24.5 C
ಪುತ್ತೂರು, ಬೆಳ್ತಂಗಡಿ
July 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿಸರ್ಕಾರಿ ಇಲಾಖಾ ಸುದ್ದಿ

ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ನೂತನ ಕಟ್ಟಡ ನಿರ್ಮಾಣಕ್ಕೆ ರೂ.2 ಕೋಟಿ ಅನುದಾನ ಬಿಡುಗಡೆ: ಹರೀಶ್ ಪೂಂಜ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿರುವ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ನೂತನ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರವು ರೂ.2 ಕೋಟಿ ಅನುದಾನವನ್ನು ಮಂಜೂರು ಮಾಡಿ ಬಿಡುಗಡೆಗೊಳಿಸಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

ಈ ವಸತಿ ಶಾಲೆಯ ನೂತನ ಕಟ್ಟಡ ನಿರ್ಮಾಣದ ಅಗತ್ಯತೆಯನ್ನು ಮನಗಂಡು, ಸಂಬಂಧಿತ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಶಾಲೆಯಲ್ಲಿನ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿ, ಮೂಲಸೌಕರ್ಯಗಳ ಕೊರತೆ ಹಾಗೂ ಹೆಚ್ಚುತ್ತಿರುವ ಅಗತ್ಯತೆಯನ್ನು ಪರಿಗಣಿಸಿದ ರಾಜ್ಯ ಸರ್ಕಾರವು ಕಾಮಗಾರಿಗೆ ಅನುಮೋದನೆ ನೀಡಿ ರೂ.2.00 ಕೋಟಿ ಅನುದಾನ ಬಿಡುಗಡೆಗೊಳಿಸಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆದಿವಾಸಿ ಹಾಗೂ ಬುಡಕಟ್ಟು ಸಮುದಾಯದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದ ವಾತಾವರಣ, ಸುರಕ್ಷಿತ ವಸತಿ ವ್ಯವಸ್ಥೆ ಮತ್ತು ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಈ ನೂತನ ಕಟ್ಟಡ ನಿರ್ಮಾಣವು ಮಹತ್ವದ ಹೆಜ್ಜೆಯಾಗಲಿದೆ. ಇದರಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಪೂರಕವಾದ ಪರಿಸರ ನಿರ್ಮಾಣವಾಗಲಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಹೊಸ ಉತ್ತೇಜನ ಸಿಗಲಿದೆ ಎಂದು ಶಾಸಕ ಹರೀಶ್ ಪೂಂಜ ಅಭಿಪ್ರಾಯಪಟ್ಟಿದ್ದಾರೆ.ಸದರಿ ಕಾಮಗಾರಿಗೆ ಅನುದಾನ ಮಂಜೂರು ಮಾಡಲು ಸಹಕರಿಸಿದ ರಾಜ್ಯ ಸರ್ಕಾರ ಹಾಗೂ ಮಾನ್ಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಿಗೆ ತಾಲೂಕಿನ ಜನತೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಶಾಸಕ ಹರೀಶ್ ಪೂಂಜ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ವೇಣೂರು: ಮಹಾವೀರ ನಗರದ ನಿವಾಸಿ ವಿಜಯಮ್ಮ ನಿಧನ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಬಂಡೆ ಕಲ್ಲಿಗೆ ಲಾರಿ ಡಿಕ್ಕಿ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಲಾಯಿಲ : ಡಿಸೇಲ್ ಇಲ್ಲದೆ ಕೈಕೊಟ್ಟ ಕೆಎಸ್ಸಾರ್ಟಿಸಿ ಬಸ್: ಸಂದಿಗ್ಧ ಸ್ಥಿತಿಯಲ್ಲಿ ಪ್ರಯಾಣಿಕರು

Suddi Udaya

ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ರಿಗೆ ಗುಂಪಲಾಜೆ ಶ್ರೀ ನಾಗ ರಕ್ತೇಶ್ವರಿ ಸೇವಾ ಟ್ರಸ್ಟ್ ವತಿಯಿಂದ ಗೌರವಾರ್ಪಣೆ

Suddi Udaya

ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರವರು ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷ ಹರೀಶ್ ಕಾರಿಂಜರವರ ಮನೆಗೆ ಭೇಟಿ

Suddi Udaya

ಬೆಳ್ತಂಗಡಿ: ಅರುವ ಕೊರಗಪ್ಪ ಶೆಟ್ಟಿ ಅವರಿಗೆ “ಜಾನಪದ ಶ್ರೀ” ಪ್ರಶಸ್ತಿ

Suddi Udaya
error: Content is protected !!