24.5 C
ಪುತ್ತೂರು, ಬೆಳ್ತಂಗಡಿ
July 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಹಿಂದುಳಿದ ವರ್ಗ ಮೋರ್ಚಾದ ಪೂರ್ಣ ಪ್ರಮಾಣದ ಸಭೆ

ಬೆಳ್ತಂಗಡಿ: ತಾಲೂಕು ಹಿಂದುಳಿದ ಮೋರ್ಚಾದ ಪೂರ್ಣ ಪ್ರಮಾಣದ ಸಭೆಯು ತಾಲೂಕು ಹಿಂದುಳಿದ ವರ್ಗ ಮೋರ್ಚಾದ ಅಧ್ಯಕ್ಷ ರತ್ನಾಕರ ಬುಣ್ಣನ್ ಅವರ ಅಧ್ಯಕ್ಷತೆಯಲ್ಲಿ ಮೇ 26 ರಂದು ನಡೆಯಿತು.

ಸಭೆಯಲ್ಲಿ ಜಿಲ್ಲಾ ಹಿಂದುಳಿದ ವರ್ಗ ಮೋರ್ಚಾದ ಜಿಲ್ಲಾ ಅಧ್ಯಕ್ಷ ಮಹೇಶ್ ಜೋಗಿ ಉಪಸ್ಥಿತರಿದ್ದು ಮೋರ್ಚಾದ ಕಾರ್ಯ ಚಟುವಟಿಕೆಯ ಬಗ್ಗೆ ಹಾಗೂ ಸಂಘಟನೆಯನ್ನು ಗಟ್ಟಿಗೊಳಿಸುವ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಮೋರ್ಚಾದ ಪ್ರಭಾರಿಗಳಾದ ಚಂದ್ರಶೇಖರ್ ಪೆನ್ನ ಅವರು ಶಕ್ತಿಕೇಂದ್ರ ಮಟ್ಟ ಹಾಗೂ ಬೂತುಮಟ್ಟದಲ್ಲಿ ಸಂಘಟನೆ ದೃಷ್ಟಿಯಲ್ಲಿ ಐದು ಜನರ ತಂಡವನ್ನು ಕಟ್ಟಿ ಮೋರ್ಚಾವನ್ನು ಬಲಗೊಳಿಸಬೇಕೆಂದು ಮಾಹಿತಿ ನೀಡಿದರು. ಹಿಂದುಳಿದ ವರ್ಗ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಶಿಧರ ಕಲ್ಮಂಜ ಅವರು ಮೋರ್ಚಾ ಪದಾಧಿಕಾರಿಗಳು ಸಂಘಟನೆ ಬಲಗೊಳ್ಳಲು ಕಾರ್ಯರೂಪದ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಹಿಂದುಳಿದ ವರ್ಗಮೋರ್ಚಾದ ಪ್ರಭಾರಿಗಳಾದ ಸೀತಾರಾಮ್ ಬೆಳಾಲು ರವರು ಮನ್ ಕಿ ಬಾತ್ ನ ಬಗ್ಗೆ ಮಾಹಿತಿ ನೀಡಿದರು.

ತಾಲೂಕಿನ ಮೋರ್ಚಾದ ಅಧ್ಯಕ್ಷ ರತ್ನಾಕರ್ ಬುಣ್ಣನ್ ರವರು ತಾಲೂಕಿನಲ್ಲಿ ಹಿಂದುಳಿದ ವರ್ಗಮೋರ್ಚಾ ಎಲ್ಲಾ ಬೂತುಗಳನ್ನು ಒಳಗೊಂಡಂತೆ ಶಕ್ತಿಕೇಂದ್ರದ ಮಟ್ಟದಲ್ಲಿ ಸಂಘಟನೆ ವೃದ್ಧಿಸುವಂತೆ ಮಾಹಿತಿ ನೀಡಿದರು. ಎಲ್ಲಾ ಪದಾಧಿಕಾರಿಗಳಿಗೆ ಹಾಗೂ ಸದಸ್ಯರಿಗೆ ಅಧ್ಯಕ್ಷರು ಶಾಲು ಹಾಕಿ ಗೌರವಿಸಿದರು. ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಸುಧೀರ್ ಭಂಡಾರಿ ಹಾಗೂ ವಿಠಲ ಆಚಾರ್ಯ ಉಪಸ್ಥಿತರಿದ್ದರು. ಸುಧೀರ್ ಭಂಡಾರಿ ಸ್ವಾಗತಿಸಿ. ರಾಜೇಶ್ ಮೂಡಿಕೋಡಿ ಧನ್ಯವಾದವಿತ್ತರು.

Related posts

ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ

Suddi Udaya

ಅಖಿಲ ಭಾರತ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ ಬೆಳ್ತಂಗಡಿ ಸೆಂಟರ್ ಗೆ ರಾಷ್ಟ್ರ ಮಟ್ಟದ ಮೋಸ್ಟ್ ಗ್ರೋವಿಂಗ್ ಸೆಂಟರ್ ರನ್ನರ್ ಅಪ್ ಪ್ರಶಸ್ತಿ

Suddi Udaya

ಕಡಬ ಐಐಸಿಟಿ ಮೊಂಟೆಸ್ಸರಿ ತರಬೇತಿ ಸಂಸ್ಥೆಗೆ ಶೇ.100 ಫಲಿತಾಂಶ: 11 ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ: ಪ್ರತಿಯೊಬ್ಬರು ಶಿಕ್ಷಕಿಯರಾಗಿ ನೇಮಕ

Suddi Udaya

ಸುಬ್ರಹ್ಮಣ್ಯದಲ್ಲಿ ಡೆಂಗು ಹಾಗೂ ಸಾಂಕ್ರಾಮಿಕ ರೋಗ ಹರಡದಂತೆ ಸ್ವಚ್ಛತಾ ಕಾರ್ಯ

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಸಿದ್ಧಶ್ರೀ ಪ್ರಶಸ್ತಿ

Suddi Udaya

ಬಂದಾರು: ಆದಿಪೂಜಿತ ಸಿದ್ದಿವಿನಾಯಕ ಕನ್ನಡ ಭಕ್ತಿಗೀತೆ ಆಡಿಯೋ ಬಿಡುಗಡೆ

Suddi Udaya
error: Content is protected !!