23.6 C
ಪುತ್ತೂರು, ಬೆಳ್ತಂಗಡಿ
August 30, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ದೇಶದ ಪ್ರತಿಷ್ಠಿತ “ಎಮಿನೆಂಟ್ ಎಂಜಿನಿಯರ್ ಅವಾರ್ಡ್”ಗೆ ಭಾಜನರಾದ ಇಂಜಿನಿಯರ್ ಜಗದೀಶ್ ಪ್ರಸಾದ್ ಎನ್.

ಬೆಳ್ತಂಗಡಿ: Association of Consulting Civil Engineers (India) ಸಂಸ್ಥೆಯ ವತಿಯಿಂದ ಮೈಸೂರಿನಲ್ಲಿ ಮೇ 27 ನಡೆದ Silver Jubilee Celebrations ಹಾಗೂ National Awards Day ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಕೇಂದ್ರದ ಹಿರಿಯ ಸಿವಿಲ್ ಇಂಜಿನಿಯರ್ ಇಂಜಿನಿಯರ್ ಜಗದೀಶ್ ಪ್ರಸಾದ್ ಎನ್ ಅವರಿಗೆ ದೇಶದ ಪ್ರತಿಷ್ಠಿತ “ಎಮಿನೆಂಟ್ ಎಂಜಿನಿಯರ್ ಅವಾರ್ಡ್” ಪ್ರದಾನ ಮಾಡಲಾಯಿತು.

ನಿರ್ಮಾಣ ಕ್ಷೇತ್ರದಲ್ಲಿ ದೀರ್ಘಕಾಲದ ಸೇವೆ, 150ಕ್ಕೂ ಹೆಚ್ಚು ವಸತಿ ಗೃಹಗಳ ನಿರ್ಮಾಣ, ಬಹುಮಹಡಿ ಕಟ್ಟಡಗಳ ನಿರ್ಮಾಣ, ವೃತ್ತಿಪರ ಸಂಘಟನೆಗಳ ಬೆಳವಣಿಗೆಗೆ ನೀಡಿದ ಕೊಡುಗೆ, ಸಮಾಜಸೇವೆ ಹಾಗೂ ಕೃಷಿ ಕ್ಷೇತ್ರದಲ್ಲಿನ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ಅವರನ್ನು ಸನ್ಮಾನಿಸಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ACCE(I) ಬೆಳ್ತಂಗಡಿ ಕೇಂದ್ರದ ಅಧ್ಯಕ್ಷರಾದ ಇಂಜಿನಿಯರ್ ಸುರೇಶ್ ಬಂಗೇರ, ಕಾರ್ಯದರ್ಶಿ ಇಂಜಿನಿಯರ್ ಶಿಜೋ ಜೋಸೆಫ್, ಕೋಶಾಧಿಕಾರಿ ಇಂಜಿನಿಯರ್ ನಾಗೇಶ್ ಎಂ ಹಾಗೂ ಸದಸ್ಯ ಇಂಜಿನಿಯರುಗಳು ಉಪಸ್ಥಿತರಿದ್ದರು.

ಇಂಜಿನಿಯರ್ ಜಗದೀಶ್ ಪ್ರಸಾದ್ ಎನ್ ಅವರು ACCE(I) ಬೆಳ್ತಂಗಡಿ ಕೇಂದ್ರದ ಸ್ಥಾಪಕ ಅಧ್ಯಕ್ಷರಾಗಿದ್ದು, ಅವರ ಅವಧಿಯಲ್ಲಿ ಕೇಂದ್ರದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದರು. ಜೊತೆಗೆ ACCE(I) ಪುತ್ತೂರು ಕೇಂದ್ರ ಸ್ಥಾಪನೆಗೂ ಪ್ರೋತ್ಸಾಹ ನೀಡಿದ್ದು, ಅನೇಕ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ತಾಂತ್ರಿಕ ವಿಚಾರಗೋಷ್ಠಿಗಳನ್ನು ಆಯೋಜಿಸಿದ್ದರು. ಕಾರ್ಯಕ್ರಮವು ಮೈಸೂರಿನ North Avenue Event Space & Banquet Hall ನಲ್ಲಿ ಭವ್ಯವಾಗಿ ಜರುಗಿತು.

Related posts

ಬೆಳ್ತಂಗಡಿಯಲ್ಲಿ ನೂತನ ಶಾಖೆ ‘ಕೋಟಕ್ ಲೈಫ್’ ಉದ್ಘಾಟನೆ

Suddi Udaya

ಕಾಸರಗೋಡು ಬೆಳ್ಳೂರ್ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಉಜಿರೆ ಶ್ರೀ ಲಕ್ಷ್ಮೀ ಮಹಿಳಾ ಭಜನಾ ಸಂಘದ ಸದಸ್ಯರಿಂದ ಭಜನಾ ಸೇವೆ

Suddi Udaya

ಸಂಬೋಳ್ಯದ ಮೃತ ಬಾಲಕ ಸುಮಂತ್ ಮನೆಗೆ ಸಂಸದ ಬ್ರಿಜೇಶ್ ಚೌಟ ಭೇಟಿ

Suddi Udaya

ನಿರ್ಮಾಣ ಹಂತದಲ್ಲಿರುವ ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿ ಭಗವಾನ್ ಶ್ರೀ ಕೃಷ್ಣನ ಮೂರ್ತಿ ಪ್ರತ್ಯಕ್ಷ: ಮೂರ್ತಿಗೆ ಹೂ ಹಾಕಿ, ಪ್ರಾರ್ಥಿಸಿ ಹೋದ ಅನಾಮಿಕ,

Suddi Udaya

ಬಜಿರೆ: ಹೊಸಪಟ್ಣ ನಿವಾಸಿ ಸಂಜೀವ ಹೆಗ್ಡೆ ನಿಧನ

Suddi Udaya

ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

Suddi Udaya
error: Content is protected !!