24.5 C
ಪುತ್ತೂರು, ಬೆಳ್ತಂಗಡಿ
July 15, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಬಳಿ 2012 ರಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ ಜೈಲಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ನ್ಯಾಯಲಯ CC No.3221/2018 ಕಲಂ- 379..201 IPC & 98 KP ACT ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದ ವಾರಂಟ್ ಆರೋಪಿ ಆಂದ್ರಪ್ರದೇಶ ರಾಜ್ಯದ ಸತ್ಯಸಾಯಿ ಜಿಲ್ಲೆಯ ರೊಲ್ಲ ಗ್ರಾಮದ ನಿವಾಸಿ ರಂಗನಾಥಪ್ಪ ಎಂಬವರ ಮಗನಾದ ರಂಗನಾಥ್(36) ಎಂಬಾತ ಕಳೆದ ಸುಮಾರು 10 ವರ್ಷಗಳಿಂದ ತಲೆ ಆರೋಪಿಯನ್ನು ಮೇ.25 ರಂದು ಆಂಧ್ರಪ್ರದೇಶದ ಸತ್ಯಶಾಯಿ ಜಿಲ್ಲೆಯಲ್ಲಿ ಮೇ.25 ರಂದು ಬಂಧಿಸಿ ಬಂಟ್ವಾಳ ನ್ಯಾಯಾಲಯಕ್ಕೆ ಮೇ.26 ರಂದು ಸಂಜೆ ಹಾಜರುಪಡಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿಣಿ ಸಿ.ಕೆ, ಪೊಲೀಸ್ ನಿರೀಕ್ಷಕರು ರವಿ.ಬಿ.ಎಸ್ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯ ಉಪ ನೀರಿಕ್ಷಕರಾದ ಆನಂದ ಮತ್ತು ಸಿಕಂದರ್ ಪಾಷಾ ನೇತೃತ್ವದ ಸಿಬ್ಬಂದಿ ಮಾಲತೇಶ್ ಮತ್ತು ಗೃಹರಕ್ಷಕ ದಳದ ಸಿಬ್ಬಂದಿ ಚಾಕು ತಂಡ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.*ಆರೋಪಿ ವಿರುದ್ಧ ಪ್ರಕರಣ:* ತಿರುಪತಿಯಲ್ಲಿ ಎರಡು ಪ್ರಕರಣ, ತಮಿಳುನಾಡಿನಲ್ಲಿ ನಾಲ್ಕು ಪ್ರಕರಣ, ಕೇರಳದಲ್ಲಿ ಎರಡು ಪ್ರಕರಣ, ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ 2012 ರಲ್ಲಿ ನೇತ್ರಾವತಿ ಸ್ನಾನ ಘಟ್ಟದಲ್ಲಿ ಕಳ್ಳತನ ಒಂದು ಪ್ರಕರಣ ದಾಖಲಾಗಿದೆ.

Related posts

ಇಂದಬೆಟ್ಟು: ಕರುವಲ್ಲ ಕಲ್ಲಗುಂಡ ದೇವಸ್ಥಾನ ಹಾಗೂ ಬಂಗಾಡಿ ಹಾಡಿ ದೈವಗಳ ಕಾಣಿಕೆ ಡಬ್ಬಿ ಕಳ್ಳತನ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರಕ್ಕೆ ನೂತನ ಪಲ್ಲಕ್ಕಿ ಸಮರ್ಪಣೆ

Suddi Udaya

ಮುಂಡಾಜೆ ಪಂಚಾಯತ್ ನಲ್ಲಿ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ

Suddi Udaya

ಬೆಳ್ತಂಗಡಿ:ಪೃಥ್ವಿ ಜ್ಯುವೆಲ್ಸ್ ನಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ,ಪೋಟೋ ವಿಜೇತರಿಗೆ ಪ್ರಶಸ್ತಿ

Suddi Udaya

ಲಾಯಿಲ ಗ್ರಾ.ಪಂ ಹಾಗೂ ನಡ ಗ್ರಾ.ಪಂ. ನಿಂದ “ಸ್ವಚತೆಯೇ ಸೇವೆ 2024” ಅಂದೋಲನದಡಿ ಬೃಹತ್ ಸ್ವಚ್ಚತಾ ಕಾರ್ಯಕ್ರಮ

Suddi Udaya

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ಹಾಗೂ ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದಿಂದ ನೂತನ ಸಂಸದ ಕ್ಯಾ| ಬ್ರಿಜೇಶ್ ಚೌಟ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!