34.3 C
ಪುತ್ತೂರು, ಬೆಳ್ತಂಗಡಿ
May 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಮಂತ್ರಣ ವೇದಿಕೆಯ ಅಧ್ಯಕ್ಷೆ ವಿದ್ಯಾಶ್ರೀ ಅಡೂರ್ ರವರ “ಕವಿತೆಯೆoಬ ಕೇದಗೆ” ಭಾವಗೀತೆಯ ಧ್ವನಿ ಮುದ್ರಣ ಬಿಡುಗಡೆ

ಬೆಳ್ತಂಗಡಿ:ಮಂಗಳೂರಿನ ನಂತೂರು ಸಂದೇಶ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಆಮಂತ್ರಣ ವೇದಿಕೆಯ ಅಧ್ಯಕ್ಷೆ, ಸಾಹಿತಿ, ಕವಯತ್ರಿ ಶ್ರೀಮತಿ ವಿದ್ಯಾಶ್ರೀ ಅಡೂರ್ ಅವರು ರಚಿಸಿ ಹಾಡಿರುವ ಕವಿತೆಯೆoಬ ಕೇದಗೆ ಎಂಬ ಭಾವಗೀತೆಯ ಧ್ವನಿ ಮುದ್ರಣ ಬಿಡುಗಡೆಗೊಂಡಿತು.

ಖ್ಯಾತ ಹಾಸ್ಯ ಬರಹಗಾರ್ತಿಯಾದ ಭುವನೇಶ್ವರಿ ಹೆಗಡೆ,ಕಲಾಪೋಷಕರಾದ ಭುಜಬಲಿ ಧರ್ಮಸ್ಥಳ, ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಭಾವಗೀತೆ ಲೋಕಾರ್ಪಣೆಯನ್ನು ನೆರವೇರಿಸಿದರು.

ಈ ಭಾವಗೀತೆಯನ್ನು ವಿದ್ಯಾಶ್ರೀ ಅವರ ಎರಡನೇ ಕವನಸಂಕಲನ ಭಾವಬೇತಾಳದಿಂದ ಆರಿಸಿಕೊಳ್ಳಲಾಗಿದೆ.ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಮಂಗಳೂರು ಘಟಕದ ಪದಪ್ರಧಾನ ಸಮಾರಂಭದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಂಗಳೂರು ಆಮಂತ್ರಣದ ನಿಯೋಜಿತ ಅಧ್ಯಕ್ಷರಾದ ಲತೇಶ್ ಪುತ್ರನ್, ದ. ಕ ಜಿಲ್ಲಾಧ್ಯಕ್ಷರಾದ ವಿಂಧ್ಯಾ ರೈ ಕಡೆಶಿವಾಲಯ, ಆಮಂತ್ರಣದ ರೂವಾರಿಯಾದ ವಿಜಯ್ ಕುಮಾರ್ ಜೈನ್ ಮತ್ತಿತರರು ಉಪಸ್ಥಿತರಿದ್ದರು.

Related posts

ಮಲ್ಲೊಟ್ಟು -ಕೊಯ್ಯೂರು ವಿದ್ಯುತ್ ಫೀಡರ್ ನಲ್ಲಿ ಪರಿಹಾರ ಕಾಣದ ವಿದ್ಯುತ್ ಸಮಸ್ಯೆ.

Suddi Udaya

ಜೇಸಿಐ ಕೊಕ್ಕಡ ಕಪಿಲಾ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪುದುವೆಟ್ಟಿನ ಮಹಿಳೆ ಪುಣ್ಯಶ್ರೀ ಪುತ್ತೂರು ತಾಯಿ ಮನೆಯಲ್ಲಿ ಬಾವಿಗೆ ಬಿದ್ದು ಮೃತ್ಯು

Suddi Udaya

ಶಿಶಿಲ: ಕೊಳಂಬೆ ನಿವಾಸಿ ಅಕ್ಕು ನಿಧನ

Suddi Udaya

ಗೋಳಿಯಂಗಡಿ ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ವಿವಾಹ ಕಾರ್ಯಕ್ರಮ

Suddi Udaya

ಸೌಜನ್ಯ ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಎಸ್‌.ಐ.ಟಿ ಅಧಿಕಾರಿಗಳಿಗೆ ದೂರು ನೀಡಿದ ಸೌಜನ್ಯ ತಾಯಿ ಕುಸುಮಾವತಿ

Suddi Udaya
error: Content is protected !!