July 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಅಝ್ಹಾ ಪ್ರಾರ್ಥನೆ

ಬೆಳ್ತಂಗಡಿ: ಖಿಳರ್ ಜುಮ್ಮಾ ಮಸೀದಿ ವತಿಯಿಂದ ಈದ್ ಉಲ್ ಅಝ್ಹಾ ಹಬ್ಬದ ಅಂಗವಾಗಿ ಇಂದು ಬೆಳಿಗ್ಗೆ ಸಂಭ್ರಮದ ಪ್ರಾರ್ಥನಾ ಕಾರ್ಯಕ್ರಮ ನಡೆಯಿತು.

ಮಸೀದಿಯ ಖತೀಬರಾದ ಹನೀಫ್ ಫೈಝಿ ಅವರ ನೇತೃತ್ವದಲ್ಲಿ ಈದ್ ಪ್ರಾರ್ಥನೆ ನೆರವೇರಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈದ್ ಹಬ್ಬವು ದಾನ, ಕರುಣೆ, ತ್ಯಾಗ ಮತ್ತು ಸಹೋದರತ್ವದ ಸಂದೇಶ ಸಾರುವ ಮಹತ್ವದ ಹಬ್ಬವಾಗಿದ್ದು, ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ಬೆಳೆಸುವ ಹಬ್ಬವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಖಿಳರ್ ಜುಮ್ಮಾ ಮಸೀದಿ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಗೌರವ ಅಧ್ಯಕ್ಷ ಬಿ.ಎಚ್. ಮಹಮ್ಮದ್, ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಚ್. ರಝಾಕ್, ಕಾರ್ಯದರ್ಶಿಗಳಾದ ಹನೀಫ್ ವರ್ಷಾ ಹಾಗೂ ಮಹಮ್ಮದ್ ಕುದ್ರಡ್ಕ, ಕೋಶಾಧಿಕಾರಿಗಳಾದ ಫೈಝಲ್ ಐ.ಜೆ., ಮದರಸ ಸಮಿತಿ ಅಧ್ಯಕ್ಷರಾದ ಬಿ. ಶೇಕುಂಞ್ಞ, ಸಲಾತ್ ಕಮಿಟಿ ಅಧ್ಯಕ್ಷರಾದ ಹೈದರ್ ಬಿ.ಕೆ. ಸೇರಿದಂತೆ ಮಸೀದಿ ಧರ್ಮಗುರುಗಳು, ಜಮಾಅತ್ ಹಿರಿಯರು ಹಾಗೂ ಮಕ್ಕಳು ಉಪಸ್ಥಿತರಿದ್ದರು.

ಪ್ರಾರ್ಥನೆ ಬಳಿಕ ಜಮಾಅತ್ ಬಾಂಧವರು ಪರಸ್ಪರ ಈದ್ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.

Related posts

ಕೆ. ಪಿ. ಸಿ. ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ಶ್ರೀ ಕ್ಷೇ ಧ ಗ್ರಾ ಯೋಜನೆಯ ಅಳದಂಗಡಿ ವಲಯದ ವಾತ್ಸಲ್ಯ ಕುಟುಂಬದ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ

Suddi Udaya

ಮಡಂತ್ಯಾರು ಮುಖ್ಯರಸ್ತೆಯಲ್ಲಿ ಗುಡ್ಡ ಕುಸಿತ: ಟಾಟಾ ಎಸಿ ವಾಹನ ಜಖಂ; ಅಂಗಡಿಗೆ ಸಂಪೂರ್ಣ ಹಾನಿ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಡಾ. ಡಿ. ಹೆಗ್ಗಡೆಯವರಿಂದ ರೂ.25 ಲಕ್ಷ ಅನುದಾನ

Suddi Udaya

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ದರೆಗೆ ಗುದ್ದಿದ ಲಾರಿ

Suddi Udaya

ಭಾರೀ ಮಳೆಗೆ ಪಟ್ರಮೆ ಹಟ್ಟೆಕಲ್ಲು ನಲ್ಲಿ ಮನೆಯ ಗೋಡೆ ಕುಸಿತ

Suddi Udaya
error: Content is protected !!