34.3 C
ಪುತ್ತೂರು, ಬೆಳ್ತಂಗಡಿ
May 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್

ಗಸ್ತಿನಲ್ಲಿದ್ದ ಉರ್ವಾ ಠಾಣಾ ಪೊಲೀಸ್ ಕಾನ್‌ಸ್ಟೇಬಲ್ ಮೇಲೆ ಬೈಕ್ ಸಹಸವಾರನಿಂದ ಹಲ್ಲೆ

ಬೆಳ್ತಂಗಡಿ : ರಾತ್ರಿ ವೇಳೆ ವಾಹನಗಳ ತಪಾಸಣೆ ನಡೆಸುತ್ತಿದ್ದ ಉರ್ವಾ ಠಾಣಾ ಪೊಲೀಸ್‌ ಕಾನ್‌ಸ್ಟೇಬಲ್ ಒಬ್ಬರ ಮೇಲೆ ದ್ವಿಚಕ್ರ ವಾಹನದಲ್ಲಿ ಬಂದ ಯುವಕರು ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಗರದ ಉರ್ವ ಠಾಣೆ ವ್ಯಾಪ್ತಿಯ ಕೋಡಿಕಲ್ ನಾರಾಯಣಗುರು ಕೋ ಆಪರೇಟಿವ್ ಸೊಸೈಟಿ ಬಳಿ ಮೇ 23ರಂದು ತಡರಾತ್ರಿ ಎರಡು ಗಂಟೆ ಸುಮಾರಿಗೆ ನಡೆದಿದೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸ್ಥಳದಲ್ಲಿ ಇಬ್ಬರು ಪೊಲೀಸ್‌ ಕಾನ್‌ಸ್ಟೇಬಲ್ ಕರ್ತವ್ಯ ನಿರತರಾಗಿದ್ದ ವೇಳೆ ಇಬ್ಬರು ಯುವಕರು ದ್ವಿಚಕ್ರ ವಾಹನವೊಂದರಲ್ಲಿ ಅತಿ ವೇಗವಾಗಿ ತೆರಳಿದ್ದರು. ವಾಹನ ನಿಲ್ಲಿಸುವಂತೆ ಪೊಲೀಸರು ಸೂಚನೆ ನೀಡಿದರೂ ಲೆಕ್ಕಿಸದೆ ಸಾಗಿದ್ದರು. ಆನಂತರ ಅದೇ ಮಾರ್ಗದಲ್ಲಿ ಬಂದ ಯುವಕರು ಸಿಮೆಂಟ್ ಶೀಟ್‌ನ ತುಂಡನ್ನು ಹಿಡಿದು ಪೊಲೀಸ್ ಕಾನ್‌ಸ್ಟೇಬಲ್ ಒಬ್ಬರ ಮೇಲೆ ನೇರವಾಗಿ ಹೊಡೆದು ಪರಾರಿಯಾಗಿದ್ದಾರೆ.

ಪೊಲೀಸ್‌ ಕಾನ್‌ಸ್ಟೇಬಲ್ ಹನುಮಂತ ಕಂಠಿ ಎಂಬವರು ಏಟಿನಿಂದ ತಪ್ಪಿಸಿಕೊಳ್ಳಲು ಕೆಳಕ್ಕೆ ಬಗ್ಗಿದ್ದರಿಂದ ಹಲ್ಲೆಯಿಂದ ಪಾರಾಗಿದ್ದಾರೆ. ಆದರೂ ತಲೆಯ ಭಾಗಕ್ಕೆ ಪೆಟ್ಟು ಬಿದ್ದು ಗಾಯವಾಗಿದೆ ಎಂದು ಉರ್ವಾ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

Related posts

ರಾಜ್ಯಮಟ್ಟದ ಅಂತರ್ ಕಾಲೇಜು ಸ್ಪರ್ಧೆ ‘ವೆಂಚುರಾ- 2023’ ಸಮಾರೋಪ ಸಮಾರಂಭ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಚಿವ ಅಭಯಚಂದ್ರ ಜೈನ್

Suddi Udaya

ಉಜಿರೆ ಖಲೀಫಾ ಜುಮಾ ಮಸೀದಿ ಹಾಗೂ ಅಲ್ ಬದ್ರಿಯಾ ಅರೇಬಿಕ್ ಮದರಸ ಕಮಿಟಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪೂಜಾ ಕಾರ್ಯಕ್ರಮದ ಊಟದ ವೇಳೆ ಕುಟುಂಬಸ್ಥರಿಂದ ಹಲ್ಲೆ, ಜೀವಬೆದರಿಕೆ ಆರೋಪ; ಧರ್ಮಸ್ಥಳ ಠಾಣೆಗೆ ದೂರು

Suddi Udaya

ಅರಣ್ಯ ಸಚಿವರ ಆದೇಶ ಇದೆ ಎಂದು ಹೇಳಿಕೊಂಡು ಬಂದ ಅರಣ್ಯ ಇಲಾಖಾಧಿಕಾರಿಗಳು: ಕಳೆಂಜ ಲೋಲಾಕ್ಷ ಮನೆ ತೆರವುಗೊಳಿಸಲು ಮತ್ತೆ ಮುಂದಾದ ಅರಣ್ಯ ಇಲಾಖೆ: ಸ್ಥಳಕ್ಕೆ ಆಗಮಿಸಿದ ಜಿಲ್ಲೆಯ ಬಿಜೆಪಿಯ ಶಾಸಕರುಗಳಿಂದ ತೀವ್ರ ವಿರೋಧ: ಎಂ.ಎಲ್. ಸಿ ಯವರನ್ನು ದೂಡಿದ ಅಧಿಕಾರಿ – ಸಳೀಯ ನಾಗರಿಕರ ಪ್ರತಿಭಟನೆ – ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ: ಸಚಿವರಿಂದ ಬಡವರ ಮನೆ ತೆರವಿಗೆ ಹುನ್ನಾರ: ಹರೀಶ್ ಪೂಂಜ ಆರೋಪ

Suddi Udaya

ಗಾಳಿ ಮಳೆ: ಕುತ್ಲೂರು ಅರಸ್ ಕಟ್ಟೆಯಲ್ಲಿ ಮರ, ವಿದ್ಯುತ್ ಕಂಬ ಬಿದ್ದು ಹಾನಿ

Suddi Udaya
error: Content is protected !!