23.6 C
ಪುತ್ತೂರು, ಬೆಳ್ತಂಗಡಿ
August 30, 2026
Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ: ದಿ ಹಾರ್ಟ್ ಆಫ್ ಧರ್ಮ ಕೃತಿ ಲೋಕಾರ್ಪಣೆ

ಧರ್ಮಸ್ಥಳ: ‘ದಿ ಹಿಂದೂ ಗ್ರೂಫ್’ ಪ್ರಕಟಿಸಿರುವ ‘ಶ್ರೀ ಕ್ಷೇತ್ರ ಧರ್ಮಸ್ಥಳ : ದಿ ಹಾರ್ಟ್ ಆಫ್ ಧರ್ಮ’ ಎಂಬ ಕೃತಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಲೋಕಾರ್ಪಣೆಗೊಳಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಹೆಗ್ಗಡೆಯವರು ಈ ಕೃತಿಯಲ್ಲಿ ದೇವಾಲಯ, ಅದರ ಮೂಲ ತತ್ವ, ಚತುರ್ದಾನ ಪರಂಪರೆ ಮತ್ತು ಅದರ ಅಡಿಯಲ್ಲಿ ಆಗುವ ಅನೇಕ ಕಾರ್ಯ ಚಟುವಟಿಕೆಗಳ ಮೇಲೆ ಬೆಳಕು ಚೆಲ್ಲಲಾಗಿದೆ. ಇದು ಲಕ್ಷಾಂತರ ಭಕ್ತರಿಗೆ, ಸಂಘ-ಸಂಸ್ಥೆಗಳಿಗೆ ಸ್ಫೂರ್ತಿಯನ್ನು ನೀಡಲಿದೆ ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಅನಿಲ್ ಕುಮಾರ್ ಎಸ್.ಎಸ್.ರವರು ಮಾತನಾಡಿ ಶ್ರೀ ಕ್ಷೇತ್ರದ ಸಮಾಜ ಸೇವೆ. ಕಾರ್ಯಚಟುವಟಿಕೆಗಳನ್ನು 96 ಪುಟಗಳಲ್ಲಿ ಸಂಕ್ಷಿಪ್ತಗೊಳಿಸುವುದು ಅಷ್ಟು ಸುಲಭವಲ್ಲ. ಈ ಪುಸ್ತಕವನ್ನು ಹೊರತರುವಲ್ಲಿ ಇದು ಬಹುದೊಡ್ಡ ಸವಾಲಾಗಿತ್ತು. ಆದರೆ ಆ ಕೆಲಸವನ್ನು ಈ ಕೃತಿಯಲ್ಲಿ ಯಶಸ್ವಿಯಾಗಿ ಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರು, ಧರ್ಮಸ್ಥಳ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಎಸ್. ಸತೀಶ್ಚಂದ್ರ ಮತ್ತು ದಿ ಹಿಂದೂ ಪತ್ರಿಕೆಯ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.


ಕೃತಿಯಲ್ಲಿ ಧರ್ಮಸ್ಥಳ ಮತ್ತು ಅಲ್ಲಿನ ಕಾರ್ಯಚಟುವಟಿಕೆಗಳನ್ನು ಅತ್ಯಂತ ಸೂಕ್ಷ್ಮವಾಗಿ ಮನಮುಟ್ಟುವಂತೆ ವಿವರಿಸಲಾಗಿದೆ. ಲೇಖನಗಳಿಗೆ ಪೂರಕವಾದ ಆಕರ್ಷಕ ಛಾಯಾಚಿತ್ರಗಳನ್ನು ಒಳಗೊಂಡಿದೆ. ಶ್ರೀ ಕ್ಷೇತ್ರ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಗ್ರಾಮೀಣ ಅಭಿವೃದ್ಧಿಗೆ ನೀಡಿದ ಕೊಡುಗೆಗಳ ಮೇಲೆ ಕೃತಿ ಬೆಳಕು ಚೆಲ್ಲಿದೆ. ಪ್ರತಿಗಳು ಬೇಕಾದವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

Related posts

ಸೂಪರ್ ಕ್ಯಾರಿ ಟರ್ಬೋ ವಾಹನ ದಲ್ಲಿ ಹಿಂಸಾತ್ಮಕವಾಗಿ 3 ಜಾನುವಾರುಗಳ ಅಕ್ರಮ ಸಾಗಾಟ: ವಾಹನ ಸಹಿತ ಇಬ್ಬರ ಬಂಧನ

Suddi Udaya

ವೇಣೂರು: ಪಶು ಅಧಿಕಾರಿ ಸುಕೀರ್ತಿ ಜೈನ್ ಸೇವಾ ನಿವೃತ್ತಿ: ಸನ್ಮಾನ

Suddi Udaya

ಗುರುವಾಯನಕೆರೆ ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ಕ್ಷೇತ್ರಕ್ಕೆಖ್ಯಾತ ಉದ್ಯಮಿಗಳಾದ ದಿನೇಶ್ ಅಮರನಾಥ ಶೆಟ್ಟಿ ಪೂನಾ ಭೇಟಿ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ

Suddi Udaya

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ ತಾಲೂಕು ಮಟ್ಟದ ಬೃಹತ್ ಹಸಿರು ಹೊರೆ ಕಾಣಿಕೆ ಸಮರ್ಪಣೆ-ಮೆರವಣಿಗೆ

Suddi Udaya

ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಭಗವಾನ್ ಬಿ.ಸಿ. ಸುರ್ಯ ದೇವಸ್ಥಾನಕ್ಕೆ ಭೇಟಿ

Suddi Udaya
error: Content is protected !!