25.7 C
ಪುತ್ತೂರು, ಬೆಳ್ತಂಗಡಿ
May 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ, ಅಮೆರಿಕ – ನಾರ್ಥ್ ಕೆರೊಲಿನಾ ವಿವಿ (ಆಡಮ್ಸ್ ಸ್ಕೂಲ್ ಆಫ್ ಡೆಂಟಿಸ್ಟ್ರಿ) ದಂತ ವೈದ್ಯಕೀಯ ವಿದ್ಯಾರ್ಥಿಗಳ ಭೇಟಿ

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ನಾರ್ಥ್ ಕೆರೊಲಿನಾ ವಿಶ್ವವಿದ್ಯಾಲಯದ, ಆಡಮ್ಸ್ ಸ್ಕೂಲ್ ಆಫ್ ಡೆಂಟಿಸ್ಟ್ರಿ,ದಂತ ವೈದ್ಯಕೀಯ ವಿದ್ಯಾರ್ಥಿಗಳ ತಂಡವು, ಯೇನೆಪೊಯ ದಂತ ವೈದ್ಯಕೀಯ ಕಾಲೇಜು ದೇರಳಕಟ್ಟೆ ಮಂಗಳೂರು ಇವರ ಸಹಕಾರದೊಂದಿಗೆ ಮೇ 26ರಂದು ಭೇಟಿ ನೀಡಿದರು.

ಆಸ್ಪತ್ರೆಯ ದಂತ ಚಿಕಿತ್ಸಾ ಕೇಂದ್ರವನ್ನು ವಿಕ್ಷಿಸಿದರು ,ಹಾಗೂ ಗ್ರಾಮೀಣ ಪ್ರದೇಶದ ವೈದ್ಯಕೀಯ ಸೇವೆ ಎದುರಿಸುವ ಸವಾಲುಗಳು ಮತ್ತು ಶ್ರೀ ಕೃಷ್ಣ “ಯೋಗಕ್ಷೇಮ” (ಮನೆ ಬಾಗಿಲಿಗೆ ವೈದ್ಯಕೀಯ ಸೇವೆ ) ಇದರ ಬಗ್ಗೆ ,ಮತ್ತು ಗ್ರಾಮೀಣ ಪ್ರದೇಶದ ಆರೋಗ್ಯ ಸೇವೆಯ ಬಗ್ಗೆ ಮಾಹಿತಿ ಪಡೆದರು. ಆಸ್ಪತ್ರೆಯ ಸೇವಾ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವೈದ್ಯಕೀಯ ನಿರ್ದೇಶಕರಾದ ಡಾ.ಮುರಳಿಕೃಷ್ಣ ಇರ್ವತ್ರಾಯ ಮಾತನಾಡಿ ನಗರ ಪ್ರದೇಶಗಳಲ್ಲಿ ಸೌಲಭ್ಯಗಳ ಲಭ್ಯತೆ ಹೆಚ್ಚು ಇದ್ದು ಯಾವುದೇ ರೀತಿಯ ಸವಾಲುಗಳನ್ನು ಸಮರ್ಥವಾಗಿ ಎದುರಿಸಬಹುದು, ಆದರೆ ಹಳ್ಳಿ ಪ್ರದೇಶಗಳಲ್ಲಿ ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ನಿಭಾಯಿಸಲು ಕಷ್ಚಕರವಾಗಿದ್ದು, ಮತ್ತು ವೈದ್ಯಕೀಯ ಸಿಬ್ಬಂದಿಗಳ ಕೊರತೆ ಇತರ ಎಲ್ಲಾ ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯಕೀಯ ನಿರ್ದೆಶಕರಾದ ಡಾ.ಮುರಳಿಕೃಷ್ಣ ಇರ್ವತ್ರಾಯ, ವೈದ್ಯಕೀಯ ಅಧೀಕ್ಷಕಿ ಡಾ.ವಂದನಾ ಎಂ ಇರ್ವತ್ರಾಯ, ಮುಖ್ಯ ವೈದ್ಯಾಧಿಕಾರಿಗಳಾದ ಡಾ.ಮೌಲ್ಯ, ದಂತ ವೈದ್ಯಾಧಿಕಾರಿ ಡಾ.ಮಹಮ್ಮದ್ ಮಿಫ್ರಾ, ಆಡಳಿತಾಧಿಕಾರಿ ಶ್ರೀಮತಿ ಜ್ಯೋತಿ ವಿ ಸ್ವರೂಪ್, ಅನಿಶ್ ಕೃಷ್ಣ ಇರ್ವತ್ರಾಯ, ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು, ಯೇನೆಪೊಯ ದಂತ ವೈದ್ಯಕೀಯ ಕಾಲೇಜಿನ ವೈದ್ಯಾಧಿಕಾರಿ ಡಾ.ದಿಲ್ಶಾದ್, ಡಾ.ಅಲಿ, ಮ್ಯಾನೇಜರ್ ಭರತ್ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಗಾಂಜಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮದಡ್ಕ ರಫೀಕ್ ರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಪಡ್ಡಂದಡ್ಕ: ಕುರುಂಬಡ್ಕ ನಿವಾಸಿ ಕಬ್ಬು ನಿಧನ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ದೀಪಾವಳಿ ಹಬ್ಬ ಆಚರಣೆ

Suddi Udaya

ಮುಂಡಾಜೆ : ಶಿವಂ ಬೇಕರಿ ಮತ್ತು ಪ್ಲವರ್ ಡೆಕೋರೇಶನ್ ಶುಭಾರಂಭ

Suddi Udaya

ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ಧರ್ಮಸ್ಥಳ ಡಾ| ಹೆಗ್ಗಡೆಯವರ ಭೇಟಿ

Suddi Udaya

ಮೂಡಬಿದಿರೆ: ನ್ಯೂ ವೈಬ್ರೆಂಟ್ ಪದವಿಪೂರ್ವ ಕಾಲೇಜು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

Suddi Udaya
error: Content is protected !!