26.1 C
ಪುತ್ತೂರು, ಬೆಳ್ತಂಗಡಿ
May 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ಮಕ್ಕಳ ಸುರಕ್ಷತೆ ಹಾಗೂ ಶಿಕ್ಷಕರ ಜವಾಬ್ದಾರಿಯ ಬಗ್ಗೆ ಮಾಹಿತಿ ಕಾರ್ಯಗಾರ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಯ ಎಲ್ಲಾ ಶಿಕ್ಷಕರಿಗೆ ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಯಿಂದ ಮಕ್ಕಳ ಸುರಕ್ಷತೆ ಹಾಗೂ ಶಿಕ್ಷಕರ ಜವಾಬ್ದಾರಿಯ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.

ಬಾಲ ನ್ಯಾಯ ಮಂಡಳಿಯ ಸದಸ್ಯರಾದ ಲಿಲ್ಲಿ ಪುಷ್ಪ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು .ಕಾರ್ಯಕ್ರಮದ ಉದ್ಘಾಟಕರಾಗಿ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಶಿಕ್ಷಣ ಸಂಯೋಜಕರಾದ ಎಸ್ ಎನ್ ಕಾಕತ್ಕರ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಎಸ್ ಡಿಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿಯದ ಧನ್ಯ ಕುಮಾರ್ ಜೈನ್ ಉಪಸ್ಥಿತರಿದ್ದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಎಂ ಆರ್, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಿ ಬಿ ಎಸ್ ಸಿ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರಾದ ಮನಮೋಹನ್ ನಾಯಕ್, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ರಾಜ್ಯ ಪಠ್ಯಕ್ರಮ ಉಜಿರೆ ಮುಖ್ಯೋಪಾಧ್ಯಾಯರಾದ ಶ್ರೀಮತಿ ವಿದ್ಯಾ ಲಕ್ಷ್ಮಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮಸ್ಥಳದ ಮುಖ್ಯೋಪಾಧ್ಯಾಯರಾದ ಶ್ರೀಮತಿ ಪರಿಮಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿಕ್ಷಕರಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಶಿಕ್ಷಕ ಶ್ರೇಯಾಂಸ ಜೈನ್ ನಿರೂಪಿಸಿ, ಧನ್ಯವಾದವಿತ್ತರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಚಿವ ಎನ್.ಎಸ್. ಬೋಸರಾಜು ಭೇಟಿ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಪದಗ್ರಹಣ ಸಮಾರಂಭ

Suddi Udaya

ಕೊಯ್ಯುರು : ಅಯೋಧ್ಯೆ ಶ್ರೀ ಬಾಲರಾಮ ಪ್ರತಿಷ್ಠಾಪನೆ ಪ್ರಯುಕ್ತ ಸ್ವಚ್ಚತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

Suddi Udaya

ಎಕ್ಸೆಲ್ ಪದವಿಪೂರ್ವ ಕಾಲೇಜಿನಲ್ಲಿ 25ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ಆದಿ ದ್ರಾವಿಡ ಸಮಾಜ ಸೇವಾ ಸಂಘದ ಸಾಮಾನ್ಯ ಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!