25.2 C
ಪುತ್ತೂರು, ಬೆಳ್ತಂಗಡಿ
August 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ಮಕ್ಕಳ ವ್ಯಕ್ತಿತ್ವ‌ ವಿಕಸನ ಸಮಾರೋಪ ಸಮಾರಂಭ ಹಾಗೂ ಭಜನೋಚ್ಚಯ ಕಾರ್ಯಕ್ರಮ

ತಣ್ಣೀರುಪಂತ: ಶ್ರೀ ಶಾರದಾಂಬ ಭಜನಾ ಮಂಡಳಿ ತಣ್ಣೀರುಪಂಥ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಗುರುವಾಯನಕೆರೆ ಇವರ ಸಹಯೋಗದೊಂದಿಗೆ ನಾಲ್ಕು ದಿನಗಳ ಕಾಲ ನಡೆದ ಭಜನಾ ತರಬೇತಿ ಹಾಗೂ ಮಕ್ಕಳ ವ್ಯಕ್ತಿತ್ವ ವಿಕಸನ ತರಬೇತಿ ಶಿಬಿರದ ಸಮಾರೋಪ ಮತ್ತು ಭಜನೋತ್ಸವ ಕಾರ್ಯಕ್ರಮ ಶಾರದಾಂಬ ಭಜನಾ ಮಂದಿರದಲ್ಲಿ ನಡೆಯಿತು.

ಗುರುವಾಯನಕೆರೆ ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಜಗದೀಶ್ ಶೆಟ್ಟಿ ಮೈರ ಸಭಾಕ್ಷತೆ ಅಧ್ಯಕ್ಷತೆಯನ್ನು ವಹಿಸಿದ್ದರು. ಭಜನಾ ಗುರುಗಳು ಹಾಗೂ ಗುರುವಾಯನಕೆರೆ ತಾಲೂಕು ಪರಿಷತ್ ಕಾರ್ಯದರ್ಶಿ ಸಂದೇಶ್ ಮದ್ದಡ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಬಿರಾರ್ಥಿ ಮಕ್ಕಳಿಗೆ ಹಾಗೂ ಪೊಷಕರಿಗೆ ನಡೆಸಲಾಗಿದ್ದ ಸಾಂಸ್ಕೃತಿಕ, ಆಟೋಟ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ವೇದಿಕೆಯಲ್ಲಿ ಭಜನಾ ಪರಿಷತ್ ರಾಜ್ಯಾಧ್ಯಕ್ಷ ಚಂದ್ರಶೇಖರ್ ಸಾಲಿಯಾನ್ , ಸುನಿಲ್ ಕುಮಾರ್ ಅಗರಿ ಸದಾನಂದ ಶೆಟ್ಟಿ ಮಡಪ್ಪಾಡಿ, ಸುರೇಶ್ ಕಳಾಯಿ, ಚಂದ್ರಹಾಸ್ ಪಕಳ, ಪ್ರಭಾಕರ ಪೊಸಂದೋಡಿ, ಗಂಗಯ್ಯ ನಾಯ್ಕ್, ವಸಂತ ಮಡಕ್ಕಿಲ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಪ್ರಸನ್ನ, ಗಗನ್ , ಚರಣ್, ತನಿಷ್ ಪ್ರಾರ್ಥನೆ ಹಾಡಿದರು. ಶಿಬಿರದಲ್ಲಿ ಪಾಲ್ಗೊಂಡ ಎಲ್ಲಾ ಮಕ್ಕಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನೀಡಲಾದ ಪ್ರಮಾಣ ಪತ್ರವನ್ನು ನೀಡಲಾಯಿತು. ಭಜೋರೆ ಮಾರುತಿ ಕುಣಿತ ಭಜನಾ ತರಬೇತುದಾರರ ತಂಡ ಬೆಳ್ತಂಗಡಿ ಇವರ ನೇತೃತ್ವದಲ್ಲಿ ಅಳಕ್ಕೆ ಭಜನೋತ್ಸವ ನಡೆಯಿತು. ಊರ ಪರಊರ ಅಪಾರ ಭಗವದ್ಭಕ್ತರು ಭಾಗವಹಿಸಿದ್ದರು. ಸಂಘಟಕರು ಹಾಗೂ ಭಜನಾ ಮಂದಿರದ ಅಧ್ಯಕ್ಷ ಮಿಥುನ್ ಕುಲಾಲ್ ಅಳಕ್ಕೆಯವರು ಸ್ವಾಗತಿಸಿದರು. ಸಿಂಚನ್ ರೈ ಎಕ್ಕಳ ಧನ್ಯವಾದವಿತ್ತರು. ಭಜನಾ ಪರಿಷತ್ ಜಿಲ್ಲಾ ಸಮನ್ವಯ ಅಧಿಕಾರಿ ಸಂತೋಷ್ ಪಿ ಅಳಿಯೂರು ಕಾರ್ಯಕ್ರಮ ನಿರೂಪಿಸಿದರು.

Related posts

ಮೂರು ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟದ ಪ್ರಕರಣ ಪತ್ತೆ: ಪಿಕಪ್ ಸಹಿತ ವಾಹನದಲ್ಲಿದ್ದ 6 ದನ, 2 ಗಂಡು ಕರುಗಳು ಸೇರಿ ಒಟ್ಟು 8 ಜಾನುವಾರು ವಶ

Suddi Udaya

ಉಜಿರೆ ರಿಕ್ಷಾ ಪಾರ್ಕಿಂಗ್ ಸಮಸ್ಯೆ- ಶಾಸಕರ ನೇತೃತ್ವದಲ್ಲಿ ಸಭೆ :ವಾಹನ ಚಾಲಕರಿಗೆ, ಅಂಗಡಿ ಮಾಲಕರಿಗೆ ತೊಂದರೆ ಉಂಟಾಗದಂತೆ ಹೆದ್ದಾರಿ ಬದಿ ಗುರುತು ಹಾಕಿ ರಿಕ್ಷಾ ಪಾರ್ಕಿಂಗ್ ಗೆ ವ್ಯವಸ್ಥೆ: ಶಾಸಕರ ಭರವಸೆ

Suddi Udaya

ಬರೆಂಗಾಯ : ಮುಳಂಪಾಯ ಎಂಬಲ್ಲಿ ಏರ್‌ಟೆಲ್ ನೆಟ್ ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

Suddi Udaya

ಅನಾರೋಗ್ಯದಿಂದ ಬಳಲುತ್ತಿರುವ ಚೈತ್ರೇಶ್ ಮೊಗ್ರು ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಮಳೆಲ್ ಓರ್ ನಾಲ್ ಕ್ರೀಡಾಕೂಟ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ ಅಂತರಾಷ್ಟ್ರಿಯ ಯೋಗ ದಿನಾಚರಣೆ.

Suddi Udaya
error: Content is protected !!