ಬೆಳ್ತಂಗಡಿ : ಬಹು ನಿರೀಕ್ಷಿತ ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೋ ರವರ ಅಧ್ಯಕ್ಷತೆಯಲ್ಲಿ ಜಂಟಿ ಸಭೆ ವಕೀಲರ ಸಂಘದ ಕಚೇರಿಯಲ್ಲಿ ಮೇ 26ರಂದು ನಡೆಯಿತು.
ಈ ಸಂದರ್ಭದಲ್ಲಿ ಕಾರ್ಯಕ್ರಮದ ಯಶಸ್ಸಿಗಾಗಿ ವಿವಿಧ ಸಮಿತಿಗಳ ಸಂಚಾಲಕರನ್ನು ಆಯ್ಕೆ ಮಾಡಿ ಜವಾಬ್ದಾರಿ ವಹಿಸಲಾಯಿತು.
ಸಭೆಯಲ್ಲಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ, ಉಪಾಧ್ಯಕ್ಷ, ಕಟ್ಟಡ ಸಮಿತಿ ಅಧ್ಯಕ್ಷ ಶ್ರೀನಿವಾಸ ಗೌಡ, ಹಿರಿಯ ಸಮಿತಿ ಅಧ್ಯಕ್ಷ ಶಿವ ಕುಮಾರ್ ಎಸ್ ಎಂ, ಕೋಶಾಧಿಕಾರಿ ಮಮ್ತಾಜ್ ಬೇಗಂ, ಕಟ್ಟಡ ಸಮಿತಿ ಸದಸ್ಯ, ಅಪರ ಸರ್ಕಾರಿ ವಕೀಲರಾದ ಮನೋಹರ ಕುಮಾರ್, ಕಟ್ಟಡ ಸಮಿತಿ ಸದಸ್ಯ, ಮಾಜಿ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ, ಕಟ್ಟಡ ಸಮಿತಿ ಸದಸ್ಯ, ಕೆ ಡಿ ಪಿ ಸದಸ್ಯ ಸಂತೋಷ್ ಕುಮಾರ್, ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ವಸಂತ ಮರಕಡ, ಶ್ರೀಕೃಷ್ಣ ಶೆಣೈ, ಗಣೇಶ ಗೌಡ, ಲತಾಶ್ರೀ, ಅಸ್ಮಾ ಎ, ಸಂದೀಪ್ ಡಿ ಸೋಜಾ, ಉಷಾ, ಯುವ ವೇದಿಕೆ ಅಧ್ಯಕ್ಷ ಉದಯ ಬಿ ಕೆ ಉಪಸ್ಥಿತರಿದ್ದರು.












