24.7 C
ಪುತ್ತೂರು, ಬೆಳ್ತಂಗಡಿ
August 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಸೊಸೈಟಿ ಹಗರಣ ಪ್ರಕರಣ : ಆರೋಪಿ ಪ್ರಶಾಂತ್ ಮೇಲೆ ವಿಘ್ನೇಶ್ ಗೌಡ ಹಲ್ಲೆ

ಬೆಳ್ತಂಗಡಿ : ಬೆಳಾಲು ಸಿಎ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಶಾಂತ್ ಮೇಲೆ ವಿಘ್ನೇಶ್ ಗೌಡ ಎಂಬಾತ ಹಲ್ಲೆ ನಡೆಸಿ ಗಾಯಗೊಳಿಸಿ ಅವಾಚ್ಯ ಶಬ್ಧಗಳಿಂದ ಬೈದಿರುವುದಾಗಿ ಪ್ರಶಾಂತ್ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆರೋಪಿ ವಿಘ್ನೇಶ್ ಗೌಡ ಎಂಬಾತನ ಮೇಲೆ ಪ್ರಕರಣ ದಾಖಲಾಗಿದೆ.

ಈ ಘಟನೆ ಬಗ್ಗೆ ದೂರುದಾರ ಆರೋಪಿ ಬಂದಾರು ಗ್ರಾಮದ ಬೈದ್ರೊಟ್ಟು ನಿವಾಸಿ ಪ್ರಶಾಂತ್ ಧರ್ಮಸ್ಥಳ ಠಾಣೆಗೆ ದೂರು ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯದ ಅನುಮತಿಯ ಆದೇಶ ದೊರೆತ ಬಳಿಕ ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಕರಣದ ಹಿನ್ನಲೆ: ಬೆಳ್ತಂಗಡಿ ತಾಲೂಕಿನ ಬೆಳಾಲು ಸೊಸೈಟಿಗೆ ಎ.22 ರಂದು ಬಂದಿದ್ದ ಪ್ರಶಾಂತ್ ತನ್ನ ಕೆಲಸ ಮುಗಿಸಿ ಸೊಸೈಟಿಯಿಂದ ಹೊರಗೆ ಬಂದಾಗ ಸೊಸೈಟಿ ವಠಾರದಲ್ಲಿದ್ದ ತನ್ನ ಪರಿಚಯಸ್ಥ ವಿಘ್ನೇಶ್ ಗೌಡ ಎಂಬಾತನು ಪ್ರಶಾಂತ್ ಬಳಿ ಬಂದು “ನನ್ನ ಬಂಗಾರ ಎಲ್ಲಿ” ಎಂದು ಜಗಳ ತೆಗೆದು ಆತನಿಗೆ ಕೈಯಿಂದ ಹಲ್ಲೆ ಮಾಡಿ, ಅವಾಚ್ಯ ಶಬ್ದಗಳಿಂದ ಬೈದಿದ್ದಾನೆ. ಆರೋಪಿ ವಿಘ್ನೇಶ್ ಗೌಡ ಕೈಯಿಂದ ಹಲ್ಲೆ ಮಾಡಿದಾಗ ಪ್ರಶಾಂತ್ ಕೈ ಅಡ್ಡ ಇಟ್ಟಾಗ ಆತನ ಕೈ ಬೆರಳಿಗೆ ಗಾಯವಾಗಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಮೇ.15 ರಂದು ಬಿಎನ್‌ಎಸ್ ೧೧೫(೨), ೩೫೨ ಸೆಕ್ಷನ್ ಅಡಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಶ್ರೀ ಕ್ಷೇತ್ರ ಕೊಲಕಾಡಿಯಿಂದ ಧರ್ಮಸ್ಥಳ ಭೇಟಿ

Suddi Udaya

ದಯಾ ವಿಶೇಷ ಶಾಲೆಯಲ್ಲಿ ವಿಶ್ವ ಹೆಣ್ಣು ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸಂಸದ ನಳಿನ್ ಕುಮಾರ್ ಕಟೀಲ್ ಗೆ ಆಮಂತ್ರಣ

Suddi Udaya

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಮಂಗಳೂರು ಶಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವೆಂಕಟೇಶ್ ವೈ ಆಯ್ಕೆ

Suddi Udaya

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಎಸ್.ಟಿ ಮೋರ್ಚಾವತಿಯಿಂದರಾಜೇಶ್ ಎಂ.ಕೆ. ಯವರ ಮೇಲಾದ ಮಾರಣಾಂತಿಕ ಹಲ್ಲೆ ಯನ್ನು ಖಂಡಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

Suddi Udaya

ಗೆಡ್ಡೆ (tumor) ಕಾಯಿಲೆಯಿಂದ ಬಳಲುತ್ತಿರುವ ಕಳೆಂಜದ ಪುರುಷೋತ್ತಮರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!