25.2 C
ಪುತ್ತೂರು, ಬೆಳ್ತಂಗಡಿ
August 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಹಿಂದುಳಿದ ವರ್ಗ ಮೋರ್ಚಾದ ಪೂರ್ಣ ಪ್ರಮಾಣದ ಸಭೆ

ಬೆಳ್ತಂಗಡಿ: ತಾಲೂಕು ಹಿಂದುಳಿದ ಮೋರ್ಚಾದ ಪೂರ್ಣ ಪ್ರಮಾಣದ ಸಭೆಯು ತಾಲೂಕು ಹಿಂದುಳಿದ ವರ್ಗ ಮೋರ್ಚಾದ ಅಧ್ಯಕ್ಷ ರತ್ನಾಕರ ಬುಣ್ಣನ್ ಅವರ ಅಧ್ಯಕ್ಷತೆಯಲ್ಲಿ ಮೇ 26 ರಂದು ನಡೆಯಿತು.

ಸಭೆಯಲ್ಲಿ ಜಿಲ್ಲಾ ಹಿಂದುಳಿದ ವರ್ಗ ಮೋರ್ಚಾದ ಜಿಲ್ಲಾ ಅಧ್ಯಕ್ಷ ಮಹೇಶ್ ಜೋಗಿ ಉಪಸ್ಥಿತರಿದ್ದು ಮೋರ್ಚಾದ ಕಾರ್ಯ ಚಟುವಟಿಕೆಯ ಬಗ್ಗೆ ಹಾಗೂ ಸಂಘಟನೆಯನ್ನು ಗಟ್ಟಿಗೊಳಿಸುವ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಮೋರ್ಚಾದ ಪ್ರಭಾರಿಗಳಾದ ಚಂದ್ರಶೇಖರ್ ಪೆನ್ನ ಅವರು ಶಕ್ತಿಕೇಂದ್ರ ಮಟ್ಟ ಹಾಗೂ ಬೂತುಮಟ್ಟದಲ್ಲಿ ಸಂಘಟನೆ ದೃಷ್ಟಿಯಲ್ಲಿ ಐದು ಜನರ ತಂಡವನ್ನು ಕಟ್ಟಿ ಮೋರ್ಚಾವನ್ನು ಬಲಗೊಳಿಸಬೇಕೆಂದು ಮಾಹಿತಿ ನೀಡಿದರು. ಹಿಂದುಳಿದ ವರ್ಗ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಶಿಧರ ಕಲ್ಮಂಜ ಅವರು ಮೋರ್ಚಾ ಪದಾಧಿಕಾರಿಗಳು ಸಂಘಟನೆ ಬಲಗೊಳ್ಳಲು ಕಾರ್ಯರೂಪದ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಹಿಂದುಳಿದ ವರ್ಗಮೋರ್ಚಾದ ಪ್ರಭಾರಿಗಳಾದ ಸೀತಾರಾಮ್ ಬೆಳಾಲು ರವರು ಮನ್ ಕಿ ಬಾತ್ ನ ಬಗ್ಗೆ ಮಾಹಿತಿ ನೀಡಿದರು.

ತಾಲೂಕಿನ ಮೋರ್ಚಾದ ಅಧ್ಯಕ್ಷ ರತ್ನಾಕರ್ ಬುಣ್ಣನ್ ರವರು ತಾಲೂಕಿನಲ್ಲಿ ಹಿಂದುಳಿದ ವರ್ಗಮೋರ್ಚಾ ಎಲ್ಲಾ ಬೂತುಗಳನ್ನು ಒಳಗೊಂಡಂತೆ ಶಕ್ತಿಕೇಂದ್ರದ ಮಟ್ಟದಲ್ಲಿ ಸಂಘಟನೆ ವೃದ್ಧಿಸುವಂತೆ ಮಾಹಿತಿ ನೀಡಿದರು. ಎಲ್ಲಾ ಪದಾಧಿಕಾರಿಗಳಿಗೆ ಹಾಗೂ ಸದಸ್ಯರಿಗೆ ಅಧ್ಯಕ್ಷರು ಶಾಲು ಹಾಕಿ ಗೌರವಿಸಿದರು. ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಸುಧೀರ್ ಭಂಡಾರಿ ಹಾಗೂ ವಿಠಲ ಆಚಾರ್ಯ ಉಪಸ್ಥಿತರಿದ್ದರು. ಸುಧೀರ್ ಭಂಡಾರಿ ಸ್ವಾಗತಿಸಿ. ರಾಜೇಶ್ ಮೂಡಿಕೋಡಿ ಧನ್ಯವಾದವಿತ್ತರು.

Related posts

ವಿಶೇಷ ಸಹಕಾರಿ ಸಪ್ತಾಹದ ಪ್ರಯುಕ್ತ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಉಪ್ಪಿನಂಗಡಿಯಲ್ಲಿ 112ನೇ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಹಾಗೂ ದಂತ ಚಿಕಿತ್ಸಾ ಶಿಬಿರ

Suddi Udaya

ಬೆಳ್ತಂಗಡಿ : ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ: ಪೊಲೀಸರಿಂದ ತೀವ್ರಗೊಂಡ ಶೋಧ ಕಾರ್ಯ

Suddi Udaya

ಧರ್ಮಸ್ಥಳ ಪಾದಯಾತ್ರಿಗಳ ಸೇವೆಗಾಗಿ ಉಚಿತ ವೈದ್ಯಕೀಯ ಶಿಬಿರಗಳ ಉದ್ಘಾಟನೆ

Suddi Udaya

ಧರ್ಮಸ್ಥಳ: 25 ನೇ ವರ್ಷದ ಭಜನಾ ತರಬೇತಿ ಕಮ್ಮಟ ಸಮಾರೋಪ – ಭಜನೋತ್ಸವ ಸಮಾವೇಶ

Suddi Udaya

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ. ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ ಸ್ಥಾನ

Suddi Udaya

ಜೂ.19: ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯ ನಡೆಸಲು ಗ್ರಾಮಸ್ಥರ ಸಭೆ

Suddi Udaya
error: Content is protected !!