28 C
ಪುತ್ತೂರು, ಬೆಳ್ತಂಗಡಿ
May 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಅಝ್ಹಾ ಪ್ರಾರ್ಥನೆ

ಬೆಳ್ತಂಗಡಿ: ಖಿಳರ್ ಜುಮ್ಮಾ ಮಸೀದಿ ವತಿಯಿಂದ ಈದ್ ಉಲ್ ಅಝ್ಹಾ ಹಬ್ಬದ ಅಂಗವಾಗಿ ಇಂದು ಬೆಳಿಗ್ಗೆ ಸಂಭ್ರಮದ ಪ್ರಾರ್ಥನಾ ಕಾರ್ಯಕ್ರಮ ನಡೆಯಿತು.

ಮಸೀದಿಯ ಖತೀಬರಾದ ಹನೀಫ್ ಫೈಝಿ ಅವರ ನೇತೃತ್ವದಲ್ಲಿ ಈದ್ ಪ್ರಾರ್ಥನೆ ನೆರವೇರಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈದ್ ಹಬ್ಬವು ದಾನ, ಕರುಣೆ, ತ್ಯಾಗ ಮತ್ತು ಸಹೋದರತ್ವದ ಸಂದೇಶ ಸಾರುವ ಮಹತ್ವದ ಹಬ್ಬವಾಗಿದ್ದು, ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ಬೆಳೆಸುವ ಹಬ್ಬವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಖಿಳರ್ ಜುಮ್ಮಾ ಮಸೀದಿ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಗೌರವ ಅಧ್ಯಕ್ಷ ಬಿ.ಎಚ್. ಮಹಮ್ಮದ್, ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಚ್. ರಝಾಕ್, ಕಾರ್ಯದರ್ಶಿಗಳಾದ ಹನೀಫ್ ವರ್ಷಾ ಹಾಗೂ ಮಹಮ್ಮದ್ ಕುದ್ರಡ್ಕ, ಕೋಶಾಧಿಕಾರಿಗಳಾದ ಫೈಝಲ್ ಐ.ಜೆ., ಮದರಸ ಸಮಿತಿ ಅಧ್ಯಕ್ಷರಾದ ಬಿ. ಶೇಕುಂಞ್ಞ, ಸಲಾತ್ ಕಮಿಟಿ ಅಧ್ಯಕ್ಷರಾದ ಹೈದರ್ ಬಿ.ಕೆ. ಸೇರಿದಂತೆ ಮಸೀದಿ ಧರ್ಮಗುರುಗಳು, ಜಮಾಅತ್ ಹಿರಿಯರು ಹಾಗೂ ಮಕ್ಕಳು ಉಪಸ್ಥಿತರಿದ್ದರು.

ಪ್ರಾರ್ಥನೆ ಬಳಿಕ ಜಮಾಅತ್ ಬಾಂಧವರು ಪರಸ್ಪರ ಈದ್ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಉದ್ಘಾಟನಾ ಸಮಾರಂಭ

Suddi Udaya

ಕಡಿರುದ್ಯಾವರದಲ್ಲಿ ಒಂಟಿಸಲಗ ದಾಳಿ : ಅಪಾರ ಕೃ‍ಷಿ ಹಾನಿ

Suddi Udaya

ಬಳಂಜ ದೇವಸ್ಥಾನದ ಜಾತ್ರ ಮಹೋತ್ಸವ ಸಂಪನ್ನ: ದೈವ ದೇವರ ಭೇಟಿ

Suddi Udaya

ಸ್ನೇಹ ಸಂಗಮ ಆಟೋ ಚಾಲಕರ ಮತ್ತು ಮಾಲಕರ ಸಂಘದ ವತಿಯಿಂದ ಸಂಘದ ಸದಸ್ಯರಿಗೆ ವೈದ್ಯಕೀಯ ನೆರವು

Suddi Udaya

ಕನ್ಯಾಡಿ ಸರ್ಕಾರಿ ಶಾಲೆಗೆ ರೂ. 1.65 ಲಕ್ಷ ವೆಚ್ಚದ ಸ್ಮಾರ್ಟ್ ಕ್ಲಾಸ್ ಹಸ್ತಾಂತರ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿಯಿಂದ ಪುಸ್ತಕ ವಿತರಣೆ

Suddi Udaya
error: Content is protected !!