26.1 C
ಪುತ್ತೂರು, ಬೆಳ್ತಂಗಡಿ
May 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಯಂತ್ರೋಪಕರಣ ಅವಲಂಬಿತ ಕೃಷಿಕನಿಗೆ ತೊಂದರೆ ನೀಡಬೇಡಿ: ಮೋಹನ್ ಗೌಡ ಕಲ್ಮoಜ

ಬೆಳ್ತಂಗಡಿ: ಸರಕಾರ ನೂತನವಾಗಿ ಆದೇಶ ಮಾಡಿರುವ ಕೃಷಿಕನಿಗೆ ಅವಶ್ಯಕತೆಯಿರುವ ಮಿಷನ್ಗಳಿಗೆ ಪೆಟ್ರೋಲ್, ಡಿಸೇಲ್ ಸ್ಟಾಕ್ ಇಟ್ಟುಕೊಳ್ಳಲು ನಿರ್ಬಂಧ ನಿಷೇದ ಕಾನೂನು ಇದು ಖಂಡಿತ ಖಂಡನೀಯ ಎಂದು ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಗೌಡ ಕಲ್ಮoಜ ಸರಕಾರ ನಿರ್ಧಾರವನ್ನು ಖಂಡಿಸಿ ಈ ಕಾನೂನು ತೆರವುಗೊಳಿಸಿ ರೈತರ ಹಿತ ಅಗತ್ಯವಾಗಿ ಕಾಪಾಡಬೇಕು ಎಂದು ಒತ್ತಾಯಿಸಿದ್ದಾರೆ.

ಒಂದು ಕಡೆಯಿಂದ ಬೆಲೆ ಏರಿಕೆಯಿಂದ ಜನ ಜೀವನ ತತ್ತರಿಸಿ ಹೋಗಿದೆ. ರೈತರ ಅಡಿಕೆ ಕೃಷಿ ಅವಶ್ಯಕತೆಯಿರುವ ಮೈಲುತುತ್ತು ರಾಸಾಯನಿಕ ಗೊಬ್ಬರ ಬೆಲೆ ಗಗನ ಮುಟ್ಟಿದೆ. ಅಡಿಕೆ ಬೆಲೆ ಏರಿಕೆ ಆಗದೆ ಸ್ಥಿರ ನಿಂತಿದೆ. ಈ ಮದ್ಯೆ ರೈತರು ಇರುವ ತೋಟಗಳ ಉಳಿಸಲು ಹಿಂಗಾರಕ್ಕೆ ಔಷಧಿ ಸಿಂಪಡನೇ, ಕಳೆ ಕೀಳಲು, ಮಿಷನ್ ಬಳಕೆಗೆ ಪೆಟ್ರೋಲ್ ಕನಿಷ್ಠ 10 ಲೀಟರ್ ವರೆಗೆ ಅಗತ್ಯ ಇರುತ್ತದೆ. ಒಂದು ಲೀಟರ್ಗೋಸ್ಕರ ಪಂಪ್ ಗೆ ಹೋಗಲು ಪದೇ ಪದೇ ಸಾಧ್ಯ ಇಲ್ಲ.ನಮ್ಮಂತವರ ಸಣ್ಣ ಉತ್ಸಾಹಿ ಕೃಷಿಕರ ಬಗ್ಗೆ ಸರಕಾರಗಳು ಪ್ರೋತ್ಸಾಹ ಮಾಡಿದಾಗ ಮಾತ್ರ ನಿಜವಾದ ಆತ್ಮ ನಿರ್ಭರ ಭಾರತ ಮೂಡಿಬರಲು ಸಾಧ್ಯ.ಇಲ್ಲದಿದ್ದರೆ ರೈತರ ತೋಟಗಳು ಸರಕಾರದ ಈ ಕಾನೂನುಗಳಿಂದ ಹಾನಿಯಾದರೆ ಯಾರೂ ಕೂಡ ನಷ್ಟ ನೀಡುದಿಲ್ಲ. ಹಾಗಾಗಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಈ ಬಗ್ಗೆ ಗಮನ ಹರಿಸಬೇಕು ಎಂದವರು ಒತ್ತಾಯಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ಯಶ್ ದಂಪತಿ ಭೇಟಿ: ದೇವರಿಗೆ ವಿಶೇಷ ಪೂಜೆ

Suddi Udaya

ಶಿರ್ಲಾಲು ಬಳಂಜ ಕಾಡು ಕೋಣಗಳ ಸಂಚಾರ

Suddi Udaya

ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ: ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಿಎಮ್ಎಸ್

Suddi Udaya

ಆನ್ ಲೈನ್ ಜಾಬ್ ಆಫರ್ ನೀಡಿ ಮಹಿಳೆಗೆ ರೂ. 4.25 ಲಕ್ಷ ವಂಚನೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಗೀತಾ ಜಯಂತಿ , ವಾರ್ಷಿಕ ಚಟುವಟಿಕೆಗಳ ಸಮಾರೋಪ ಹಾಗೂ ದಿ. ಕೋಟೇಶ್ವರ ಕೃಷ್ಣ ಐತಾಳ್ ಸ್ಮಾರಕ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಯಶವಂತ, ಉಪಾಧ್ಯಕ್ಷರಾಗಿ ಜಾನಕಿ ಆಯ್ಕೆ

Suddi Udaya
error: Content is protected !!