May 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕ್ಯಾಂಟಿನ್‌ನಲ್ಲಿ ವೇಶ್ಯಾವಟಿಕೆ ಪ್ರಕರಣ: ಆರೋಪಿ ಸುಂದರ್ ಶೆಟ್ಟಿಗೆ ಜಾಮೀನು ಮಂಜೂರು

ಬೆಳ್ತಂಗಡಿ: ಸರಕಾರಿ ಜಾಗದಲ್ಲಿ ಅನಧಿಕೃತವಾಗಿ ಕಟ್ಟಡದ ಕ್ಯಾಂಟಿನ್ ನಲ್ಲಿ ವೇಶ್ಯಾವಟಿಕೆ ಪ್ರಕರಣ ಸಂಬಂಧ ಮೊದಲ ಆರೋಪಿ ಸುಂದರ್ ಶೆಟ್ಟಿಗೆ ಮಂಗಳೂರು ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಕೆಇಬಿ ರಸ್ತೆಯಲ್ಲಿರುವ ಪವನ್ ಕ್ಯಾಂಟಿನ್ ನಲ್ಲಿ ವೇಶ್ಯಾವಟಿಕೆ ನಡೆಯುತ್ತಿದ್ದಾಗ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಿಖಂದರ್ ಪಾಷ ನೇತೃತ್ವದ ಪೊಲೀಸರು ಮೇ.10 ರಂದು ಸಂಜೆ 5 ಗಂಟೆಗೆ ದಾಳಿ ಮಾಡಿ ವೇಶ್ಯಾವಟಿಕೆ ನಡೆಸುತ್ತಿದ್ದ ಕ್ಯಾಂಟಿನ್ ಮಾಲೀಕ ಸುಂದರ್ ಶೆಟ್ಟಿ(55) ಮತ್ತು ಉಸ್ಮಾನ್(38) ನನ್ನು ಬಂಧಿಸಿ ,ಓರ್ವ ಸಂತ್ರಸ್ತ ಮಹಿಳೆಯನ್ನು ರಕ್ಷಣೆ ಮಾಡಿ ಪ್ರಕರಣ ದಾಖಲಿಸಿದ್ದರು.

ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸರು ಸುಂದರ್ ಶೆಟ್ಟಿ ಮತ್ತು ಉಸ್ಮಾನ್ ನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಮೇ.11 ರಂದು ಸಂಜೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಎರಡನೇ ಆರೋಪಿ ಉಸ್ಮಾನ್ ಗೆ ಮೇ.25 ರಂದು ಜಾಮೀನು ಮಂಜೂರಾಗಿತ್ತು.

ಮಂಗಳೂರು ಸೆಷನ್ಸ್ ನ್ಯಾಯಾಲಯದಲ್ಲಿ ಸುಂದರ್ ಶೆಟ್ಟಿ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದ ನಡೆಸಿದ ನ್ಯಾಯಾಲಯ ಮೊದಲ ಆರೋಪಿ ಸುಂದರ್ ಶೆಟ್ಟಿಗೆ ಮೇ.27 ರಂದು ಜಾಮೀನು ಮಂಜೂರು ಮಾಡಿದೆ. ಸುಂದರ್ ಶೆಟ್ಟಿ ಪರ ಮಂಗಳೂರು ವಕೀಲರಾದ ಅರುಣ್ ಬಂಗೇರ ರವರು ವಾದ ಮಂಡಿಸಿದ್ದಾರೆ.

Related posts

ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿರುವುದು ಅಮಾನವೀಯವಾದುದು: ಶೇಖರ್ ಲಾಯಿಲ

Suddi Udaya

ಕನ್ಯಾಡಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ರಕ್ಷಿತ್ ಶಿವರಾಮ್

Suddi Udaya

ಇಲಂತಿಲ ಗ್ರಾ.ಪಂ. ನಲ್ಲಿ ವಿಕಲ ಚೇತನ ವಿಶೇಷ ಗ್ರಾಮ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ರೋಟರಿ ಕ್ಲಬ್ ಮಡಂತ್ಯಾರು ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ಮಾಲಾಡಿ: ಕೊಲ್ಪೆದಬೈಲ್ ಉಮೇಶ್ ಶೆಟ್ಟಿಯವರ ಮನೆಯಲ್ಲಿ ಪ್ರೇತ ಬಾಧೆ: ಬೆಂಕಿ ಹಿಡಿದು ಉರಿಯುವ ಬಟ್ಟೆ-ನೆಲಕ್ಕೆ ಬೀಳುತ್ತಿರುವ ಪಾತ್ರೆ ಬಟ್ಟಲು; ಮನೆಯವರಲ್ಲಿ ಆತಂಕ ಸೃಷ್ಟಿ

Suddi Udaya

ಬುರುಡೆ ಷಡ್ಯಂತ್ರ ಪ್ರಕರಣ: ಇಬ್ಬರ ಮೊಬೈಲ್ ಬಿಡುಗಡೆ ಅರ್ಜಿ ವಜಾಗೊಳಿಸಿದ ನ್ಯಾಯಾಲಯ

Suddi Udaya
error: Content is protected !!