26.1 C
ಪುತ್ತೂರು, ಬೆಳ್ತಂಗಡಿ
May 28, 2026
Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ: ದಿ ಹಾರ್ಟ್ ಆಫ್ ಧರ್ಮ ಕೃತಿ ಲೋಕಾರ್ಪಣೆ

ಧರ್ಮಸ್ಥಳ: ‘ದಿ ಹಿಂದೂ ಗ್ರೂಫ್’ ಪ್ರಕಟಿಸಿರುವ ‘ಶ್ರೀ ಕ್ಷೇತ್ರ ಧರ್ಮಸ್ಥಳ : ದಿ ಹಾರ್ಟ್ ಆಫ್ ಧರ್ಮ’ ಎಂಬ ಕೃತಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಲೋಕಾರ್ಪಣೆಗೊಳಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಹೆಗ್ಗಡೆಯವರು ಈ ಕೃತಿಯಲ್ಲಿ ದೇವಾಲಯ, ಅದರ ಮೂಲ ತತ್ವ, ಚತುರ್ದಾನ ಪರಂಪರೆ ಮತ್ತು ಅದರ ಅಡಿಯಲ್ಲಿ ಆಗುವ ಅನೇಕ ಕಾರ್ಯ ಚಟುವಟಿಕೆಗಳ ಮೇಲೆ ಬೆಳಕು ಚೆಲ್ಲಲಾಗಿದೆ. ಇದು ಲಕ್ಷಾಂತರ ಭಕ್ತರಿಗೆ, ಸಂಘ-ಸಂಸ್ಥೆಗಳಿಗೆ ಸ್ಫೂರ್ತಿಯನ್ನು ನೀಡಲಿದೆ ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಅನಿಲ್ ಕುಮಾರ್ ಎಸ್.ಎಸ್.ರವರು ಮಾತನಾಡಿ ಶ್ರೀ ಕ್ಷೇತ್ರದ ಸಮಾಜ ಸೇವೆ. ಕಾರ್ಯಚಟುವಟಿಕೆಗಳನ್ನು 96 ಪುಟಗಳಲ್ಲಿ ಸಂಕ್ಷಿಪ್ತಗೊಳಿಸುವುದು ಅಷ್ಟು ಸುಲಭವಲ್ಲ. ಈ ಪುಸ್ತಕವನ್ನು ಹೊರತರುವಲ್ಲಿ ಇದು ಬಹುದೊಡ್ಡ ಸವಾಲಾಗಿತ್ತು. ಆದರೆ ಆ ಕೆಲಸವನ್ನು ಈ ಕೃತಿಯಲ್ಲಿ ಯಶಸ್ವಿಯಾಗಿ ಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರು, ಧರ್ಮಸ್ಥಳ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಎಸ್. ಸತೀಶ್ಚಂದ್ರ ಮತ್ತು ದಿ ಹಿಂದೂ ಪತ್ರಿಕೆಯ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.


ಕೃತಿಯಲ್ಲಿ ಧರ್ಮಸ್ಥಳ ಮತ್ತು ಅಲ್ಲಿನ ಕಾರ್ಯಚಟುವಟಿಕೆಗಳನ್ನು ಅತ್ಯಂತ ಸೂಕ್ಷ್ಮವಾಗಿ ಮನಮುಟ್ಟುವಂತೆ ವಿವರಿಸಲಾಗಿದೆ. ಲೇಖನಗಳಿಗೆ ಪೂರಕವಾದ ಆಕರ್ಷಕ ಛಾಯಾಚಿತ್ರಗಳನ್ನು ಒಳಗೊಂಡಿದೆ. ಶ್ರೀ ಕ್ಷೇತ್ರ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಗ್ರಾಮೀಣ ಅಭಿವೃದ್ಧಿಗೆ ನೀಡಿದ ಕೊಡುಗೆಗಳ ಮೇಲೆ ಕೃತಿ ಬೆಳಕು ಚೆಲ್ಲಿದೆ. ಪ್ರತಿಗಳು ಬೇಕಾದವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

Related posts

ದೀಪಾವಳಿ ಪ್ರಯುಕ್ತ ಆಹಾರ ಸಾಮಾಗ್ರಿ ವಿತರಣೆ

Suddi Udaya

ಗುರುವಾಯನಕೆರೆ ನವಶಕ್ತಿಕ್ರೀಡಾಂಗಣದಲ್ಲಿ ಆದ್ದೂರಿಯಾಗಿ ನಡೆದ ಐತಿಹಾಸಿಕ ನಾಟಕ “ಛತ್ರಪತಿ ಶಿವಾಜಿ”

Suddi Udaya

ನಡ ಕೇಳ್ತಾಜೆ ಮಂಚಕಲ್ಲಿನಲ್ಲಿ ರಸ್ತೆಗೆಅಡ್ಡವಾಗಿ ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

Suddi Udaya

ಇಂದಬೆಟ್ಟು: ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಮೇಷ ಜಾತ್ರೆಯ ಪ್ರಯುಕ್ತ ಪಿಲಿಚಾಮುಂಡಿ ದೈವದ ನೇಮೋತ್ಸವ

Suddi Udaya

ಕನ್ಯಾಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ನ 65ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಹಾಗೂ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya
error: Content is protected !!