July 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕ್ಯಾಂಟಿನ್‌ನಲ್ಲಿ ವೇಶ್ಯಾವಟಿಕೆ ಪ್ರಕರಣ: ಆರೋಪಿ ಸುಂದರ್ ಶೆಟ್ಟಿಗೆ ಜಾಮೀನು ಮಂಜೂರು

ಬೆಳ್ತಂಗಡಿ: ಸರಕಾರಿ ಜಾಗದಲ್ಲಿ ಅನಧಿಕೃತವಾಗಿ ಕಟ್ಟಡದ ಕ್ಯಾಂಟಿನ್ ನಲ್ಲಿ ವೇಶ್ಯಾವಟಿಕೆ ಪ್ರಕರಣ ಸಂಬಂಧ ಮೊದಲ ಆರೋಪಿ ಸುಂದರ್ ಶೆಟ್ಟಿಗೆ ಮಂಗಳೂರು ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಕೆಇಬಿ ರಸ್ತೆಯಲ್ಲಿರುವ ಪವನ್ ಕ್ಯಾಂಟಿನ್ ನಲ್ಲಿ ವೇಶ್ಯಾವಟಿಕೆ ನಡೆಯುತ್ತಿದ್ದಾಗ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಿಖಂದರ್ ಪಾಷ ನೇತೃತ್ವದ ಪೊಲೀಸರು ಮೇ.10 ರಂದು ಸಂಜೆ 5 ಗಂಟೆಗೆ ದಾಳಿ ಮಾಡಿ ವೇಶ್ಯಾವಟಿಕೆ ನಡೆಸುತ್ತಿದ್ದ ಕ್ಯಾಂಟಿನ್ ಮಾಲೀಕ ಸುಂದರ್ ಶೆಟ್ಟಿ(55) ಮತ್ತು ಉಸ್ಮಾನ್(38) ನನ್ನು ಬಂಧಿಸಿ ,ಓರ್ವ ಸಂತ್ರಸ್ತ ಮಹಿಳೆಯನ್ನು ರಕ್ಷಣೆ ಮಾಡಿ ಪ್ರಕರಣ ದಾಖಲಿಸಿದ್ದರು.

ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸರು ಸುಂದರ್ ಶೆಟ್ಟಿ ಮತ್ತು ಉಸ್ಮಾನ್ ನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಮೇ.11 ರಂದು ಸಂಜೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಎರಡನೇ ಆರೋಪಿ ಉಸ್ಮಾನ್ ಗೆ ಮೇ.25 ರಂದು ಜಾಮೀನು ಮಂಜೂರಾಗಿತ್ತು.

ಮಂಗಳೂರು ಸೆಷನ್ಸ್ ನ್ಯಾಯಾಲಯದಲ್ಲಿ ಸುಂದರ್ ಶೆಟ್ಟಿ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದ ನಡೆಸಿದ ನ್ಯಾಯಾಲಯ ಮೊದಲ ಆರೋಪಿ ಸುಂದರ್ ಶೆಟ್ಟಿಗೆ ಮೇ.27 ರಂದು ಜಾಮೀನು ಮಂಜೂರು ಮಾಡಿದೆ. ಸುಂದರ್ ಶೆಟ್ಟಿ ಪರ ಮಂಗಳೂರು ವಕೀಲರಾದ ಅರುಣ್ ಬಂಗೇರ ರವರು ವಾದ ಮಂಡಿಸಿದ್ದಾರೆ.

Related posts

ಡಾ. ಸುಬ್ರಹ್ಮಣ್ಯ ಭಟ್ ರವರ ಎರಡನೇ ಕಾದಂಬರಿ “ಪುಟ್ಟಣ್ಣ ಮಾಷ್ಟ್ರು” ಬಿಡುಗಡೆ

Suddi Udaya

ಶಿಕ್ಷಣ ಇಲಾಖೆ ನಡೆಸುವ ಇಸಿಒ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಶಿಕ್ಷಕ ಎಡ್ವರ್ಡ್ ಡಿ’ ಸೋಜ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರಥಮ

Suddi Udaya

ಮಡಂತ್ಯಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶುಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಧರ್ಮಸ್ಥಳ ಸೊಸೈಟಿಗೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಸರಕಾರಿ/ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಿ.ಎ. ತರಗತಿಗಳಲ್ಲಿ ಭಾಗವಹಿಸಲು ಸುವರ್ಣಾವಕಾಶ: ಎಕ್ಸೆಲ್ ಕಾಲೇಜಿನಲ್ಲಿ ಸಿ.ಎ ಫೌಂಡೇಶನ್ ತರಗತಿಗಳು ಪ್ರತಿ ಆದಿತ್ಯವಾರ ನಡೆಯಲಿದೆ

Suddi Udaya

5‌ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆ: ಅಂತಿಮ ವೇಳಾಪಟ್ಟಿ ಪ್ರಕಟ

Suddi Udaya
error: Content is protected !!