24.5 C
ಪುತ್ತೂರು, ಬೆಳ್ತಂಗಡಿ
July 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಸಿದ್ಧವನ ಗುರುಕುಲದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರಿಗೆ ಪ್ರಶಿಕ್ಷಣ ಕಾರ್ಯಕ್ರಮ

ಉಜಿರೆ: ವಸತಿ ನಿಲಯಗಳು ವಿದ್ಯಾರ್ಥಿಗಳ ಮನೆ ಇದ್ದಂತೆ. ಇವುಗಳು ವಿದ್ಯಾರ್ಥಿಗಳಲ್ಲಿ ಶಿಸ್ತು ಹಾಗೂ ಸ್ವಾವಲಂಬನೆಯನ್ನು ಕಲಿಸುತ್ತವೆ. ಇಂತಹ ಪಾಠಗಳು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಬುನಾದಿ. ಸಿದ್ಧವನದ ಶಿಸ್ತು ಮತ್ತು ಪೂರಕ ವಾತಾವರಣ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿ ಎಂದು ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಂಯೋಜಕ ಪ್ರೊ ಎಸ್. ಎನ್ ಕಾಕತ್ಕರ್ ಹೇಳಿದರು.

ಇವರು ಮೇ 27 ರಂದು ಉಜಿರೆಯ ಸಿದ್ಧವನ ಗುರುಕುಲದಲ್ಲಿ ಪ್ರಥಮ ಪಿಯುಸಿಗೆ ದಾಖಲಾದ ವಿದ್ಯಾರ್ಥಿಗಳ ಪೋಷಕರಿಗೆ ಆಯೋಜಿಸಿದ ಪ್ರಶಿಕ್ಷಣ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಮತ್ತು ಪೋಷಕರನ್ನು ಉದ್ದೇಶಿಸಿ ಮಾತನಾಡಿದರು.

ಸಿದ್ಧವನ ಗುರುಕುಲವು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ತಾಣ. ಇಲ್ಲಿನ ವಾತಾವರಣ ವಿದ್ಯಾರ್ಥಿಗಳಲ್ಲಿ ಸಮಯಪ್ರಜ್ಞೆ ಹಾಗೂ ಜವಾಬ್ದಾರಿಯನ್ನು ಬೆಳೆಸುತ್ತದೆ. ಜೀವನ ಶಿಕ್ಷಣವನ್ನು ಕಲಿಸುವ ಸಿದ್ಧವನ ವಿದ್ಯಾರ್ಥಿಗಳ ನಡವಳಿಕೆ, ಹಾಗೂ ಶೈಕ್ಷಣಿಕ ಪ್ರಗತಿಯನ್ನು ಸಾಧಿಸಲು ದಾರಿದೀಪವಾಗಿದೆ ಎಂದು ಅವರು ಕಿವಿಮಾತು ಹೇಳಿದರು .

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ವಸತಿ ನಿಲಯಗಳ ಕಾರ್ಯ ನಿರ್ವಾಹಕ ಅಧಿಕಾರಿ ಪೂರಣ್ ವರ್ಮ ಮಾತನಾಡಿ, ಜೀವನ ಮೌಲ್ಯಗಳನ್ನು ರೂಢಿಸಿಕೊಳ್ಳುವಲ್ಲಿ ಸಿದ್ಧವನ ಗುರುಕುಲ ಪ್ರಮುಖ ಪಾತ್ರ ವಹಿಸುತ್ತದೆ. ಸ್ವಚ್ಛತೆಯ ಕಡೆ ಗಮನ ಹರಿಸಿ ನಿಗದಿತ ವೇಳಾಪಟ್ಟಿಯಂತೆ ಅಧ್ಯಯನದಲ್ಲಿ ತೊಡಗಿಕೊಂಡರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ತಿಳಿಸಿದರು.

ವೇದಿಕೆಯಲ್ಲಿ ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ವಸತಿ ನಿಲಯಗಳ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಯುವರಾಜ ಪೂವಣಿ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ಡಾ. ರಾಜೇಶ್ ಬಿ ಉಪಸ್ಥಿತರಿದ್ದು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದರು.

ಸಿದ್ಧವನ ಗುರುಕುಲದ ನಿಲಯ ಪಾಲಕ ಕೇಶವ ನಾಯಕ್ ಇವರು ಗುರುಕುಲದ ನೀತಿ ನಿಯಮಗಳ ಹಾಗೂ ಶಿಸ್ತು ಬದ್ಧ ಜೀವನ ಕ್ರಮದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಕನ್ನಡ ಭಾಷಾ ಪ್ರಾಧ್ಯಾಪಕ ಡಾ. ಮಹಾವೀರ ಜೈನ್ ಸ್ವಾಗತಿಸಿ, ಭೌತಶಾಸ್ತ್ರ ವಿಭಾಗದ ಉಪನ್ಯಾಸಕ ಲಕ್ಷ್ಮೀಶ ಭಟ್ ವಂದಿಸಿದರು. ನಿಲಯ ಪಾಲಕ ಕೇಶವ ನಾಯಕ್ ಕಾರ್ಯಕ್ರಮ ನಿರೂಪಿಸಿದರು.

Related posts

ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ: ಬಂದಾರು ಪೆಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ರಾಮತಾರಕ ಮಂತ್ರ ಜಪ, ಭಜನೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತಾ ತರಗತಿ ಪ್ರಾರಂಭ

Suddi Udaya

ಪುದುವೆಟ್ಟು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya

ಉಜಿರೆ: ‘ಎಕೊ-ವಿಶನ್ 2023’ ಅಂತರ್ ವಿಭಾಗೀಯ ಹಾಗೂ ಅಂತರ್ ತರಗತಿ ಸ್ಪರ್ಧೆ ಉದ್ಘಾಟನೆ

Suddi Udaya

ಧೀಮತಿ ಜೈನ ಮಹಿಳಾ ಸಮಾಜದ ವತಿಯಿಂದ ಧಾರ್ಮಿಕ ಸಂವಾದ ಕಾರ್ಯಕ್ರಮ

Suddi Udaya

ಹುಣ್ಸೆಕಟ್ಟೆ ಮತ್ತು ರೆಂಕೆದಗುತ್ತು ವ್ಯಾಪ್ತಿಯಲ್ಲಿ ಗುರು ಗಾಂಧಿ ಸಂವಾದ ಕಾರ್ಯಕ್ರಮ ಮತ್ತು ಕೋಟಿ ಚೆನ್ನಯ್ಯ ಕ್ರೀಡಾಕೂಟದ ಪೂರ್ವಭಾವಿ ಸಭೆ

Suddi Udaya
error: Content is protected !!