July 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ವೃತ್ತಿಯೊಂದಿಗಿನ ಜೀವನದ ಸುಮತೋಲನ” ಕಾರ್ಯಾಗಾರ

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ “ವೃತ್ತಿಯೊಂದಿಗಿನ ಜೀವನದ ಸಮತೋಲನ” ಎಂಬ ವಿಷಯದ ಕುರಿತು ಎಸ್‌.ಡಿ.ಎಂ ಪದವಿ ಕಾಲೇಜಿನ ಸಮ್ಯಗ್ದರ್ಶನ ಸಭಾಂಗಣದಲ್ಲಿ ಕಾರ್ಯಾಗಾರ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಆಕ್ಸ್ಫರ್ಡ್ ಯೂನಿವರ್ಸಿಟಿ ಪ್ರೆಸ್ ಅಕಾಡೆಮಿಯ ಸಾಫ್ಟ್‌ಸ್ಕಿಲ್ ಡೆವಲಪ್‌ಮೆಂಟ್ ತರಬೇತುದಾರ ಡಾ.ಸಿಜು ಥಾಮಸ್ ವಿಷಯದ ಕುರಿತಾಗಿ ಚಟುವಟಿಕೆಗಳೊಂದಿಗೆ ಮಾಹಿತಿ ಹಂಚಿಕೊಂಡರು.

ಎಸ್.ಕೆ.ಡಿ.ಆರ್.ಡಿ.ಪಿ ಟ್ರಸ್ಟಿ ಡಾ.ಹರೀಶ್ ಕೃಷ್ಣಸ್ವಾಮಿ ಕಾರ್ಯಾಗಾರದ ಉದ್ಘಾಟನೆ ಮಾಡಿ ಶುಭಕೋರಿದರು.

ಶಾಲಾ ಪ್ರಾಂಶುಪಾಲ ಮನಮೋಹನ್ ನಾಯ್ಕ್ ಕೆ.ಜಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಾಗಾರದಲ್ಲಿ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ.ಸತೀಶ್ಚಂದ್ರ.ಎಸ್, ಎಸ್.ಕೆ.ಡಿ.ಆರ್.ಡಿ.ಪಿ ಕಾರ್ಯ ನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್, ಎಸ್.ಡಿ.ಎಮ್ ಪದವಿ ಕಾಲೇಜಿನ ಪ್ರಾಂಶುಪಾಲರು ಡಾ. ವಿಶ್ವನಾಥ್.ಪಿ, ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ಶೈಕ್ಷಣಿಕ ಸಂಯೋಜಕರು ಡಾ.ಎಸ್.ಎನ್ ಕಾಕತ್ಕರ್, ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಧನ್ಯಕುಮಾರ್, ಮಂಗಳೂರಿನ ಆಕ್ಸ್ಫರ್ಡ್ ವಲಯ ವ್ಯವಸ್ಥಾಪಕರು ಸುಜಿತ್ ಹಾಗೂ ಮಂಗಳೂರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಪ್ರಾಂಶುಪಾಲೆ ಶ್ರೀಮತಿ ಜಾಯ್ ಜೀವನ್ ರೈ ಉಪಸ್ಥಿತರಿದ್ದರು.

ಮಂಗಳೂರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರು ಕಾರ್ಯಾಗಾರದಲ್ಲಿ ಭಾಗಿಯಾಗಿದ್ದರು.

ಶಿಕ್ಷಕಿಯರಾದ ನೀತು ಪ್ರಸಾದ್ ಹಾಗೂ ಕಲ್ಯಾಣಿ. ಎಮ್ ರಾವ್ ಕಾರ್ಯಕ್ರಮ ನಿರೂಪಿಸಿದರು.

Related posts

ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಕಾರ್ಯದರ್ಶಿಗಳಿಗೆ “ISO ಪ್ರಮಾಣೀಕರಣ” ಕುರಿತು ತರಬೇತಿ ಕಾರ್ಯಾಗಾರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಯೋಗ ತರಬೇತಿಯ ಮಾಹಿತಿ ಕಾರ್ಯಕ್ರಮ

Suddi Udaya

ಬಳ್ಳಮಂಜ ಕ್ಷೇತ್ರದ ಶ್ರೀ ಈಶ್ವರ ದೇವರ ಗರ್ಭಗುಡಿಯ ಪಾದುಕನ್ಯಾಸ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನಗಳ ‘ಪ್ರತಿಭಾ ಪ್ರದರ್ಶನಕ್ಕೆ ಚಾಲನೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಸ್ಸಾಂ ಮುಖ್ಯಮಂತ್ರಿ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಅಡಿಕೆ ವರ್ತಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಅಡಿಕೆ ವರ್ತಕರ ಜಿಲ್ಲಾ ಸಂಘಟನೆಗೆ ಪೂರ್ವಭಾವಿ ಸಭೆ

Suddi Udaya
error: Content is protected !!