25.2 C
ಪುತ್ತೂರು, ಬೆಳ್ತಂಗಡಿ
August 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಹಿಂದುಳಿದ ವರ್ಗ ಮೋರ್ಚಾದ ಪೂರ್ಣ ಪ್ರಮಾಣದ ಸಭೆ

ಬೆಳ್ತಂಗಡಿ: ತಾಲೂಕು ಹಿಂದುಳಿದ ಮೋರ್ಚಾದ ಪೂರ್ಣ ಪ್ರಮಾಣದ ಸಭೆಯು ತಾಲೂಕು ಹಿಂದುಳಿದ ವರ್ಗ ಮೋರ್ಚಾದ ಅಧ್ಯಕ್ಷ ರತ್ನಾಕರ ಬುಣ್ಣನ್ ಅವರ ಅಧ್ಯಕ್ಷತೆಯಲ್ಲಿ ಮೇ 26 ರಂದು ನಡೆಯಿತು.

ಸಭೆಯಲ್ಲಿ ಜಿಲ್ಲಾ ಹಿಂದುಳಿದ ವರ್ಗ ಮೋರ್ಚಾದ ಜಿಲ್ಲಾ ಅಧ್ಯಕ್ಷ ಮಹೇಶ್ ಜೋಗಿ ಉಪಸ್ಥಿತರಿದ್ದು ಮೋರ್ಚಾದ ಕಾರ್ಯ ಚಟುವಟಿಕೆಯ ಬಗ್ಗೆ ಹಾಗೂ ಸಂಘಟನೆಯನ್ನು ಗಟ್ಟಿಗೊಳಿಸುವ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಮೋರ್ಚಾದ ಪ್ರಭಾರಿಗಳಾದ ಚಂದ್ರಶೇಖರ್ ಪೆನ್ನ ಅವರು ಶಕ್ತಿಕೇಂದ್ರ ಮಟ್ಟ ಹಾಗೂ ಬೂತುಮಟ್ಟದಲ್ಲಿ ಸಂಘಟನೆ ದೃಷ್ಟಿಯಲ್ಲಿ ಐದು ಜನರ ತಂಡವನ್ನು ಕಟ್ಟಿ ಮೋರ್ಚಾವನ್ನು ಬಲಗೊಳಿಸಬೇಕೆಂದು ಮಾಹಿತಿ ನೀಡಿದರು. ಹಿಂದುಳಿದ ವರ್ಗ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಶಿಧರ ಕಲ್ಮಂಜ ಅವರು ಮೋರ್ಚಾ ಪದಾಧಿಕಾರಿಗಳು ಸಂಘಟನೆ ಬಲಗೊಳ್ಳಲು ಕಾರ್ಯರೂಪದ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಹಿಂದುಳಿದ ವರ್ಗಮೋರ್ಚಾದ ಪ್ರಭಾರಿಗಳಾದ ಸೀತಾರಾಮ್ ಬೆಳಾಲು ರವರು ಮನ್ ಕಿ ಬಾತ್ ನ ಬಗ್ಗೆ ಮಾಹಿತಿ ನೀಡಿದರು.

ತಾಲೂಕಿನ ಮೋರ್ಚಾದ ಅಧ್ಯಕ್ಷ ರತ್ನಾಕರ್ ಬುಣ್ಣನ್ ರವರು ತಾಲೂಕಿನಲ್ಲಿ ಹಿಂದುಳಿದ ವರ್ಗಮೋರ್ಚಾ ಎಲ್ಲಾ ಬೂತುಗಳನ್ನು ಒಳಗೊಂಡಂತೆ ಶಕ್ತಿಕೇಂದ್ರದ ಮಟ್ಟದಲ್ಲಿ ಸಂಘಟನೆ ವೃದ್ಧಿಸುವಂತೆ ಮಾಹಿತಿ ನೀಡಿದರು. ಎಲ್ಲಾ ಪದಾಧಿಕಾರಿಗಳಿಗೆ ಹಾಗೂ ಸದಸ್ಯರಿಗೆ ಅಧ್ಯಕ್ಷರು ಶಾಲು ಹಾಕಿ ಗೌರವಿಸಿದರು. ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಸುಧೀರ್ ಭಂಡಾರಿ ಹಾಗೂ ವಿಠಲ ಆಚಾರ್ಯ ಉಪಸ್ಥಿತರಿದ್ದರು. ಸುಧೀರ್ ಭಂಡಾರಿ ಸ್ವಾಗತಿಸಿ. ರಾಜೇಶ್ ಮೂಡಿಕೋಡಿ ಧನ್ಯವಾದವಿತ್ತರು.

Related posts

ಪಿಯುಸಿ ಫಲಿತಾಂಶ: ವಾಣಿ ಪ.ಪೂ ಕಾಲೇಜು ವಾಣಿಜ್ಯ ವಿಭಾಗಕ್ಕೆ ಮೂರು ರ‍್ಯಾಂಕ್

Suddi Udaya

ಸಿಯೋನ್ ಆಶ್ರಮದಿಂದ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ನಾವೂರು: ತೋಟದ ಮನೆಗೆ ಸೋಲಾರ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ ಅಪಾರ ನಷ್ಟ

Suddi Udaya

ಬಸ್ಸಿನಲ್ಲಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ ಕಲ್ಲೇರಿ ನಿವಾಸಿ ಇರ್ಫಾನ್ ಬಂಧನ

Suddi Udaya

ಮಚ್ಚಿನ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಾಲಾ ಸಂಸತ್ತಿನ ಪ್ರಮಾಣ ವಚನ

Suddi Udaya

ಕಂಪ್ಯೂಟರ್ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯದಲ್ಲಿ ಸಂಶೋಧನಾ ಪ್ರಬಂಧ ಮಂಡನೆ ಡಾ. ಅಖಿಲ ತೇಜಸ್ವಿ ಆರ್. ಅವರಿಗೆ ದೇಶದ ಪ್ರತಿಷ್ಠಿತ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ

Suddi Udaya
error: Content is protected !!