24.7 C
ಪುತ್ತೂರು, ಬೆಳ್ತಂಗಡಿ
August 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಸೊಸೈಟಿ ಹಗರಣ ಪ್ರಕರಣ : ಆರೋಪಿ ಪ್ರಶಾಂತ್ ಮೇಲೆ ವಿಘ್ನೇಶ್ ಗೌಡ ಹಲ್ಲೆ

ಬೆಳ್ತಂಗಡಿ : ಬೆಳಾಲು ಸಿಎ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಶಾಂತ್ ಮೇಲೆ ವಿಘ್ನೇಶ್ ಗೌಡ ಎಂಬಾತ ಹಲ್ಲೆ ನಡೆಸಿ ಗಾಯಗೊಳಿಸಿ ಅವಾಚ್ಯ ಶಬ್ಧಗಳಿಂದ ಬೈದಿರುವುದಾಗಿ ಪ್ರಶಾಂತ್ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆರೋಪಿ ವಿಘ್ನೇಶ್ ಗೌಡ ಎಂಬಾತನ ಮೇಲೆ ಪ್ರಕರಣ ದಾಖಲಾಗಿದೆ.

ಈ ಘಟನೆ ಬಗ್ಗೆ ದೂರುದಾರ ಆರೋಪಿ ಬಂದಾರು ಗ್ರಾಮದ ಬೈದ್ರೊಟ್ಟು ನಿವಾಸಿ ಪ್ರಶಾಂತ್ ಧರ್ಮಸ್ಥಳ ಠಾಣೆಗೆ ದೂರು ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯದ ಅನುಮತಿಯ ಆದೇಶ ದೊರೆತ ಬಳಿಕ ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಕರಣದ ಹಿನ್ನಲೆ: ಬೆಳ್ತಂಗಡಿ ತಾಲೂಕಿನ ಬೆಳಾಲು ಸೊಸೈಟಿಗೆ ಎ.22 ರಂದು ಬಂದಿದ್ದ ಪ್ರಶಾಂತ್ ತನ್ನ ಕೆಲಸ ಮುಗಿಸಿ ಸೊಸೈಟಿಯಿಂದ ಹೊರಗೆ ಬಂದಾಗ ಸೊಸೈಟಿ ವಠಾರದಲ್ಲಿದ್ದ ತನ್ನ ಪರಿಚಯಸ್ಥ ವಿಘ್ನೇಶ್ ಗೌಡ ಎಂಬಾತನು ಪ್ರಶಾಂತ್ ಬಳಿ ಬಂದು “ನನ್ನ ಬಂಗಾರ ಎಲ್ಲಿ” ಎಂದು ಜಗಳ ತೆಗೆದು ಆತನಿಗೆ ಕೈಯಿಂದ ಹಲ್ಲೆ ಮಾಡಿ, ಅವಾಚ್ಯ ಶಬ್ದಗಳಿಂದ ಬೈದಿದ್ದಾನೆ. ಆರೋಪಿ ವಿಘ್ನೇಶ್ ಗೌಡ ಕೈಯಿಂದ ಹಲ್ಲೆ ಮಾಡಿದಾಗ ಪ್ರಶಾಂತ್ ಕೈ ಅಡ್ಡ ಇಟ್ಟಾಗ ಆತನ ಕೈ ಬೆರಳಿಗೆ ಗಾಯವಾಗಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಮೇ.15 ರಂದು ಬಿಎನ್‌ಎಸ್ ೧೧೫(೨), ೩೫೨ ಸೆಕ್ಷನ್ ಅಡಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಕಲ್ಮಂಜ ಪ್ರೌಢಶಾಲೆಯ ವಿದ್ಯಾರ್ಥಿಗಳು ಯೋಗಾಸನದಲ್ಲಿ ವಿಭಾಗಮಟ್ಟಕ್ಕೆ ಆಯ್ಕೆ

Suddi Udaya

ಬೆಳಾಲು ಗ್ರಾ.ಪಂ. ನಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ವೆನ್ಲಾಕ್‌ ರಕ್ಷಾ ಸಮಿತಿ ಸಭೆಯಲ್ಲಿ ಕರೀಂ ಗೇರುಕಟ್ಟೆ, ಜಯರಾಮ ಭಾಗಿ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಉಜಿರೆ : ಅತ್ತಾಜೆಯಲ್ಲಿರುವ ಎಮ್. ಆರ್. ಎಫ್ ಘಟಕದಲ್ಲಿ ಒಣ ಕಸ ವಿಲೇವಾರಿ ಕುರಿತು ಅರಸಿನಮಕ್ಕಿ, ಶಿಬಾಜೆ ಗ್ರಾಮ ಪಂಚಾಯತ್ ನಲ್ಲಿ ಮಾಹಿತಿ ಕಾರ್ಯ

Suddi Udaya

ವೇಣೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya
error: Content is protected !!