25.2 C
ಪುತ್ತೂರು, ಬೆಳ್ತಂಗಡಿ
August 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಯಂತ್ರೋಪಕರಣ ಅವಲಂಬಿತ ಕೃಷಿಕನಿಗೆ ತೊಂದರೆ ನೀಡಬೇಡಿ: ಮೋಹನ್ ಗೌಡ ಕಲ್ಮoಜ

ಬೆಳ್ತಂಗಡಿ: ಸರಕಾರ ನೂತನವಾಗಿ ಆದೇಶ ಮಾಡಿರುವ ಕೃಷಿಕನಿಗೆ ಅವಶ್ಯಕತೆಯಿರುವ ಮಿಷನ್ಗಳಿಗೆ ಪೆಟ್ರೋಲ್, ಡಿಸೇಲ್ ಸ್ಟಾಕ್ ಇಟ್ಟುಕೊಳ್ಳಲು ನಿರ್ಬಂಧ ನಿಷೇದ ಕಾನೂನು ಇದು ಖಂಡಿತ ಖಂಡನೀಯ ಎಂದು ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಗೌಡ ಕಲ್ಮoಜ ಸರಕಾರ ನಿರ್ಧಾರವನ್ನು ಖಂಡಿಸಿ ಈ ಕಾನೂನು ತೆರವುಗೊಳಿಸಿ ರೈತರ ಹಿತ ಅಗತ್ಯವಾಗಿ ಕಾಪಾಡಬೇಕು ಎಂದು ಒತ್ತಾಯಿಸಿದ್ದಾರೆ.

ಒಂದು ಕಡೆಯಿಂದ ಬೆಲೆ ಏರಿಕೆಯಿಂದ ಜನ ಜೀವನ ತತ್ತರಿಸಿ ಹೋಗಿದೆ. ರೈತರ ಅಡಿಕೆ ಕೃಷಿ ಅವಶ್ಯಕತೆಯಿರುವ ಮೈಲುತುತ್ತು ರಾಸಾಯನಿಕ ಗೊಬ್ಬರ ಬೆಲೆ ಗಗನ ಮುಟ್ಟಿದೆ. ಅಡಿಕೆ ಬೆಲೆ ಏರಿಕೆ ಆಗದೆ ಸ್ಥಿರ ನಿಂತಿದೆ. ಈ ಮದ್ಯೆ ರೈತರು ಇರುವ ತೋಟಗಳ ಉಳಿಸಲು ಹಿಂಗಾರಕ್ಕೆ ಔಷಧಿ ಸಿಂಪಡನೇ, ಕಳೆ ಕೀಳಲು, ಮಿಷನ್ ಬಳಕೆಗೆ ಪೆಟ್ರೋಲ್ ಕನಿಷ್ಠ 10 ಲೀಟರ್ ವರೆಗೆ ಅಗತ್ಯ ಇರುತ್ತದೆ. ಒಂದು ಲೀಟರ್ಗೋಸ್ಕರ ಪಂಪ್ ಗೆ ಹೋಗಲು ಪದೇ ಪದೇ ಸಾಧ್ಯ ಇಲ್ಲ.ನಮ್ಮಂತವರ ಸಣ್ಣ ಉತ್ಸಾಹಿ ಕೃಷಿಕರ ಬಗ್ಗೆ ಸರಕಾರಗಳು ಪ್ರೋತ್ಸಾಹ ಮಾಡಿದಾಗ ಮಾತ್ರ ನಿಜವಾದ ಆತ್ಮ ನಿರ್ಭರ ಭಾರತ ಮೂಡಿಬರಲು ಸಾಧ್ಯ.ಇಲ್ಲದಿದ್ದರೆ ರೈತರ ತೋಟಗಳು ಸರಕಾರದ ಈ ಕಾನೂನುಗಳಿಂದ ಹಾನಿಯಾದರೆ ಯಾರೂ ಕೂಡ ನಷ್ಟ ನೀಡುದಿಲ್ಲ. ಹಾಗಾಗಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಈ ಬಗ್ಗೆ ಗಮನ ಹರಿಸಬೇಕು ಎಂದವರು ಒತ್ತಾಯಿಸಿದ್ದಾರೆ.

Related posts

ಉರುವಾಲು-ಕಾಯರ್ಪಾಡಿ ಸಂಪರ್ಕ ರಸ್ತೆ ಮರು ಡಾಮರೀಕರಣ: ಶಾಸಕರಿಗೆ ಗ್ರಾಮಸ್ಥರ ಕೃತಜ್ಞತೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ತಾ| ಮಟ್ಟದ ಪುಟ್ ಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ – ಆಪರೇಟಿವ್ ಸೊಸೈಟಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ

Suddi Udaya

ವೇಣೂರು ಭಗವಾನ್ ಬಾಹುಬಲಿ ಸ್ವಾಮಿ ಮಸ್ತಕಾಭಿಷೇಕ ಪ್ರಯುಕ್ತ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya
error: Content is protected !!