28 C
ಪುತ್ತೂರು, ಬೆಳ್ತಂಗಡಿ
May 28, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ದೇಶದ ಪ್ರತಿಷ್ಠಿತ “ಎಮಿನೆಂಟ್ ಎಂಜಿನಿಯರ್ ಅವಾರ್ಡ್”ಗೆ ಭಾಜನರಾದ ಇಂಜಿನಿಯರ್ ಜಗದೀಶ್ ಪ್ರಸಾದ್ ಎನ್.

ಬೆಳ್ತಂಗಡಿ: Association of Consulting Civil Engineers (India) ಸಂಸ್ಥೆಯ ವತಿಯಿಂದ ಮೈಸೂರಿನಲ್ಲಿ ಮೇ 27 ನಡೆದ Silver Jubilee Celebrations ಹಾಗೂ National Awards Day ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಕೇಂದ್ರದ ಹಿರಿಯ ಸಿವಿಲ್ ಇಂಜಿನಿಯರ್ ಇಂಜಿನಿಯರ್ ಜಗದೀಶ್ ಪ್ರಸಾದ್ ಎನ್ ಅವರಿಗೆ ದೇಶದ ಪ್ರತಿಷ್ಠಿತ “ಎಮಿನೆಂಟ್ ಎಂಜಿನಿಯರ್ ಅವಾರ್ಡ್” ಪ್ರದಾನ ಮಾಡಲಾಯಿತು.

ನಿರ್ಮಾಣ ಕ್ಷೇತ್ರದಲ್ಲಿ ದೀರ್ಘಕಾಲದ ಸೇವೆ, 150ಕ್ಕೂ ಹೆಚ್ಚು ವಸತಿ ಗೃಹಗಳ ನಿರ್ಮಾಣ, ಬಹುಮಹಡಿ ಕಟ್ಟಡಗಳ ನಿರ್ಮಾಣ, ವೃತ್ತಿಪರ ಸಂಘಟನೆಗಳ ಬೆಳವಣಿಗೆಗೆ ನೀಡಿದ ಕೊಡುಗೆ, ಸಮಾಜಸೇವೆ ಹಾಗೂ ಕೃಷಿ ಕ್ಷೇತ್ರದಲ್ಲಿನ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ಅವರನ್ನು ಸನ್ಮಾನಿಸಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ACCE(I) ಬೆಳ್ತಂಗಡಿ ಕೇಂದ್ರದ ಅಧ್ಯಕ್ಷರಾದ ಇಂಜಿನಿಯರ್ ಸುರೇಶ್ ಬಂಗೇರ, ಕಾರ್ಯದರ್ಶಿ ಇಂಜಿನಿಯರ್ ಶಿಜೋ ಜೋಸೆಫ್, ಕೋಶಾಧಿಕಾರಿ ಇಂಜಿನಿಯರ್ ನಾಗೇಶ್ ಎಂ ಹಾಗೂ ಸದಸ್ಯ ಇಂಜಿನಿಯರುಗಳು ಉಪಸ್ಥಿತರಿದ್ದರು.

ಇಂಜಿನಿಯರ್ ಜಗದೀಶ್ ಪ್ರಸಾದ್ ಎನ್ ಅವರು ACCE(I) ಬೆಳ್ತಂಗಡಿ ಕೇಂದ್ರದ ಸ್ಥಾಪಕ ಅಧ್ಯಕ್ಷರಾಗಿದ್ದು, ಅವರ ಅವಧಿಯಲ್ಲಿ ಕೇಂದ್ರದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದರು. ಜೊತೆಗೆ ACCE(I) ಪುತ್ತೂರು ಕೇಂದ್ರ ಸ್ಥಾಪನೆಗೂ ಪ್ರೋತ್ಸಾಹ ನೀಡಿದ್ದು, ಅನೇಕ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ತಾಂತ್ರಿಕ ವಿಚಾರಗೋಷ್ಠಿಗಳನ್ನು ಆಯೋಜಿಸಿದ್ದರು. ಕಾರ್ಯಕ್ರಮವು ಮೈಸೂರಿನ North Avenue Event Space & Banquet Hall ನಲ್ಲಿ ಭವ್ಯವಾಗಿ ಜರುಗಿತು.

Related posts

ಜ.20: ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನ

Suddi Udaya

ದೈವದೇವರ ಅವಹೇಳನ ಆರೋಪ: ಕಲಾವಿದರ ವಿರುದ್ಧ ದೂರು

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ರಿಂದ ಸಭಾಧ್ಯಕ್ಷ ಯು ಟಿ ಖಾದರ್ ಗೆ ಮನವಿ

Suddi Udaya

ಬೆಳ್ತಂಗಡಿ: ತಾಲೂಕಿನ ಕ್ರೀಡಾಪಟುಗಳಿಗೆ ಶಾಸಕ ಹರೀಶ್ ಪೂಂಜರಿಂದ ಕ್ರೀಡಾ ಸಮವಸ್ತ್ರ ಕೊಡುಗೆ

Suddi Udaya

ಲಾಯಿಲ: ಬಜಕ್ರೆಸಾಲು ಸೇತುವೆ ಅಡಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆ: ಡಬ್ಬಗಳನ್ನು ಒಡೆದು ಹಣ ಕಳವು ಗೈದಿರುವ ಶಂಕೆ

Suddi Udaya

ಕಾಯರ್ತಡ್ಕ : ಯುವತಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!