July 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕ್ಯಾಂಟಿನ್‌ನಲ್ಲಿ ವೇಶ್ಯಾವಟಿಕೆ ಪ್ರಕರಣ: ಆರೋಪಿ ಸುಂದರ್ ಶೆಟ್ಟಿಗೆ ಜಾಮೀನು ಮಂಜೂರು

ಬೆಳ್ತಂಗಡಿ: ಸರಕಾರಿ ಜಾಗದಲ್ಲಿ ಅನಧಿಕೃತವಾಗಿ ಕಟ್ಟಡದ ಕ್ಯಾಂಟಿನ್ ನಲ್ಲಿ ವೇಶ್ಯಾವಟಿಕೆ ಪ್ರಕರಣ ಸಂಬಂಧ ಮೊದಲ ಆರೋಪಿ ಸುಂದರ್ ಶೆಟ್ಟಿಗೆ ಮಂಗಳೂರು ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಕೆಇಬಿ ರಸ್ತೆಯಲ್ಲಿರುವ ಪವನ್ ಕ್ಯಾಂಟಿನ್ ನಲ್ಲಿ ವೇಶ್ಯಾವಟಿಕೆ ನಡೆಯುತ್ತಿದ್ದಾಗ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಿಖಂದರ್ ಪಾಷ ನೇತೃತ್ವದ ಪೊಲೀಸರು ಮೇ.10 ರಂದು ಸಂಜೆ 5 ಗಂಟೆಗೆ ದಾಳಿ ಮಾಡಿ ವೇಶ್ಯಾವಟಿಕೆ ನಡೆಸುತ್ತಿದ್ದ ಕ್ಯಾಂಟಿನ್ ಮಾಲೀಕ ಸುಂದರ್ ಶೆಟ್ಟಿ(55) ಮತ್ತು ಉಸ್ಮಾನ್(38) ನನ್ನು ಬಂಧಿಸಿ ,ಓರ್ವ ಸಂತ್ರಸ್ತ ಮಹಿಳೆಯನ್ನು ರಕ್ಷಣೆ ಮಾಡಿ ಪ್ರಕರಣ ದಾಖಲಿಸಿದ್ದರು.

ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸರು ಸುಂದರ್ ಶೆಟ್ಟಿ ಮತ್ತು ಉಸ್ಮಾನ್ ನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಮೇ.11 ರಂದು ಸಂಜೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಎರಡನೇ ಆರೋಪಿ ಉಸ್ಮಾನ್ ಗೆ ಮೇ.25 ರಂದು ಜಾಮೀನು ಮಂಜೂರಾಗಿತ್ತು.

ಮಂಗಳೂರು ಸೆಷನ್ಸ್ ನ್ಯಾಯಾಲಯದಲ್ಲಿ ಸುಂದರ್ ಶೆಟ್ಟಿ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದ ನಡೆಸಿದ ನ್ಯಾಯಾಲಯ ಮೊದಲ ಆರೋಪಿ ಸುಂದರ್ ಶೆಟ್ಟಿಗೆ ಮೇ.27 ರಂದು ಜಾಮೀನು ಮಂಜೂರು ಮಾಡಿದೆ. ಸುಂದರ್ ಶೆಟ್ಟಿ ಪರ ಮಂಗಳೂರು ವಕೀಲರಾದ ಅರುಣ್ ಬಂಗೇರ ರವರು ವಾದ ಮಂಡಿಸಿದ್ದಾರೆ.

Related posts

ಬಳಂಜ ಶಾಲಾ ಅಮೃತ ಮಹೋತ್ಸವದ ಬಗ್ಗೆ ಹಿತ ಚಿಂತಕರ ಸಭೆ: ಅಮೃತ ಮಹೋತ್ಸವದ ಅಧ್ಯಕ್ಷರಾಗಿ ಚಂದ್ರಶೇಖರ್ ಪಿ‌.ಕೆ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜನುಮ ದಿನ: ಬೆಳ್ತಂಗಡಿ ವರ್ತಕರ ಸಂಘದಿಂದ ಭೇಟಿ, ಗೌರವಾರ್ಪಣೆ

Suddi Udaya

ಶ್ರೀ ಕ್ಷೇತ್ರ ಸೌತಡ್ಕಕ್ಕೆ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಇಂದ್ರೇಶ್ ಎನ್.ಎಸ್ ಭೇಟಿ

Suddi Udaya

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದಿಂದ ಬೈಕ್ ಜಾಥದ ಮೂಲಕ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಜೆ ಸಿ ಐ ಕೊಕ್ಕಡ ಕಪಿಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ : ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಕಾರು ಕಳವು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲು

Suddi Udaya
error: Content is protected !!