May 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಸೊಸೈಟಿ ಹಗರಣ ಪ್ರಕರಣ : ಆರೋಪಿ ಪ್ರಶಾಂತ್ ಮೇಲೆ ವಿಘ್ನೇಶ್ ಗೌಡ ಹಲ್ಲೆ

ಬೆಳ್ತಂಗಡಿ : ಬೆಳಾಲು ಸಿಎ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಶಾಂತ್ ಮೇಲೆ ವಿಘ್ನೇಶ್ ಗೌಡ ಎಂಬಾತ ಹಲ್ಲೆ ನಡೆಸಿ ಗಾಯಗೊಳಿಸಿ ಅವಾಚ್ಯ ಶಬ್ಧಗಳಿಂದ ಬೈದಿರುವುದಾಗಿ ಪ್ರಶಾಂತ್ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆರೋಪಿ ವಿಘ್ನೇಶ್ ಗೌಡ ಎಂಬಾತನ ಮೇಲೆ ಪ್ರಕರಣ ದಾಖಲಾಗಿದೆ.

ಈ ಘಟನೆ ಬಗ್ಗೆ ದೂರುದಾರ ಆರೋಪಿ ಬಂದಾರು ಗ್ರಾಮದ ಬೈದ್ರೊಟ್ಟು ನಿವಾಸಿ ಪ್ರಶಾಂತ್ ಧರ್ಮಸ್ಥಳ ಠಾಣೆಗೆ ದೂರು ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯದ ಅನುಮತಿಯ ಆದೇಶ ದೊರೆತ ಬಳಿಕ ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಕರಣದ ಹಿನ್ನಲೆ: ಬೆಳ್ತಂಗಡಿ ತಾಲೂಕಿನ ಬೆಳಾಲು ಸೊಸೈಟಿಗೆ ಎ.22 ರಂದು ಬಂದಿದ್ದ ಪ್ರಶಾಂತ್ ತನ್ನ ಕೆಲಸ ಮುಗಿಸಿ ಸೊಸೈಟಿಯಿಂದ ಹೊರಗೆ ಬಂದಾಗ ಸೊಸೈಟಿ ವಠಾರದಲ್ಲಿದ್ದ ತನ್ನ ಪರಿಚಯಸ್ಥ ವಿಘ್ನೇಶ್ ಗೌಡ ಎಂಬಾತನು ಪ್ರಶಾಂತ್ ಬಳಿ ಬಂದು “ನನ್ನ ಬಂಗಾರ ಎಲ್ಲಿ” ಎಂದು ಜಗಳ ತೆಗೆದು ಆತನಿಗೆ ಕೈಯಿಂದ ಹಲ್ಲೆ ಮಾಡಿ, ಅವಾಚ್ಯ ಶಬ್ದಗಳಿಂದ ಬೈದಿದ್ದಾನೆ. ಆರೋಪಿ ವಿಘ್ನೇಶ್ ಗೌಡ ಕೈಯಿಂದ ಹಲ್ಲೆ ಮಾಡಿದಾಗ ಪ್ರಶಾಂತ್ ಕೈ ಅಡ್ಡ ಇಟ್ಟಾಗ ಆತನ ಕೈ ಬೆರಳಿಗೆ ಗಾಯವಾಗಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಮೇ.15 ರಂದು ಬಿಎನ್‌ಎಸ್ ೧೧೫(೨), ೩೫೨ ಸೆಕ್ಷನ್ ಅಡಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಗದ್ದೆಯಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಕ್ಸಲೆಂಟ್ ಮೂಡುಬಿದಿರೆಗೆ ರಾಜ್ಯ ಮಟ್ಟದಲ್ಲಿ ಎರಡನೇ ಮತ್ತು ನಾಲ್ಕನೇ ರ‍್ಯಾಂಕ್‌ಗಳು

Suddi Udaya

ಗರ್ಡಾಡಿ: ಕುಂಡದಬೆಟ್ಟು ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya

ಬೆಳ್ತಂಗಡಿ: ಲೋಕೇಶ್ವರಿ ವಿನಯಚಂದ್ರ ಅರೆಭಾಷೆ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ

Suddi Udaya

ರಾಜ್ಯದಲ್ಲಿ ಅನಧಿಕೃತ ಲೋಡ್‌ ಶೆಡ್ಡಿಂಗ್‌ನಿಂದಾಗಿ ಅಸಮರ್ಪಕ ವಿದ್ಯುತ್‌ ವಿತರಣೆ: ಸಾರ್ವಜನಿಕರು, ಉದ್ಯಮಿಗಳು ಹಾಗೂ ರೈತರಿಗೆ ಸಂಕಷ್ಟ: ಪ್ರತಾಪಸಿಂಹ ನಾಯಕ್‌

Suddi Udaya

ಹೊಸಪಟ್ಣ: ಸಾಮೂಹಿಕ ಸತ್ಯನಾರಾಯಣ ಪೂಜೆ, ಧಾರ್ಮಿಕಸಭೆ

Suddi Udaya
error: Content is protected !!