May 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಅಝ್ಹಾ ಪ್ರಾರ್ಥನೆ

ಬೆಳ್ತಂಗಡಿ: ಖಿಳರ್ ಜುಮ್ಮಾ ಮಸೀದಿ ವತಿಯಿಂದ ಈದ್ ಉಲ್ ಅಝ್ಹಾ ಹಬ್ಬದ ಅಂಗವಾಗಿ ಇಂದು ಬೆಳಿಗ್ಗೆ ಸಂಭ್ರಮದ ಪ್ರಾರ್ಥನಾ ಕಾರ್ಯಕ್ರಮ ನಡೆಯಿತು.

ಮಸೀದಿಯ ಖತೀಬರಾದ ಹನೀಫ್ ಫೈಝಿ ಅವರ ನೇತೃತ್ವದಲ್ಲಿ ಈದ್ ಪ್ರಾರ್ಥನೆ ನೆರವೇರಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈದ್ ಹಬ್ಬವು ದಾನ, ಕರುಣೆ, ತ್ಯಾಗ ಮತ್ತು ಸಹೋದರತ್ವದ ಸಂದೇಶ ಸಾರುವ ಮಹತ್ವದ ಹಬ್ಬವಾಗಿದ್ದು, ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ಬೆಳೆಸುವ ಹಬ್ಬವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಖಿಳರ್ ಜುಮ್ಮಾ ಮಸೀದಿ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಗೌರವ ಅಧ್ಯಕ್ಷ ಬಿ.ಎಚ್. ಮಹಮ್ಮದ್, ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಚ್. ರಝಾಕ್, ಕಾರ್ಯದರ್ಶಿಗಳಾದ ಹನೀಫ್ ವರ್ಷಾ ಹಾಗೂ ಮಹಮ್ಮದ್ ಕುದ್ರಡ್ಕ, ಕೋಶಾಧಿಕಾರಿಗಳಾದ ಫೈಝಲ್ ಐ.ಜೆ., ಮದರಸ ಸಮಿತಿ ಅಧ್ಯಕ್ಷರಾದ ಬಿ. ಶೇಕುಂಞ್ಞ, ಸಲಾತ್ ಕಮಿಟಿ ಅಧ್ಯಕ್ಷರಾದ ಹೈದರ್ ಬಿ.ಕೆ. ಸೇರಿದಂತೆ ಮಸೀದಿ ಧರ್ಮಗುರುಗಳು, ಜಮಾಅತ್ ಹಿರಿಯರು ಹಾಗೂ ಮಕ್ಕಳು ಉಪಸ್ಥಿತರಿದ್ದರು.

ಪ್ರಾರ್ಥನೆ ಬಳಿಕ ಜಮಾಅತ್ ಬಾಂಧವರು ಪರಸ್ಪರ ಈದ್ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.

Related posts

ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಮಲವಂತಿಗೆ -ಮಿತ್ತಬಾಗಿಲು ನಲ್ಲಿ “ಸ್ವ ಸಹಾಯ ಸಂಘಗಳ” ಉದ್ಘಾಟನೆ

Suddi Udaya

ಇಂದಬೆಟ್ಟು: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಕಾರ್ಯಕರ್ತರೊಂದಿಗೆ ಸಮಾಲೋಚನೆ ಸಭೆ

Suddi Udaya

ತಾಲೂಕು ಶಾಮಿಯಾನ ಮಾಲಕರ ಸಂಘದ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ನಾರಾವಿ:ಸಂತ ಅಂತೋನಿ ಶಿಕ್ಷಣ ಸಂಸ್ಥೆಯಲ್ಲಿ ಚಿಣ್ಣರ ಕಲರವ – ಕ್ರೀಡಾಸಂಗಮ

Suddi Udaya

ಸೋಲಾರ್ ಟಾರ್ಪಾಲಿನ್ ಶೀಟ್ ಖರೀದಿಗೆ ಸಹಾಯಧನ: ಅರ್ಜಿ ಆಹ್ವಾನ

Suddi Udaya

ಉಜಿರೆಯಲ್ಲಿ ಗೌತಮ್ ಬಿ.ಆರ್ ಮಾಲಕತ್ವದ ಹೋಟೆಲ್ ನ್ಯೂ ಸಪ್ನಾ ಶುಭಾರಂಭ

Suddi Udaya
error: Content is protected !!