಿತ ಕಲಿಕೆ ಮತ್ತು ವಿದ್ಯಾರ್ಥಿಗಳ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದ ವಿಷಯಗಳನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಸ್ಥರು, ಪ್ರಾಂಶುಪಾಲರು, ಶಿಕ್ಷಕರು ಹಾಗೂ ಪೋಷಕರು ಭಾಗವಹಿಸಿದರು.ಪೋಷಕರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡು ಕಾರ್ಯಕ್ರಮವನ್ನು ಮೆಚ್ಚುಗೆ ವ್ಯಕ್ತಪಡಿಸಿದರು. ಶಿಕ್ಷಕರಾದ ಚಂದ್ರಪ್ಪ ನಿರೂಪಿಸಿದರು.

Related posts

ಮಾ.17 : ಬೆಳ್ತಂಗಡಿ, ಧರ್ಮಸ್ಥಳ,ಕಕ್ಕಿಂಜೆ ಹಾಗೂ ವೇಣೂರು ವಿದ್ಯುತ್ ಉಪಕೇಂದ್ರಗಳಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮೇ 20: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ: ಅಳದಂಗಡಿಯಲ್ಲಿ ರೋಡ್ ಶೋ, ವಿಜಯೋತ್ಸವ- ಸಂದೀಪ್ ನೀರಲ್ಕೆ

Suddi Udaya

ಗೇರುಕಟ್ಟೆ: ಹಿದಾಯ ತುಸ್ಸಿಬಿಯಾನ್ ಮದರಸದಲ್ಲಿ ಈದ್ ಮಿಲಾದ್ ಪ್ರಯುಕ್ತ ಮದರಸ ಮಕ್ಕಳ ಕಲಾ ಕಲರವ ಕಾರ್ಯಕ್ರಮ “ಎಂಬ್ರೆಝ್ ಮದೀನಾ”

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ಅಧಿಕಾರ ಸ್ವೀಕಾರ

Suddi Udaya

ನಿಡ್ಲೆ: ನೆಡಿಲು ನಾರಾಯಣ ಗೌಡರವರ ತೋಟಕ್ಕೆ ನುಗ್ಗಿದ್ದ ಒಂಟಿ ಸಲಗ: ಹಲವು ಬಾಳೆ ಗಿಡ ಹಾಗೂ ಅಡಿಕೆ ಗಿಡಗಳಿಗೆ ಹಾನಿ

Suddi Udaya

ಬೆಳ್ತಂಗಡಿ : ಪಟಾಕಿ ಅಂಗಡಿಗಳಿಗೆ ಅಧಿಕಾರಿಗಳಿಂದ ಪರಿಶೀಲನೆ: ಪಟಾಕಿ ದಾಸ್ತಾನು ಮಾಡಿದ್ದ ಮೂರು ಗೋದಾಮಿಗೆ ಬೀಗ

Suddi Udaya
error: Content is protected !!